ಘನತ್ಯಾಜ್ಯ ಘಟಕದಲ್ಲಿ ಆರದ ಬೆಂಕಿ; ತಪ್ಪದ ಸಮಸ್ಯೆ


Team Udayavani, Jun 4, 2021, 10:43 PM IST

4-15

ಸಿರುಗುಪ್ಪ: ನಗರದ ಹೊರ ವಲಯದಲ್ಲಿರುವ ಘನತ್ಯಾಜ್ಯ ವಿಲೇವಾರಿ ಸಂಗ್ರಹ ಘಟಕದಲ್ಲಿ ಕಸಕ್ಕೆ ಬೆಂಕಿಬಿದ್ದು ಎರಡು ತಿಂಗಳಾದರೂ ಬೆಂಕಿ ನಂದಿಸಲು ನಗರಸಭೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಕಾರಣ ಈ ಘಟಕದ ಸುತ್ತಮುತ್ತಲಿನ ನಿವಾಸಿಗಳು ವಿವಿಧ ಸಮಸ್ಯೆ ಎದುರಿಸುವಂತಾಗಿದೆ.

ನಗರಸಭೆ ಸಿಬ್ಬಂದಿ ಬೆಂಕಿಯನ್ನು ನಂದಿಸುವ ಕಾರ್ಯಕ್ಕೆ ಮುಂದಾಗದೇ ಇರುವುದರಿಂದ ಸುತ್ತಮುತ್ತಲಿನ ನಿವಾಸಿಗಳು ಘನತ್ಯಾಜ್ಯ ಘಟದಲ್ಲಿ ಹತ್ತಿರುವ ಬೆಂಕಿಯಿಂದ ಬರುತ್ತಿರುವ ಕೆಟ್ಟವಾಸನೆ ಅನುಭವಿಸುವಂತಾಗಿದೆ. ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಸವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಈ ಘಟಕದ ಸುತ್ತಮುತ್ತಲಿನ ಜನಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಘಟಕದಲ್ಲಿರುವ ಕಸವನ್ನು ನಿರ್ವಹಣೆ ಮಾಡಿ ಸುಡಬೇಕು. ಆದರೆ ನಗರಸಭೆ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಸವನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಕೆಲಸ ಮಾಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಸವನ್ನು ಎಲ್ಲೆಂದರಲ್ಲಿ ಹರಡಿದ್ದು, ಪ್ಲಾಸ್ಟಿಕ್‌ ಮತ್ತು ಹಸಿ ಕಸ, ಒಣಕಸ ವಿಂಗಡಿಸುವ ಕಾರ್ಯ ನಡೆದಿಲ್ಲ, ಇದರಿಂದಾಗಿ ಕಸದರಾಶಿಯಲ್ಲಿ ಉಷ್ಣಾಂಶ ಹೆಚ್ಚಾಗಿ ಬೆಂಕಿಯು 2 ತಿಂಗಳ ಹಿಂದೆ ಹೊತ್ತಿಕೊಂಡಿದ್ದು, ಅದನ್ನು ಹೊತ್ತಿಕೊಂಡ ದಿನವೇ ನಂದಿಸುವ ಕಾರ್ಯವನ್ನು ನಗರಸಭೆ ಸಿಬ್ಬಂದಿ ಮಾಡಬೇಕಾಗಿತ್ತು.

ಆದರೆ ಅಧಿಕಾರಿಗಳ ನಿರ್ಲಕ್ಷ ದಿಂದಾಗಿ ಸುಮಾರು 2 ಎಕರೆ ಪ್ರದೇಶದಲ್ಲಿ ಹರಡಿರುವ ಕಸದ ರಾಶಿಯು 2 ತಿಂಗಳಿಂದ ಹತ್ತಿ ಉರಿಯುತ್ತಲೇ ಇರುವುದರಿಂದ ಕೆಟ್ಟವಾಸನೆ ಸಾರ್ವಜನಿಕರನ್ನು ಕಂಗೆಡಿಸಿದೆ. ಕಸ ವಿಲೇವಾರಿ ಘಟಕದಲ್ಲಿ ಬೆಂಕಿ ಬಿದ್ದ 8 ದಿನಗಳ ನಂತರ ಸಾರ್ವಜನಿಕರಿಂದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಘಟಕಕ್ಕೆ ತೆರಳಿ ಕಸದ ರಾಶಿಗೆ ಹತ್ತಿದ ಬೆಂಕಿಗೆ ಒಂದೆರಡು ದಿನ ಮಾತ್ರ ನೀರು ಬಿಟ್ಟು ನಂತರ ಬೆಂಕಿ ನಂದಿಸುವ ಕಾರ್ಯ ಕೈಬಿಟ್ಟರು.

ಇದರಿಂದಾಗಿ ಸಂಪೂರ್ಣವಾಗಿ ಬೆಂಕಿ ಆರದೆ ಇರುವುದರಿಂದ ಘನತ್ಯಾಜ್ಯ ವಿಲೇವಾರಿ ಘಟಕದ ಸುಮಾರು 5 ಎಕರೆಯಲ್ಲಿ ಸಂಗ್ರಹವಾಗಿರುವ ಕಸವು ಸುಟ್ಟುಹೋಗಿದೆ. ಸದ್ಯ ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ಸ್ಥಳೀಯ ನಿವಾಸಿಗಳು ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿನ ಬೆಂಕಿ ನಂದಿಸುವ ಬಗ್ಗೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಸ್ಥಳೀಯ ಅಧಿಕಾರಿಗಳಿಗೆ ಬೆಂಕಿ ನಂದಿಸುವಂತೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ಇಲ್ಲಿನ ನಿವಾಸಿಗಳು ಆರೋಪಿಸುತ್ತಿದ್ದಾರೆ.

“ಕಾಲೇಜಿನ ಸಮೀಪವಿರುವ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಸಕ್ಕೆ ಬೆಂಕಿ ಹತ್ತಿರುವುದರಿಂದ ಪ್ರತಿನಿತ್ಯವೂ ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿಗೆ ತೊಂದರೆಯಾಗುತ್ತಿದ್ದು, ಕಲ್ಮಶಗಾಳಿಯಿಂದ ರಕ್ಷಿಸಿಕೊಳ್ಳಲು ಮೂಗು ಬಾಯಿ ಮುಚ್ಚಿಕೊಂಡು ಕಾರ್ಯನಿರ್ವಹಿಸುತ್ತಿದ್ದೇವೆ’ ಎಂದು ಸರ್ಕಾರಿ ಪ್ರಥಮದರ್ಜೆ ಪದವಿ ಕಾಲೇಜಿನ ಪ್ರಾಂಶುಪಾಲ ಬಿ.ಬಸವರಾಜ ತಿಳಿಸಿದ್ದಾರೆ.

ಶಾಲಾ ಕಾಲೇಜು, ಸಾರ್ವಜನಿಕ ಕಟ್ಟಡಗಳು, ಜನವಸತಿ ಪ್ರದೇಶಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳದೇ ಯಾವುದೇ ನಿಯಮ ಪಾಲಿಸದೆ, ಘನತ್ಯಾಜ್ಯ ಘಟಕ ನಿರ್ವಹಿಸುತ್ತಿರುವುದರಿಂದ ಸುತ್ತಮುತ್ತಲಿನ ಜನರು ನಿತ್ಯವೂ ನಕರ ಅನುಭವಿಸುವಂತಾಗಿದೆ. ಸಮರ್ಪಕವಾಗಿ ಬೆಂಕಿ ನಂದಿಸುವಂತೆ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯ ನಿವಾಸಿ ಜಂಬಣ್ಣ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.