ಸೋಂಕಿತರಿಗಾಗಿ ವೆಬ್‌ ಸೈಟ್‌ ಆರಂಭ


Team Udayavani, Jun 4, 2021, 10:48 PM IST

4-16

ಚಿಕ್ಕಮಗಳೂರು:ಚಿಕ್ಕಮಗಳೂರು ನಲ್ಲಿ ಕೋವಿಡ್‌ 2ನೇ ಆರಂಭವಾಗುತ್ತಿದ್ದಂತೆ ಸೋಂಕಿತರನ್ನು ಕಾಡಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆ ಸಮಸ್ಯೆ, ಗ್ರಾಮೀಣ ಮತ್ತು ನಗರದ ಜನತೆ ಒಂದು ಬೆಡ್‌ಗಾಗಿ ಆಸ್ಪತ್ರೆಯಿಂದ ಮತ್ತೂಂದು ಆಸ್ಪತ್ರೆಗೆ ಅಲೆದಾಡಬೇಕಿತ್ತು. ಒಂದು ಬೆಡ್‌ ಗಾಗಿ ಹರಸಾಹಸ ಪಡಬೇಕಿತ್ತು. ಜನರ ಅಲೆದಾಟವನ್ನು ತಪ್ಪಿಸುವ ಉದ್ದೇಶದಿಂದ ಜಿಲ್ಲಾಡಳಿತ ಬೆಂಗಳೂರಿನ ಬಿಬಿಎಂಪಿ ಮಾದರಿಯಲ್ಲಿ ವೆಬ್‌ಸೈಟ್‌ ಆರಂಭಿಸಿದೆ.

ಈ ವೆಬ್‌ಸೈಟ್‌ನಲ್ಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್‌ ಸೋಂಕಿತರಿಗೆ ಬೆಡ್‌ ಲಭ್ಯವಿದೆಯೇ, ಯಾವ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಬೆಡ್‌ ಇದೆ. ಜನರಲ್‌ ಬೆಡ್‌ ವ್ಯವಸ್ಥೆ ಇದೆ. ಎಷ್ಟು ಬೆಡ್‌ ಭರ್ತಿಯಾಗಿದೆ. ಎಷ್ಟು ಬೆಡ್‌ ಖಾಲಿ ಇವೆ ಎಂಬುದನ್ನು ತಮ್ಮ ಮೊಬೈಲ್‌ ಫೋನ್‌ನಲ್ಲೇ ತಿಳಿದು ಕೊಳ್ಳಬಹುದಾಗಿದ್ದು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆಯುವುದು ತಪ್ಪುತ್ತದೆ. ಕೋವಿಡ್‌ ವ್ಯಾಪಕವಾಗಿ ಜಿಲ್ಲೆಯಲ್ಲಿ ವ್ಯಾಪಿಸುತ್ತಿದ್ದಂತೆ ಬೆಡ್‌ ವ್ಯವಸ್ಥೆಯ ಬಗ್ಗೆ ದೂರುಗಳು ಕೇಳಿ ಬಂದಿದ್ದವು. ಕೆಲವು ಆಸ್ಪತ್ರೆಗಳಲ್ಲಿ ಬೆಡ್‌ ಲಭ್ಯವಿದ್ದರೂ ಬೆಡ್‌ ಖಾಲಿ ಇಲ್ಲ ಎಂದು ಸಬೂಬು ಹೇಳುತ್ತಿದ್ದರು.

ಆಸ್ಪತ್ರೆಯಲ್ಲಿ ಬೆಡ್‌ ಲಭ್ಯವಾಗುಷ್ಟರಲ್ಲಿ ಸೋಂಕಿತರು ಉಸಿರು ಚೆಲ್ಲುವಂತಹ ಪರಿಸ್ಥಿತಿ ಇತ್ತು. ಸೋಂಕಿತರು ಬೆಡ್‌ ಗಾಗಿ ಅಲೆದಾಡುವುದನ್ನು ತಪ್ಪಿಸಲು ಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌ ಅವರು ಬೆಡ್‌ಗಾಗಿ ವೆಬ್‌ಸೈಟ್‌ ಆರಂಭಿಸಿದ್ದು ಅದು ಗುರುವಾರದಿಂದ ಕಾರ್ಯಾರಂಭಗೊಂಡಿದೆ. ಈ ವೆಬ್‌ ಸೈಟ್‌ ಅನ್ನು ಕೆಪ್ಯುಲಸ್‌ ಟೆಕ್ನಾಲಜೀಸ್‌ ಪ್ರೈ.ಲಿ ಸಂಸ್ಥೆಯ ಅರ್ಜುನ್‌ ಮತ್ತು ನಿತಿನ್‌ ಕಾಮತ್‌ ನೇತೃತ್ವದ ತಂಡ ಅಭಿವೃದ್ಧಿಪಡಿಸಿದ್ದು, ವೆಬ್‌ಸೈಟ್‌ ಗೆ ಲಾಗಿನ್‌ ಆಗುತ್ತಿದ್ದಂತೆ ಕೋವಿಡ್‌ ಬೆಡ್‌ ಅಲೋಕೇಶನ್‌ ಮಾನಿಟರಿಂಗ್‌ ಸಿಸ್ಟಂ ಎಂದು ತೆರೆದುಕೊಳ್ಳುತ್ತದೆ. ಯಾವ ಆಸ್ಪತ್ರೆಯಲ್ಲಿ ಖಾಲಿಬೆಡ್‌ ಇದೆ.

ಸಹಾಯವಾಣಿ, ಹೆಲ್ಪ್ಲೈನ್‌ ನೀಡಲಾಗಿದ್ದು, ಯಾವ ಮಾಹಿತಿ ಬೇಕು ಅದನ್ನು ಪಡೆದುಕೊಳ್ಳಬಹುದಾಗಿದೆ. ಕೋವಿಡ್‌ ಚಿಕಿತ್ಸೆಗೆ ಆಯ್ಕೆ ಮಾಡಲಾಗಿರುವ ಖಾಸಗಿ ಆಸ್ಪತ್ರೆಗಳಾದ ಆಶ್ರಯ, ಕೆಆರ್‌ ಎಸ್‌, ಹೋಲಿಕ್ರಾಸ್‌, ಚೇತನ ಮತ್ತು ವಾತ್ಸಲ್ಯ ಆಸ್ಪತ್ರೆ ಹಾಗೂ ಸರ್ಕಾರಿ ಮಲ್ಲೇಗೌಡ ಜಿಲ್ಲಾಸ್ಪತ್ರೆ ಸೇರಿದಂತೆ 7 ತಾಲೂಕು ಆಸ್ಪತ್ರೆ, ಚಿಕ್ಕಮಗಳೂರು ನಗರದ ಬಾಲಕಿಯರ ಹಾಸ್ಟೆಲ್‌, ಗಿರಿಜನ ವಸತಿ ಶಾಲೆ ತುಡಕೂರು, ಪಪೂ ಬಾಲಕರ ವಿದ್ಯಾರ್ಥಿ ನಿಲಯ, ಕಡೂರು ತಾಲೂಕಿನ ಪಪೂ ಬಾಲಕರ ವಿದ್ಯಾರ್ಥಿ ನಿಲಯ, ಕೊಪ್ಪ ತಾಲೂಕಿನ ಎಂಡಿಆರ್‌ ಎಸ್‌ ಹರಂದೂರು, ಮೂಡಿಗೆರೆ ತಾಲೂಕಿನ ಎಂಡಿಆರ್‌ ಎಸ್‌ ಕೂಳೂರು, ಬಿದರಹಳ್ಳಿ, ನರಸಿಂಹರಾಜಪುರ ತಾಲೂಕಿನ ಎಂಡಿಆರ್‌ಎಸ್‌ ಅಳಲಗೆರೆ, ಶೃಂಗೇರಿ ತಾಲೂಕಿನ ಎಚಿಡಿ ಆರ್‌ಎಸ್‌ ಬೇಗಾರು, ತರೀಕೆರೆ ತಾಲೂಕಿನ ಎಂಡಿಆರ್‌ಎಸ್‌ ಬಾವಿಕೆರೆ, ಅಜ್ಜಂಪುರ ತಾಲೂಕಿನ ಕೆಆರ್‌ಸಿಆರ್‌ ಎಸ್‌ ಸೊಕ್ಕೆಯಲ್ಲಿ ತೆರೆಯಲಾಗಿರುವ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಮಾಹಿತಿ ಲಭ್ಯವಾಗಲಿದೆ. ಆಸ್ಪತ್ರೆ ಮತ್ತು ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಲಭ್ಯವಿರುವ ಜನರಲ್‌ ಬೆಡ್‌ಗಳು ಐಸಿಯು, ಐಸಿಯು ವೆಂಟಿಲೇಟರ್‌, ಆಮ್ಲಜನಕ ರಹಿತ ಹಾಸಿಗೆ ಎಷ್ಟು ಲಭ್ಯವಿದೆ.

ಎಷ್ಟು ಬೆಡ್‌ ಭರ್ತಿಯಾಗಿವೆ. ಎಷ್ಟು ಬೆಡ್‌ ಗಳು ಖಾಲಿ ಇವೆ ಎಂಬ ಮಾಹಿತಿ ತಕ್ಷಣ ಲಭ್ಯವಾಗಲಿದೆ. ಯಾವ ಆಸ್ಪತ್ರೆಯಲ್ಲಿ ಯಾವ ಮಾದರಿಯ ಹಾಸಿಗೆ ಲಭ್ಯವಿದೆ ಎಂಬ ಬಗ್ಗೆ ಜಿಲ್ಲಾಸ್ಪತ್ರೆ ಮಾಹಿತಿ ಬರುತ್ತದೆ. ನಂತರ ಸಂಬಂಧಪಟ್ಟ ವೈದ್ಯರು ಸೋಂಕಿತರಿಗೆ ಯಾವ ಬೆಡ್‌ ಬೇಕು ಎಂಬುದನ್ನು ನಿರ್ಧರಿಸಿ ಬಳಿಕ ಆಯಾ ಆಸ್ಪತ್ರೆ ಮತ್ತು ನೋಡೆಲ್‌ ಅ ಧಿಕಾರಿಗೆ ಹಾಗೂ ಸೋಂಕಿತ ವ್ಯಕ್ತಿಯ ಮೊಬೈಲ್‌ ಗೆ ಮೆಸೇಜ್‌ ಹೋಗಲಿದ್ದು, ಮೆಸೇಜ್‌ ತೋರಿಸಿ ಆಯಾ ಆಸ್ಪತ್ರೆಯಲ್ಲಿ ದಾಖಲಾಗಬಹುದಾಗಿದೆ.

ಸರ್ಕಾರಿ ಮತ್ತು ಖಾಸಗಿ ಕೋವಿಡ್‌ ಆಸ್ಪತ್ರೆಗೆ ನೋಡೆಲ್‌ ಅ ಧಿಕಾರಿಯನ್ನು ನೇಮಕ ಮಾಡಲಾಗಿದ್ದು, ಅವರ ಸಂಪರ್ಕ ಸಂಖ್ಯೆಯೂ ಲಭ್ಯವಾಗಲಿದೆ. ಬೆಡ್‌ವ್ಯವಸ್ಥೆ ಪಾರದರ್ಶಕವಾಗಿ ರುವಂತೆ ನೋಡಿಕೊಳ್ಳಲು ಬೆಂಗಳೂರಿನ ಬಿಬಿಎಂಪಿ ಈ ಮಾದರಿಯನ್ನು ಅಳವಡಿಸಿದ್ದು ಅದೇ ಮಾದರಿಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ವೆಬ್‌ಸೈಟ್‌ ಆರಂಭಿಸಿದ್ದು ಆಸ್ಪತ್ರೆಯಲ್ಲಿ ತುರ್ತು ಬೆಡ್‌ ಅಗತ್ಯವಿದ್ದವರು ಈ ವೆಬ್‌ಸೈಟ್‌ ಮೊರೆ ಹೋಗಬಹುದಾಗಿದೆ.

ಟಾಪ್ ನ್ಯೂಸ್

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

2-thirthahalli

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.