ಯಾವುದೇ ಆದೇಶವಿಲ್ಲ, ಕೇರಳ ತಪ್ಪು ಗ್ರಹಿಕೆ?: ಕರ್ನಾಟಕಕ್ಕೆ “KSRTC’ ಬ್ರ್ಯಾಂಡ್ ಅಬಾಧಿತ
Team Udayavani, Jun 5, 2021, 8:08 AM IST
ಬೆಂಗಳೂರು: ಕರ್ನಾಟಕ ಮತ್ತು ಕೇರಳ ನಡುವಿನ ಕೆಎಸ್ಆರ್ಟಿಸಿ ಟ್ರೇಡ್ಮಾರ್ಕ್ ಪ್ರಕರಣದಲ್ಲಿ ಕೇಂದ್ರ ಟ್ರೇಡ್ಮಾರ್ಕ್ ರಿಜಿಸ್ಟ್ರಿ ಅಥವಾ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ ಯಾವುದೇ ಆದೇಶ ಹೊರಡಿಸಿಲ್ಲ. ಹಾಗಾಗಿ, ಎಂದಿನಂತೆ ಕರ್ನಾಟಕದ “ಕೆಎಸ್ಆರ್ಟಿಸಿ’ ಬ್ರ್ಯಾಂಡ್ ಬಳಕೆ ಅಬಾಧಿತವಾಗಿರಲಿದೆ.
ಕೇಂದ್ರ ಟ್ರೇಡ್ಮಾರ್ಕ್ ರಿಜಿಸ್ಟ್ರಿಯಿಂದ ಇಂತಹ ಯಾವುದೇ ಸೂಚನೆ ಅಥವಾ ಆದೇಶವನ್ನು ಇದುವರೆಗೆ ಹೊರಡಿಸಲಾಗಿಲ್ಲ. ಹೀಗಿರುವಾಗ, ಕೆಎಸ್ಆರ್ಟಿಸಿಯು ತನ್ನ ಟ್ರೇಡ್ ಮಾರ್ಕ್ಗಳನ್ನು ಬಳಸುವಂತಿಲ್ಲ ಎಂಬ ವದಂತಿ ಸತ್ಯಕ್ಕೆ ದೂರವಾಗಿದೆ ಮತ್ತು ಇದನ್ನು ಕಾನೂನಾತ್ಮಕವಾಗಿಯೂ ಒಪ್ಪಲಾಗದು ಎಂದು ಕೆಎಸ್ ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಸ್ಪಷ್ಟಪಡಿಸಿದ್ದಾರೆ.
“ಕೇರಳ ಎಸ್ಆರ್ಟಿಸಿಯು, ಕೆಎಸ್ಆರ್ಟಿಸಿ ಅಥವಾ ಕರ್ನಾಟಕ ಸರಕಾರಕ್ಕೆ ನೋಟಿಸ್ ನೀಡಲು ಉದ್ದೇಶಿಸಿದೆ ಎಂಬ ಸುದ್ದಿ ಸಿಕ್ಕಿದೆ. ಅಂತಹ ನೋಟಿಸ್ ಬಂದರೆ ಉತ್ತರ ನೀಡಲಾಗುವುದು. ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ:ರವಿವಾರವೂ ಬ್ಯಾಂಕ್ ಖಾತೆಗೆ ಹಣ ಜಮೆ : ಆ. 1ರಿಂದ ಹಣಕಾಸು ವರ್ಗಾವಣೆಯಲ್ಲಿ ಹೊಸ ವ್ಯವಸ್ಥೆ
ಸಾಮಾನ್ಯವಾಗಿ ಟ್ರೇಡ್ಮಾರ್ಕ್ ಅನ್ನು ಏಜೆನ್ಸಿಯೊಂದರ ಮೂಲಕ ಅರ್ಜಿ ಹಾಕಿ ಪಡೆಯಬೇಕಾಗುತ್ತದೆ. ಕೆಎಸ್ಆರ್ಟಿಸಿ 2010ರಲ್ಲೇ ಸಲ್ಲಿಸಿ, 2013ರಲ್ಲಿ ಪಡೆದುಕೊಂಡಿದೆ. ಇದರ ಅವಧಿ 2023ರವರೆಗೂ ಇದೆ. ಇದೇ ರೀತಿ, ಕೇರಳ ಎಸ್ ಆರ್ಟಿಸಿ 2019ರಲ್ಲಿ ಟ್ರೇಡ್ಮಾರ್ಕ್ಗೆ ಏಜೆನ್ಸಿ ಮೂಲಕ ಅರ್ಜಿ ಸಲ್ಲಿಸಿತ್ತು. ಅನುಮೋದನೆಗೊಂಡರೂ ಪ್ರಮಾಣಪತ್ರ ಈಚೆಗೆ ಲಭ್ಯವಾಗಿರುವ ಸಾಧ್ಯತೆ ಇದೆ. ಆ ಪ್ರಮಾಣಪತ್ರವನ್ನೇ ಕೇರಳವು ತಪ್ಪಾಗಿ ಗ್ರಹಿಸಿದ್ದರಿಂದ ಈ ಗೊಂದಲ ಉಂಟಾಗಿರಬಹುದು ಎಂದು ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟರು.
ಕೆಎಸ್ಆರ್ಟಿಸಿ ಬ್ರ್ಯಾಂಡ್ ಬಳಕೆ ಎಂದಿನಂತೆ ಮುಂದುವರಿಯಲಿದೆ. ಈ ವಿಚಾರದಲ್ಲಿ ಕೇರಳ ಸರಕಾರ ಯಾವುದೇ ಹೇಳಿಕೆ ನೀಡಿದರೂ ಆತಂಕ ಪಡಬೇಕಾಗಿಲ್ಲ. ಅಗತ್ಯ ಬಿದ್ದರೆ ರಾಜ್ಯ ಸರಕಾರ ಕಾನೂನಾತ್ಮಕ ಹೋರಾಟ ನಡೆಸಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ