ಪರಿಹಾರಕ್ಕೆ ನಿಯಮಗಳೇ ತೊಡಕು

ಆಧಾರ್‌ ಗೆ ಮೊಬೈಲ್‌ ಸಂಖ್ಯೆ ಲಿಂಕ್‌ ಇಲ್ಲದವರಿಗೆ ಪ್ಯಾಕೇಜ್‌ ಸಿಗದ ಭೀತಿ | ಅರ್ಜಿ ಸಲ್ಲಿಕೆಗೆ ನಾಳೆ ಕೊನೆ ದಿನ

Team Udayavani, Jun 4, 2021, 7:18 PM IST

3gld4

ವರದಿ: ಮಲ್ಲಿಕಾರ್ಜುನ ಕಲಕೇರಿ

ಗುಳೇದಗುಡ್ಡ: ಕೊರೊನಾದಿಂದ ಅತಂತ್ರರಾಗಿರುವ ಕಲಾವಿದರಿಗೆ ಆಸರೆಯಾಗಲೆಂದು ಸರಕಾರ 3 ಸಾವಿರ ರೂ. ಸಹಾಯಧನ ನೀಡಲು ಮುಂದಾಗಿದೆಯೇನೋ ನಿಜ ಆದರೆ ಸರಕಾರದ ನಿಯಮಗಳೇ ತೊಡಕಾಗಿದ್ದು, ಸರಕಾರದ ಪ್ಯಾಕೇಜ್‌ ಸಿಗುವುದೇ ಕಷ್ಟವಾಗಿದೆ.

ಸಹಾಯಧನ ಪಡೆಯಲು ಕಡ್ಡಾಯವಾಗಿ ಆಧಾರ್‌ಗೆ ಮೊಬೈಲ್‌ ಜೋಡಣೆಯಾಗಿರಬೇಕು. ಜಿಲ್ಲೆಯಲ್ಲಿ ಅದೆಷ್ಟೋ ಕಲಾವಿದರ ಆಧಾರ್‌ ಗೆ ಮೊಬೈಲ್‌ ಸಂಖ್ಯೆ ಲಿಂಕ್‌ ಆಗಿಲ್ಲ. ಇದರಿಂದ ಕಲಾವಿದರಿಗೆ ಸರಕಾರದ ಸಹಾಯಧನ ಕೈತಪ್ಪುವ ಸಾಧ್ಯತೆಗಳು ದಟ್ಟವಾಗಿದೆ. ಸರಕಾರ ಕಲಾವಿದರ ಮಾಸಾಶನ ಪಡೆಯಲು ಸೇವಾಸಿಂಧು ಮೂಲಕ ಅರ್ಜಿ ಆಹ್ವಾನಿಸಿದೆ. ಆದರೆ ಈ ಅರ್ಜಿ ಸಲ್ಲಿಸುವಾಗ ಆಧಾರ್‌ಗೆ ಲಿಂಕ್‌ ಇರುವ ಮೊಬೈಲ್‌ ಸಂಖ್ಯೆ ಓಟಿಪಿ ಹೋಗುತ್ತದೆ. ಆ ನಂತರವೇ ಅರ್ಜಿ ಸ್ವೀಕೃತವಾಗುತ್ತದೆ. ಅನೇಕ ಕಲಾವಿದರ ಮೊಬೈಲ್‌ ಸಂಖ್ಯೆ ಆಧಾರ್‌ಗೆ ಲಿಂಕ್‌ ಇಲ್ಲದೇ ಇರುವುದರಿಂದ ನಾಟಕ ಪ್ರದರ್ಶನಗಳು ಇಲ್ಲದೇ ಕೈ ಕೂಡ ಬರಿದಾಗಿದ್ದು, ಸರಕಾರದ ಈ ನಿಯಮ ಕಲಾವಿದರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ.

ಕಲಾಗ್ರಾಮ ಹಂಸನೂರ: ಹಂಸನೂರು ಗ್ರಾಮ ಕಲಾವಿದರಿಗೆ ಹೆಸರಾದ ಗ್ರಾಮ. ವೃತ್ತಿ-ಹವ್ಯಾಸಿ ರಂಗಭೂಮಿ ಕಲಾವಿದರು ಇಲ್ಲಿದ್ದು, ರಂಗಭೂಮಿ ಕಲೆಯನ್ನೆ ಬದುಕಾಗಿಸಿಕೊಂಡ ಅನೇಕ ಕುಟುಂಬಗಳಿವೆ. ಈ ಎಲ್ಲ ಕುಟುಂಬಗಳು ಲಾಕ್‌ ಡೌನ್‌ನಿಂದ ನಲುಗಿ ಹೋಗಿವೆ. ಇಲ್ಲಿರುವ ಅನೇಕ ಕಲಾವಿದರ ಆಧಾರ್‌ಗೆ ಮೊಬೈಲ್‌ ಸಂಖ್ಯೆ ಲಿಂಕ್‌ ಇಲ್ಲ. ಮೊಬೈಲ್‌ ಸಂಖ್ಯೆ ಆಧಾರ್‌ ಕಾರ್ಡ್ ಜೋಡಿಸಬೇಕಿದೆ. ಆದರೆ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಲು ಜೂನ್‌ 5 ಕೊನೆಯ ದಿನವಾಗಿದ್ದರಿಂದ ಕಲಾವಿದರು ಸರ್ಕಾರ ಯೋಜನೆ ಲಾಭ ಪಡೆಯಲು ಕಷ್ಟಸಾಧ್ಯವಾಗಿದೆ. ಆಧಾರ್‌ಗೆ ಮೊಬೈಲ್‌ ಸಂಖ್ಯೆ ಇಲ್ಲದೇ ಇರುವುದರಿಂದ ಸರಕಾರದ ಸಹಾಯಧನ ಪಡೆಯಲು ಕಲಾವಿದರು ವಂಚಿತರಾಗಿದ್ದು, ಗ್ರಾಮಕ್ಕೆ ಅಧಿ ಕಾರಿಗಳು ಬಂದು ಕಲಾವಿದರ ಮಾಹಿತಿ ಪಡೆದು ಆರ್ಥಿಕ ಸಹಾಯ ನೀಡಬೇಕು. ಕಲಾವಿದರಿಗೆ ಸರಕಾರ ನೀಡುವ ಕೇವಲ 3 ಸಾವಿರ ರೂಪಾಯಿ ಸಾಲಲ್ಲ. ಅದನ್ನು ಹೆಚ್ಚಿಸಬೇಕು.

ಕಾರ್ಮಿಕರಿಗೆ ನೀಡಿರುವಂತೆ ಕಲಾವಿದರಿಗೆ ಕಲಾವಿದರ ಗುರುತಿನ ಚೀಟಿ ನೀಡಬೇಕೆಂದು ಕಲಾವಿದರಾದ ಗೀತಾ ಚಿಂತಾಕಲ್ಲ, ಮಂಜುಳಾ ಚಿಂತಾಕಲ್ಲ, ಇಂದಿರಾ ಚಿಮ್ಮಲ, ನಾಗರತ್ನ ಜಮಖಂಡಿ, ರೇಖಾ ಕಮಲ, ಜಯಶ್ರೀ ಪೂಜಾರ, ಶಾರದಾ ಕಮಲ, ಶಾಮಲಾ ಜಮಖಂಡಿ, ಪ್ರಿಯಾ ಚಿಮ್ಮಲ, ರೇಣುಕಾ ಚಿಮ್ಮಲ, ಶೋಭಾ ಚಿಮ್ಮಲ, ಸೀತಾ ಚಿಮ್ಮಲ, ಶೃತಿ ಜಮಖಂಡಿ, ಮಧುರಾ ಚಿಮ್ಮಲ, ಆರತಿ ಚಿಮ್ಮಲ, ಶಾಂತವ್ವ ಜಮಖಂಡಿ, ಭಾರತಿ ಚಿಮ್ಮಲ, ಬಂಗಾರೆವ್ವ ಚಿಮ್ಮಲ್‌, ಶಾಂತವ್ವ ಚಿಮ್ಮಲ, ಪರಶುರಾಮ ಹುದ್ದಾರ, ಮನೋಹರ ಚಿಮ್ಮಲ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.