ಜೂ. 15ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: ದ.ಕ.ದಲ್ಲಿ ಸಿದ್ಧತೆ


Team Udayavani, Jun 4, 2021, 5:00 AM IST

ಜೂ. 15ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: ದ.ಕ.ದಲ್ಲಿ ಸಿದ್ಧತೆ

ಮಹಾನಗರ: ಕೋವಿಡ್ ಆತಂಕದ ಮಧ್ಯೆಯೇ ಮುಂದಿನ ಸಾಲಿನ (2021-22)ಶೈಕ್ಷಣಿಕ   ಚಟುವಟಿಕೆಗಳು  ಜೂ. 15ರಿಂದ ಆರಂಭವಾಗುವ ನಿರೀಕ್ಷೆಯಿದ್ದು, ದ.ಕ. ಜಿಲ್ಲೆಯ ಶಾಲೆಗಳಲ್ಲಿಯೂ ಈ ಬಗ್ಗೆ ಸಿದ್ಧತೆ ಆರಂಭಿಸಲಾಗಿದೆ.

ರಾಜ್ಯ ಪಠ್ಯಕ್ರಮ ಹೊಂದಿರುವ ಶಿಕ್ಷಣ ಸಂಸ್ಥೆಗಳ ಪ್ರೌಢಶಾಲೆಯು ಜೂ. 1ರಿಂದಲೇ ಆರಂಭವಾಗುವ ಬಗ್ಗೆ ಈ ಹಿಂದೆ ಸರಕಾರ ತಿಳಿಸಿತ್ತು. ಆದರೆ ಮಕ್ಕಳಿಗೆ ಇದೀಗ ಬೇಸಗೆ ರಜೆಯನ್ನು ಮತ್ತಷ್ಟು ಮುಂದುವರಿಸಿರುವ ಕಾರಣದಿಂದ ಪ್ರೌಢಶಾಲೆಗಳು ಜೂ. 15ರಿಂದ ಪ್ರಾರಂಭವಾಗಲಿವೆ. ಹಾಗೂ ಈ ಹಿಂದೆಯೇ ಗೊತ್ತುಪಡಿಸಿದಂತೆ ಪ್ರಾಥಮಿಕ ಶಾಲಾ ತರಗತಿಗಳು ಜೂ. 15ರಿಂದ ಆರಂಭ ವಾಗಲಿವೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಈ ಮಧ್ಯೆ ಕೇಂದ್ರೀಯ ಪಠ್ಯಕ್ರಮ ಹೊಂದಿರುವ ಶಿಕ್ಷಣ ಸಂಸ್ಥೆಗಳಲ್ಲಿ ಜೂ. 15ರಿಂದ ತರಗತಿಗಳು ಆರಂಭವಾಗಲಿವೆ. ಈ ಬಗ್ಗೆ ಸಂಬಂಧಪಟ್ಟ ಆಯಾ ಶೈಕ್ಷಣಿಕ ಸಂಸ್ಥೆಗಳಿಂದಲೇ ವಿದ್ಯಾರ್ಥಿಗಳ ಹೆತ್ತವರಿಗೆ ಸದ್ಯಕ್ಕೆ ಮಾಹಿತಿ ಕಳುಹಿಸಲಾಗುತ್ತಿದೆ. ಜತೆಗೆ, ಶುಲ್ಕ ಪಾವತಿಸುವ ಬಗ್ಗೆಯೂ ಸೂಚನೆ ನೀಡಲಾಗಿದೆ. ಮಂಗಳೂರು ಸಹಿತ ದ.ಕ. ಜಿಲ್ಲೆಯಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳು ಈ ಕ್ರಮದಲ್ಲಿ ಬೋಧನೆ ನಡೆಸುತ್ತಿವೆ.

ಆಫ್‌ಲೈನ್‌ ಅನುಮಾನ:

ಸದ್ಯದ ಮಾಹಿತಿ ಪ್ರಕಾರ ಜೂ. 15ರಿಂದ ಶಾಲಾರಂಭವಾದರೂ ಭೌತಿಕ ತರಗತಿಗಳು ನಡೆಯುವುದು ಬಹುತೇಕ ಅನುಮಾನ. ಪ್ರಸ್ತುತ ಕೊರೊನಾ ಪ್ರಕರಣಗಳ ಸಂಖ್ಯೆ ಅಧಿಕವಿರುವ ಸಮಯದಲ್ಲಿ ವಿದ್ಯಾರ್ಥಿ ಗಳನ್ನು ತರಗತಿಗೆ ಕರೆ ತರುವುದು ಅಪಾಯಕಾರಿ. ಹೀಗಾಗಿ ಕೆಲವು ಸಮಯ ಆನ್‌ಲೈನ್‌ ತರಗತಿಯೇ ನಡೆಯುವುದು ಬಹುತೇಕ ಅಂತಿಮವಾಗಲಿದೆ. ಈ ಮಧ್ಯೆ ಮುಂದಿನ ಒಂದು ವಾರದಲ್ಲಿ ಕೊರೊನಾ ಸಂಖ್ಯೆ ಮತ್ತಷ್ಟು ಏರಿಕೆಯಾದರೆ ಶೈಕ್ಷಣಿಕ ವರ್ಷವನ್ನೇ ಜೂ. 15ರ ಬದಲು ಜುಲೈ 1ಕ್ಕೆ ಮುಂದೂಡುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

ಕಾಲೇಜು ಮಕ್ಕಳಿಗೆ ಲಸಿಕೆ ತೆಗೆದುಕೊಂಡರೆ ಮಾತ್ರ ತರಗತಿ?:

18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಿಕೆ ಸದ್ಯ ನಡೆಯುತ್ತಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಕಾಲೇಜು ಆರಂಭವಾಗಿ ವಿದ್ಯಾರ್ಥಿಗಳು ಭೌತಿಕವಾಗಿ ತರಗತಿಗೆ ಬರಬೇಕಾದರೆ ಎರಡೂ ಹಂತದ ಲಸಿಕೆ ಪಡೆದುಕೊಳ್ಳುವುದು ಕಡ್ಡಾಯ ಎನ್ನುವ ನಿಯಮ ಕೂಡ ಜಾರಿಗೆ ಬರಬಹುದು ಎನ್ನಲಾಗುತ್ತಿದೆ.

ಈ ಬಗ್ಗೆ “ಉದಯವಾಣಿ ಸುದಿನ’ ಜತೆಗೆ ಮಾತನಾಡಿದ ಪ್ರೊ| ಪಿ.ಎಸ್‌. ಯಡಪಡಿತ್ತಾಯ ಅವರು, ಕಾಲೇಜು ವಿದ್ಯಾರ್ಥಿಗಳು ಲಸಿಕೆ ಪಡೆದ ಅನಂತರವಷ್ಟೇ ತರಗತಿಗೆ ಆಗಮಿಸಬೇಕು ಎಂಬ ನಿಯಮ ಜಾರಿಗೊಳಿಸಿದರೆ ಬಹಳಷ್ಟು ಲಾಭದಾಯಕವಾಗಬಹುದು. ಲಸಿಕೆ ವಿದ್ಯಾರ್ಥಿಗಳಿಗೆ ಸಂಜೀವಿನಿ ಯಾಗಬಹುದು ಎಂದಿದ್ದಾರೆ.

ಜೂ. 15ರಿಂದ  ಶೈಕ್ಷಣಿಕ ವರ್ಷ : 2021-22ನೇ ಸಾಲಿನ ಪ್ರೌಢಶಾಲೆಗಳ 8, 9, 10ನೇ ತರಗತಿಗಳ ಶೈಕ್ಷಣಿಕ ವರ್ಷ ಜೂ. 15ರಿಂದ ಪ್ರಾರಂಭವಾಗಲಿದೆ. ಜತೆಗೆ, ಪ್ರಾಥಮಿಕ ಶಾಲೆಯ ಶೈಕ್ಷಣಿಕ ವರ್ಷ ಕೂಡ ಇದೇ ಸಮಯದಲ್ಲಿಯೇ ಆರಂಭವಾಗುತ್ತದೆ ಎಂದು ಇಲಾಖೆಯಿಂದ ಮಾಹಿತಿ ಲಭಿಸಿದೆ. ಭೌತಿಕ ಅಥವಾ ಆನ್‌ಲೈನ್‌ ತರಗತಿ ಮಾಡುವ ಬಗ್ಗೆ ಸರಕಾರ ಒಂದೆರಡು ದಿನದಲ್ಲಿ ತೀರ್ಮಾನ ಕೈಗೊಳ್ಳಲಿದೆ. –ಮಲ್ಲೇಸ್ವಾಮಿ, ವಿದ್ಯಾಂಗ ಉಪನಿರ್ದೇಶಕರು, ದ.ಕ.

ಮಂಗಳೂರು ವಿ.ವಿ. ವ್ಯಾಪ್ತಿಯ ಕಾಲೇಜಿನ ಕಳೆದ ಸಾಲಿನ ಕೆಲವು ವಿಷಯಗಳ ಪರೀಕ್ಷೆಗಳು ಬಾಕಿಯಿವೆ. ಅದನ್ನು ಮೊದಲು ನಡೆಸಬೇಕಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಕುರಿತಂತೆ ಸರಕಾರದ ನಿರ್ಧಾರ ಆದ ಅನಂತರವಷ್ಟೇ ಕಾಲೇಜು ಪ್ರವೇಶಾತಿ ಆರಂಭಿಸಬೇಕಾಗುತ್ತದೆ. ಹೀಗಾಗಿ ಅಲ್ಲಿಯವರೆಗೆ ಕಾಲೇಜು ಆರಂಭದ ಬಗ್ಗೆ ತೀರ್ಮಾನ ಆಗಿಲ್ಲ.-ಪ್ರೊ| ಪಿ.ಎಸ್‌. ಯಡಪಡಿತ್ತಾಯ, ಕುಲಪತಿಗಳು, ಮಂಗಳೂರು ವಿ.ವಿ.

ತರಗತಿಗೆ ಹೋಗಲು ಆಸೆ ಆಗುತ್ತಿದೆ. ಸ್ನೇಹಿತರ ಜತೆಗೆ ಸೇರದೆ ತುಂಬಾ ಸಮಯವೇ ಆಗಿದೆ. ಆದರೆ ಕೊರೊನಾ ಕಾರಣದಿಂದ ಯಾವುದೂ ಆಗುತ್ತಿಲ್ಲ. ಹೆತ್ತವರು ಏನು ಹೇಳುತ್ತಾರೆಯೋ ಹಾಗೆ ಮಾಡುವುದು. ಯಶಸ್‌, 4ನೇ ತರಗತಿ ವಿದ್ಯಾರ್ಥಿ

ಮಗುವಿನ ಭವಿಷ್ಯ ಮುಖ್ಯ  : ಮಕ್ಕಳನ್ನು ಈಗ ಶಾಲೆಗೆ ಕಳುಹಿಸುವುದು ತುಂಬ ಕಷ್ಟದ ಕೆಲಸ. ಕೊರೊನಾ ಆತಂಕ ಇನ್ನೂ ದೂರವಾಗದೆ ತರಗತಿ ಆರಂಭಿ ಸುವುದು ಸರಿಯಲ್ಲ. ಶಿಕ್ಷಣಕ್ಕೂ ಮೊದಲು ಮಗುವಿನ ಭವಿಷ್ಯ ಮುಖ್ಯ. ಕಿಶೋರ್‌ ಕೋಟ್ಯಾನ್‌, ಹೆತ್ತವರು

 

 –ದಿನೇಶ್‌ ಇರಾ

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.