ಬ್ಲ್ಯಾಕ್‌ ಫಂಗಸ್‌ ತಡೆಗೆ ಜಾಗೃತಿ ವಹಿಸಿ


Team Udayavani, Jun 1, 2021, 9:32 PM IST

b್ನದಹ್ಬನದಜ್ಹಬ

ಇಂಡಿ: ಕೋವಿಡ್‌-19 ಎರಡನೇ ಅಲೆಯಲ್ಲಿ ಏಪ್ರಿಲ್‌ ಮತ್ತು ಮೇ ತಿಂಗಳು ಕರ್ನಾಟಕ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸಾವು ನೋವುಗಳು ಸಂಭವಿಸಿ ಅನೇಕ ಕುಟುಂಬಗಳು ನಿರಾಶ್ರಿತವಾಗಿವೆ. ಕೋವಿಡ್‌ ಹತೋಟಿಗೆ ತರುವ ಸದುದ್ದೇಶದಿಂದ ಇಂಡಿ ಮತಕ್ಷೇತ್ರದಲ್ಲಿ ವೈದ್ಯರ ನಡಿಗೆ ಹಳ್ಳಿ ಕಡೆಗೆ ಎಂಬ ವಿನೂತ ಕಾರ್ಯಕ್ರಮದ ಮೂಲಕ ಜಾಗೃತಿ ಮತ್ತು ಚಿಕಿತ್ಸೆ ನೀಡಲಾಗುತ್ತದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಸೋಮವಾರ ತಾಲೂಕಿನ ತಡವಲಗಾ ಗ್ರಾಮದ ಗ್ರಾಪಂ ಆವರಣದಲ್ಲಿ ಹಮ್ಮಿಕೊಂಡಿದ್ದ ವೈದ್ಯರ ನಡೆಗೆ ಹಳ್ಳಿ ಕಡೆಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರಕಾರಗಳು ನಿರಾಶ್ರಿತರಿಗೆ ಆಸರೆ ನೀಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕಳೆದ ವರ್ಷ ಕೊರೊನಾ ಮೊದಲ ಅಲೆಯಲ್ಲಿ ಹಿರಿಯರಿಗೆ ತೊಂದರೆಯಾಗಿತ್ತು. ಎರಡನೇ ಅಲೆಯಲ್ಲಿ ಹಿರಿಯರು ಮತ್ತು ಯುವ ಜನಾಂಗದಲ್ಲಿ ಸಾಕಷ್ಟು ಜೀವಗಳನ್ನು ಕಳೆದುಕೊಂಡಿದ್ದೇವೆ.

ತಜ್ಞರು ಇನ್ನೂ ಮೂರನೇ ಅಲೆ ಬರುತ್ತದೆ ಎಂದು ಎಚ್ಚರಿಸಿದ್ದು ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ. ಎರಡನೇ ಅಲೆ ನಿಯಂತ್ರಣದಲ್ಲಿ ವಿಫಲವಾದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮೂರನೇ ಅಲೆಗಾಗಿ ಮಂಜಾಗ್ರತಾ ಕ್ರಮ ಕೈಗೊಳ್ಳುತ್ತಿರುವುದು ಶ್ಲಾಘನೀಯ ಎಂದರು. ನಮ್ಮ ದೇಶದಲ್ಲಿ ವೈದ್ಯಕೀಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಯಾವ ಪ್ರಮಾಣದಲ್ಲಿ ಅನುದಾನ ಮೀಸಲಿಡಬೇಕಿತ್ತೋ ಅದನ್ನು ಇಡದಿರುವುದರಿಂದ ಸಾವು ನೋವು ಸಂಭವಿಸಿದೆ. ಕೊರೋನಾದಿಂದ ಗುಣಮುಖರಾಗಿದ್ದಾರೆ ಎನ್ನುವಷ್ಟರಲ್ಲಿ ಸದ್ಯ ಬ್ಯ್ಲಾಕ್‌ ಫಂಗಸ್‌ ರೋಗ ಬಂದಿದ್ದು ಇದರ ಬಗ್ಗೆ ಜಾಗೃತಿ ಇರಲಿ ಎಂದು ತಿಳಿಸಿದರು. ಜಿಲ್ಲೆಯ ಜನಪ್ರತಿನಿಧಿ ಗಳೆಲ್ಲರೂ ಬ್ಲಾಕ್‌ ಫಂಗಸ್‌ ಮತ್ತು ಕೋವಿಡ್‌ ವ್ಯಾಕ್ಸಿನ್‌ ಒದಗಿಸುವಂತೆ ಮುಖ್ಯಮಂತ್ರಿಗಳ ಗಮನ ಸೆಳೆದಿದ್ದೇವೆ.

ರಾಜ್ಯದಲ್ಲಿ ಆಕ್ಸಿಜನ್‌ ಕೊರತೆಯಿಂದ ಸಾಕಷ್ಟು ಸಾವುಗಳು ಸಂಭವಿಸಿವೆ. ಇದನ್ನು ಒದಗಿಸಬೇಕಾಗಿರುವುದು ಸರಕಾರದ ಕರ್ತವ್ಯ. ಸುದೈವಕ್ಕೆ ನಮ್ಮ ರಾಜ್ಯದಲ್ಲಿ ಆಕ್ಸಿಜನ್‌ ಪ್ಲಾಂಟ್‌ಗಳನ್ನು ಸ್ಥಾಪಿಸಲಾಗುತ್ತಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ಬಸವನಬಾಗೇವಾಡಿಯಲ್ಲಿ ಪ್ಲಾಂಟ್‌ ಮಾಡಲಾಗುತ್ತಿದೆ. ನಮ್ಮ ಇಂಡಿಯಲ್ಲೂ ಕೂಡಾ ಅಜೀಂ ಪ್ರೇಮಜಿ ಆಕ್ಸಿಜನ್‌ ಪ್ಲಾಂಟ್‌ ಮಾಡಲು ಸಹಾಯ ಮಾಡುತ್ತಿದ್ದಾರೆ.

ಇಂತಹ ಹೃದಯವಂತರು ನಮ್ಮ ದೇಶದಲ್ಲಿ ಇದ್ದಾರೆ. ಕಷ್ಟದ ಸಂದರ್ಭದಲ್ಲಿ ಅಜೀಂ ಪ್ರೇಮಜಿ, ಇನ್ಫೋಸಿಸ್‌ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ಅನೇಕ ಮಠ ಮಾನ್ಯಗಳು, ಉದ್ದಿಮೆದಾರರು, ಸಹಾಯ ಸಹಕಾರ ಮಾಡುತ್ತಿದ್ದಾರೆ. ನಿಜವಾದ ದೇವರನ್ನು ಇವರ ಸ್ವರೂಪದಲ್ಲಿ ಕಾಣುತ್ತಿದ್ದೇವೆ. ಯಾರು ಸಹಾಯ ಸಹಕಾರ ಮಾಡಿದ್ದಾರೆ ಅವರನ್ನು ಸ್ಮರಿಸುವುದು ಮಾನವೀಯ ಮೌಲ್ಯವಾಗಿದೆ ಎಂದರು. ಜಿಲ್ಲಾ ಆರೋಗ್ಯಾ ಧಿಕಾರಿ ಡಾ| ಮಹೇಂದ್ರ ಕಾಪ್ಸೆ, ತಾಲೂಕು ಆರೋಗ್ಯಾಧಿಕಾರಿ ಡಾ| ಅರ್ಚನಾ ಕುಲಕರ್ಣಿ, ಡಾ| ಆಕಾಶ, ತಮ್ಮಣ್ಣ ಪೂಜಾರಿ, ಅಶೋಕ ಮಿರ್ಜಿ, ಸೋಮಶೇಖರ ಬ್ಯಾಳಿ, ತಹಶೀಲ್ದಾರ್‌ ಚಿದಂಬರ ಕುಲಕರ್ಣಿ, ಗುತ್ತಿಗೆದಾರ ಚಂದ್ರಶೇಖರ ರೂಗಿ, ಬಸವರಾಜ ಇಂಡಿ, ಧರ್ಮರಾಜ ವಾಲೀಕಾರ, ಅವಿನಾಶ ಬಗಲಿ, ಆಶಾ ಕಾರ್ಯಕರ್ತೆಯರು ಇದ್ದರು.

 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.