ಪಾರ್ಸಲ್ಗೆ ಅವಕಾಶ; ಸಮಯಮಿತಿ ವಿಪರ್ಯಾಸ
ಹೋಟೆಲ್ಗಳಿಗೆ ಇಬ್ಬಂದಿ, ಎರಡೇ ತಾಸಲ್ಲಿ ನಿರ್ವಹಣೆ ಸವಾಲು, ಸಡಿಲಿಕೆ ಯಾರಿಗೆ? ಯಾವುದಕ್ಕೆ?
Team Udayavani, Jun 2, 2021, 5:10 PM IST
ವರದಿ:ಬಸವರಾಜ ಹೂಗಾರ
ಹುಬ್ಬಳ್ಳಿ: ಕರ್ಫ್ಯೂ ನಿಯಮಗಳನ್ನು ಸಡಿಲಗೊಳಿಸಿರುವ ಜಿಲ್ಲಾಧಿಕಾರಿಗಳ ಆದೇಶ ಹಲವರಲ್ಲಿ ಗೊಂದಲವನ್ನುಂಟು ಮಾಡಿಕೊಟ್ಟಿದೆ.
ಜಿಲ್ಲೆಯಲ್ಲಿ ಕಠಿಣ ಕರ್ಫ್ಯೂ ಜಾರಿ ಸಂದರ್ಭದಲ್ಲಿ ತರಕಾರಿ, ಆಹಾರ ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳ ಖರೀದಿ-ಮಾರಾಟಕ್ಕೆ ಕೆಲಹೊತ್ತಿನ ಸಡಿಲಿಕೆ ಹೊರತುಪಡಿಸಿ ಇನ್ನೆಲ್ಲವಕ್ಕೂ ನಿರ್ಬಂಧ ಹೇರಲಾಗಿತ್ತು. ಕೆಲ ದಿನಗಳ ನಂತರ ಜನಪ್ರತಿನಿಧಿ ಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಒತ್ತಡ ಹೆಚ್ಚಾದಂತೆ ಜೂ.1ರಿಂದ ಕೆಲ ನಿರ್ಬಂಧಗಳನ್ನು ಸಡಿಲಗೊಳಿಸಿ ಆದೇಶ ಜಾರಿ ಮಾಡಲಾಗಿದೆ. ಆದರೆ ಈ ಸಡಿಲಿಕೆ ಯಾರಿಗೆ? ಯಾವುದಕ್ಕೆ? ಎಂಬುದು ತಿಳಿಯದಂತಾಗಿದೆ.
ಜೂ. 1ರಿಂದ ಹೋಟೆಲ್ ಪಾರ್ಸಲ್ಗೆ ಅನುವು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಬಹುತೇಕ ಹೋಟೆಲ್ಗಳು ಮಂಗಳವಾರ ಕಾರ್ಯನಿರ್ವಹಿಸದಿರುವುದು ಕಂಡುಬಂದಿತು. ಆದೇಶದ ಪ್ರಕಾರ ಬೆಳಗ್ಗೆ 6ರಿಂದ 8 ಗಂಟೆವರೆಗೆ ಹೋಟೆಲ್ಗಳು ಪಾರ್ಸಲ್ ನೀಡಬಹುದು. ನಂತರ ಸಂಜೆ 4 ಗಂಟೆವರೆಗೆ ಮನೆಗಳಿಗೆ ಪೂರೈಕೆಗೆ ಅವಕಾಶ ಕಲ್ಪಿಸಲಾಗಿದೆ. ಕೇವಲ ಎರಡು ತಾಸುಗಳಲ್ಲಿ ತಿಂಡಿ-ತಿನಿಸು ತಯಾರಿಸಿ ಪಾರ್ಸಲ್ ನೀಡುವುದು ಕಷ್ಟಸಾಧ್ಯ ಎಂಬ ಅಭಿಪ್ರಾಯ ಹಲವು ಹೋಟೆಲ್ ಮಾಲೀಕರದ್ದಾಗಿದೆ.
ಮನೆಗಳಿಗೆ ತಿಂಡಿ-ತಿನಿಸು ಪೂರೈಕೆ ಅವಕಾಶ ಎರಡು ಪ್ರತಿಷ್ಟಿತ ಸಂಸ್ಥೆಗಳಿಗೆ ನೀಡಲಾಗಿದೆ. ವಿಪರ್ಯಾಸವೆಂದರೆ ಈ ಎರಡು ಕಂಪನಿಗಳಿಗೆ ಹುಬ್ಬಳ್ಳಿಯಲ್ಲಿನ ಬೆರಳೆಣಿಕೆಯಷ್ಟು ಹೋಟೆಲ್ಗಳು ನೋಂದಾಯಿತಗೊಂಡಿವೆ. ಇನ್ನುಳಿದ ಯಾವುದೇ ಹೋಟೆಲ್ಗಳಿಗೆ ಇದರಿಂದ ಪ್ರಯೋಜನವಿಲ್ಲ. ಒಂದೆಡೆ ಜನಪ್ರತಿನಿ ಧಿಗಳು ಹಾಗೂ ಜಿಲ್ಲಾಡಳಿತ ಹೋಟೆಲ್ ಉದ್ಯಮಕ್ಕೆ ನೆರವಾಗಲು ಆದೇಶ ಮಾರ್ಪಾಡು ಮಾಡಲಾಗಿದೆ ಎಂದು ಹೇಳಿಕೊಳ್ಳುತ್ತಿದ್ದರೆ, ಕೇವಲ ಎರಡು ಗಂಟೆಗಳ ಕಾಲ ಪಾರ್ಸಲ್ಗೆ ಅನುವು ಮಾಡಿ, ಸಂಜೆ 4 ಗಂಟೆ ನಂತರ ಮನೆಗಳಿಗೆ ಪೂರೈಕೆಗೆ ಅವಕಾಶ ಮಾಡಿಕೊಟ್ಟಿರುವುದು ಹೋಟೆಲ್ ಉದ್ಯಮಿಗಳಿಗೆ ತಲೆಕೆಡಿಸಿಕೊಳ್ಳುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು