ಸಿಎಂ ಬದಲಾವಣೆ ಚರ್ಚೆ ನಡುವೆ ವಿಜಯೇಂದ್ರ ದಿಢೀರ್ ದೆಹಲಿ ಪ್ರಯಾಣ
Team Udayavani, Jun 1, 2021, 11:05 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಡುವೆಯೂ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಲೇ ಇದೆ. ಸಚಿವ ಸಿ.ಪಿ.ಯೋಗೇಶ್ವರ್ ದೆಹಲಿ ಭೇಟಿ ಬಳಿಕ ಚರ್ಚೆ ಮತ್ತೆ ಜೋರಾಗಿದ್ದು, ಈ ಮಧ್ಯೆ ಸಿಎಂ ಯಡಿಯೂರಪ್ಪ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಗೆ ತೆರಳಿದ್ದಾರೆ
ವಿಜಯೇಂದ್ರ ದೆಹಲಿ ಭೇಟಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ರಾಜಕೀಯ ಚಟುವಟಿಕೆಯಿಲ್ಲ, ಬೇರೆ ಕಾರಣಕ್ಕೆ ಬಂದಿದ್ದೇನೆ ಎಂದು ವಿಜಯೇಂದ್ರ ಹೇಳಿದರೂ, ಚರ್ಚೆಗಳು ಮಾತ್ರ ಆರಂಭವಾಗಿದೆ.
ಕೆಲ ದಿನಗಳ ಹಿಂದೆ ದೆಹಲಿಗೆ ಭೇಟಿ ನೀಡಿದ್ದ ಸಚಿವ ಯೋಗೇಶ್ವರ್, ನಂತರ ಇದು ಮೂರು ಪಕ್ಷಗಳ ಸರ್ಕಾರ ಎಂದಿದ್ದರು. ಅದಲ್ಲದೆ ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆಯೂ ಕಿಡಿಕಾರಿದ್ದರು. ಇದರ ಬಳಿಕ ಹಿರಿಯ ನಾಯಕರೆಲ್ಲಾ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಒಕ್ಕೊರಲಿನಿಂದ ಹೇಳಿಕೆ ನೀಡಿದ್ದರು. ಇದೇ ವೇಳೆ ಸುಮಾರು 60 ಕ್ಕೂ ಹೆಚ್ಚು ಶಾಸಕರು ಸಹಿ ಸಂಗ್ರಹಿಸಿ, ಯೋಗೇಶ್ವರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂಬ ಆಗ್ರಹವೂ ಕೇಳಿಬಂದಿತ್ತು.
ಇದನ್ನೂ ಓದಿ:ಪ್ರತಿಯೊಬ್ಬ ಅರ್ಹರಿಗೆ ಲಸಿಕೆ ನೀಡಲು ರಾಜ್ಯ ಸರಕಾರ ಬದ್ಧ: ಅಜಿತ್ ಪವಾರ್
ಈ ಮಧ್ಯೆ ವಿಜಯೇಂದ್ರ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿದ್ದು, ಹಲವು ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರನ್ನು ವಿಜಯೇಂದ್ರ ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಆದರೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಯಾವುದೇ ನಿಗದಿತ ರಾಜಕೀಯ ಭೇಟಿಯಲ್ಲ. ಸದ್ಯ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ನಡೆಯುತ್ತಿಲ್ಲ. ಬೇರೆ ಕಾರಣಗಳಿಗಾಗಿ ಬಂದಿದ್ದೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
MUST WATCH
ಹೊಸ ಸೇರ್ಪಡೆ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ