ಲಾಕ್ಡೌನ್: ದಿನಕ್ಕೊಂದು ಆದೇಶ-ಜನರಲ್ಲಿ ಗೊಂದಲ
ಸೋಮವಾರದಿಂದ ಗುರುವಾರದವರೆಗೆ ಬೆಳಗ್ಗೆ 8-12 ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ
Team Udayavani, May 31, 2021, 8:30 PM IST
ಜೀಯು, ಹೊನ್ನಾವರ
ಹೊನ್ನಾವರ: ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರ ಆದೇಶ ಒಂದಾದರೆ ಅದು ಜಾರಿಯಾಗುವಷ್ಟರಲ್ಲಿ ತಹಶೀಲ್ದಾರ್ ಆದೇಶ ಇನ್ನೊಂದು. ಯಾವುದನ್ನು ಪಾಲಿಸಬೇಕು ಎನ್ನುವುದು ಜನರಿಗೆ ಅರ್ಥವಾಗುತ್ತಿಲ್ಲ. ಕೋವಿಡ್ ಹೆಚ್ಚಿದ ಕಾರಣ ಈ ಕ್ರಮ ಕೈಗೊಂಡಿರುವುದಾಗಿ ತಹಶೀಲ್ದಾರ್ ವಿವೇಕ ಶೇಣಿ ಹೇಳುತ್ತಿದ್ದಾರೆ.
ಗ್ರಾಮಾಂತರದಲ್ಲಿ ಶೇ. 90ರಷ್ಟು ಜನ ಇದ್ದಾರೆ. ಮಳೆಗಾಲ ಜೂನ್ ಮೊದಲ ವಾರದಲ್ಲಿ ಆರಂಭವಾಗುವುದರಿಂದ ಪ್ರಕೃತಿ ಸಹಜ ಲಾಕ್ಡೌನ್ ಆರಂಭವಾಗಲಿದೆ. ಆದ್ದರಿಂದ ರೈತರು ಮತ್ತು ಗ್ರಾಮೀಣ ಜನ ಮಳೆಗಾಲಕ್ಕೆ ಸಂಬಂಧಿಸಿದ ಅಗತ್ಯ ವಸ್ತುಗಳ ಖರೀದಿಗೆ ಒಂದೇ ವಾರವಷ್ಟೇ ಉಳಿದಿರುವುದರಿಂದ ಸೋಮವಾರದಿಂದ ಗುರುವಾರದವರೆಗೆ ಬೆಳಗ್ಗೆ 8-12 ರವರೆಗೆ ಸಾಮಾನನ್ನು ಖರೀದಿಸಿ, ಮನೆಗೆ ತೆರಳಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲೆಯ ಶಾಸಕರ ಅನುಮೋದನೆಯೂ ಇತ್ತು. ಆದರೆ ತಹಶೀಲ್ದಾರ್ ವಿವೇಕ ಶೇಣಿÌ ವಿಡಿಯೋ ಹರಿಬಿಟ್ಟಿದ್ದು ಕೋವಿಡ್ ಹೆಚ್ಚುತ್ತಿರುವ ಕಾರಣ ಜಿಲ್ಲಾಧಿಕಾರಿಗಳು ನಮಗೆ ನೀಡಿದ ಅಧಿಕಾರದಂತೆ ಜೂ.7ರ ವರೆಗೆ ನಿರ್ಬಂಧವನ್ನು ಮುಂದುವರೆಸುತ್ತೇನೆ ಎಂದು ಹೇಳಿದ್ದಾರೆ.
ಜೂ.7ರ ನಂತರವೂ ತಿಂಗಳ ಕೊನೆಯ ವರೆಗೆ ಲಾಕ್ಡೌನ್ ಆಗಲಿದೆ ಎಂಬ ಸುದ್ದಿ ರಾಜ್ಯಮಟ್ಟದಲ್ಲಿದೆ. ಈ ರೀತಿ ಸತತವಾಗಿ ಬಂದ್ ಇಡುವುದು ವ್ಯಾವಹಾರಿಕವಲ್ಲ. ಇಂದಿನ ಆದೇಶ ಜನರಲ್ಲಿ ನಿರಾಸೆ ಮತ್ತು ಗೊಂದಲ ಉಂಟುಮಾಡಿದೆ. ಯಾರ ಆದೇಶ ಪಾಲಿಸಬೇಕು ಎಂದು ಜನ ಪ್ರಶ್ನಿಸುತ್ತಿದ್ದಾರೆ. ಇಂತಹ ಮಹತ್ವದ ಆದೇಶ ಹೊರಡಿಸುವಾಗ ಜನಪ್ರತಿನಿಧಿಗಳನ್ನು, ಮಾಧ್ಯಮದವರನ್ನು ಕರೆಯದೆ ಅಧಿಕಾರಿಗಳೇ ನಿರ್ಣಯ ತೆಗೆದುಕೊಳ್ಳುತ್ತಿರುವುದು ವಿಷಾದನೀಯ.
ಹೀಗೆ ದಿನಕ್ಕೆ ಒಬ್ಬೊಬ್ಬರ ಆದೇಶ ಒಂದೊಂದಾಗಿ ತಾಲೂಕು ಗೊಂದಲದಪುರವಾಗಿದೆ. ಜೂ.7ರ ನಂತರವೂ ಲಾಕ್ಡೌನ್ ಮುಂದುವರಿದರೆ ಹೇಗೆ ಬದುಕಬೇಕು ಎಂಬ ಪ್ರಶ್ನೆಗೆ ಜಿಲ್ಲೆಯ ಸಚಿವರು, ಜಿಲ್ಲಾಧಿಕಾರಿಗಳು ಉತ್ತರ ಹೇಳಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ