ಆವರಗೆರೆ ಹಸಿರಾಗಿಸಿದ ಪರಿಸರ ಯೋಗಿಗಳು!


Team Udayavani, Jun 5, 2021, 9:32 AM IST

Untitled-1

ದಾವಣಗೆರೆ: ಪರಿಸರದ ಬಗ್ಗೆ ಕೇವಲ ಕಾಳಜಿ ತೋರ್ಪಡಿಸುವ ಜತೆಗೆ ಪರಿಸರ ಕಾಪಾಡಲು, ಸ್ವಚ್ಛ ಹಾಗೂ ಸುಂದರಗೊಳಿಸಲು ನಾವೂ ಏನಾದರೂ ಕೊಡುಗೆ ನೀಡಬೇಕು ಎಂಬ ಮನಸ್ಸಿದ್ದರೆ ನಮ್ಮ ಸುತ್ತಲಿನ ಪರಿಸರವನ್ನೇ ಹಸೀರಿಕರಣಗೊಳಿಸಿ ಸಂಭ್ರವಿಸಬಹುದು ಎಂಬುದನ್ನು ತಾಲೂಕಿನ ಆವರಗೆರೆಯ ಶ್ರೀಕಾಯಕಯೋಗಿ ಬಸವ ಪರಿಸರ ವೇದಿಕೆ ಸಾಬೀತು ಪಡಿಸಿದೆ.

ಆವರಗೆರೆ ಗ್ರಾಮದ ಶ್ರೀಕಾಯಕಯೋಗಿ ಬಸವ ಪರಿಸರ ವೇದಿಕೆ ಸದಸ್ಯರು ಕಳೆದ ಎರಡು ವರ್ಷಗಳಿಂದ ಗ್ರಾಮದಲ್ಲಿ ಎರಡು ಸಾವಿರಕ್ಕೂ ಅಧಿಕ ಸಸಿಗಳನ್ನು ನೆಟ್ಟು ನಿತ್ಯ ಪೋಷಣೆ ಮಾಡುತ್ತಿದ್ದು ಅವು ಈಗ ಗ್ರಾಮದಲ್ಲಿ ಸಮೃದ್ಧವಾಗಿ ಬೆಳೆದು ನಿಂತಿವೆ. ಇದರ ಜತೆಗೆ ಪ್ರತಿ ರವಿವಾರ ಶ್ರಮದಾನದ ಮೂಲಕ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಗಳನ್ನು ಮಾಡುವ ಮೂಲಕ ಗ್ರಾಮದ ಸೌಂದರ್ಯ ಹೆಚ್ಚಿಸುವ ಕಾರ್ಯ ಮಾಡುತ್ತಿದ್ದಾರೆ.

ಹೀಗಾಗಿ ಅವರು ವೇದಿಕೆ ಸದಸ್ಯರು ಕೇವಲ ಪರಿಸರ ಪ್ರೇಮಿಗಳಲ್ಲ; ಪರಿಸರ ಯೋಗಿಗಳಾಗಿದ್ದಾರೆ. ಇವರ ಈ ಕಾರ್ಯದಿಂದ ಇಡೀ ಗ್ರಾಮದಲ್ಲೀಗ ಹಸಿರು ಕಂಗೊಳಿಸುವಂತಾಗಿದೆ.

ಶ್ರೀಕಾಯಕಯೋಗಿ ಬಸವ ಪರಿಸರ ವೇದಿಕೆಯಲ್ಲಿ 35 ಸದಸ್ಯರಿದ್ದು ಪ್ರತಿ ರವಿವಾರ ಬೆಳಗ್ಗೆ 6ರಿಂದ 9 ಗಂಟೆವರೆಗೆ ಶ್ರಮದಾನದ ಮೂಲಕ ಗ್ರಾಮದಲ್ಲಿರುವ ನಾಲ್ಕು ಉದ್ಯಾನಗಳು, ಶಾಲಾ ಆವರಣಗಳು, ದೇವಸ್ಥಾನದ ಆವರಣಗಳು, ಮುಖ್ಯ ರಸ್ತೆ ಸೇರಿದಂತೆ ವಿವಿಧ ಸ್ಥಳಗಳ ಸ್ವತ್ಛತಾ ಕಾರ್ಯ ನೆರವೇರಿಸುತ್ತಾರೆ. ಗ್ರಾಮದಲ್ಲಿದ್ದ ಹಳೆಯ ಹೊಂಡವನ್ನು ಸ್ವತ್ಛಗೊಳಿಸಿ ಅದರ ಅಂದ ಹೆಚ್ಚಿಸಿದ್ದಾರೆ.

ಆವರಗೆರೆ ಗ್ರಾಮದ ಶೇಖರಪ್ಪ ಬಡಾವಣೆ, ಹಳೆ ಊರು, ಎಲ್ಲ ಶಾಲಾ ಆವರಣ, ದೇವಸ್ಥಾನಗಳ ಸುತ್ತಮುತ್ತ, ಉತ್ತಮ್‌ ಚಂದ್‌ ಬಡಾವಣೆ ಹಾಗೂ ರಸ್ತೆ ಬದಿ ಸಾವಿರಾರು ಸಸಿಗಳನ್ನು ನೆಟ್ಟು ಪ್ರತಿದಿನಕೊಡದಿಂದ ನೀರುಣಿಸುತ್ತಿದ್ದಾರೆ. ಕನಕದಾಸ ಪಾರ್ಕ್‌, ವಾಲ್ಮೀಕಿ ಪಾರ್ಕ್‌ ನಲ್ಲಿನ ಗಿಡ ಮರಗಳನ್ನುಸಂರಕ್ಷಿಸುವ ಕೆಲಸ ಮಾಡಿದ್ದಾರೆ. ಇದರೊಂದಿಗೆ ರಸ್ತೆ ಬದಿ ಫಲಕ, ಪ್ರಮುಖ ಸ್ಥಳಗಳಲ್ಲಿ ಬೆಂಚ್‌ಗಳನ್ನು ಹಾಕಿಸಿ ಇಡೀ ಊರಿನ ಜನರಿಗೆ ಅನುಕೂಲ ಕಲ್ಪಿಸಿದ್ದಾರೆ.

ಮರ ಬೆಳೆಸುವ ಕಾಳಜಿ, ಪರಿಸರ ಪ್ರೀತಿ ಸಾರ್ವಜನಿಕರಲ್ಲಿಯೂ ಬೆಳೆಸುವ ಉದ್ದೇಶದಿಂದರಾಷ್ಟ್ರೀಯ ಕಾರ್ಯಕ್ರಮ, ಹಬ್ಟಾಚರಣೆ ಹಾಗೂ ವಿಶೇಷ ಸಂದರ್ಭದಲ್ಲಿ ಸಸಿ ವಿತರಿಸುವ ಕಾರ್ಯವೂ ನಿರಂತರವಾಗಿ ವೇದಿಕೆವತಿಯಿಂದ ನಡೆಯುತ್ತಿದೆ.

ಪರಿಸರಕ್ಕಾಗಿ ದೇಣಿಗೆ: ಶ್ರೀಕಾಯಕಯೋಗಿ ಬಸವ ಪರಿಸರ ವೇದಿಕೆ ಸದಸ್ಯರಿಂದ ಪರಿಸರಚಟುವಟಿಕೆಗಾಗಿ ಪ್ರತಿ ತಿಂಗಳು 200 ರೂ. ದೇಣಿಗೆಸಂಗ್ರಹಿಸಲಾಗುತ್ತಿದೆ. ಇದಕ್ಕಾಗಿ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆಯನ್ನೂ ತೆರೆಯಲಾಗಿದೆ. ಸ್ವತ್ಛತಾಚಟುವಟಿಕೆಗೆ ಬೇಕಾದ ಗಾರೆ, ಬುಟ್ಟಿಯಂತಹಪರಿಕರ ಖರೀದಿಸಿಟ್ಟುಕೊಳ್ಳಲಾಗಿದೆ. ಇದರೊಂದಿಗೆ ದಾನಿಗಳ ಸಹಾಯದಿಂದ ಗ್ರಾಮದಲ್ಲಿ ಅಲ್ಲಲ್ಲಿಬೆಂಚ್‌, ಬೇಸಿಗೆಯಲ್ಲಿ ಟ್ಯಾಂಕರ್‌ ಮೂಲಕ ಸಸಿಗಳಿಗೆ ನೀರುಣಿಸಲಾಗುತ್ತಿದೆ.

ಗ್ರಾಮದ ಹಿರಿಯರಾದ ನಾಯಕನಹಟ್ಟಿ ರುದ್ರಪ್ಪ, ಶಿಕ್ಷಕ ಎಂ. ಗುರುಸಿದ್ದಸ್ವಾಮಿ, ಮಹಾನಗರಪಾಲಿಕೆ ಮಾಜಿ ಸದಸ್ಯ ಎಚ್‌.ಜಿ. ಉಮೇಶ್‌, ಮೈಸೂರು ಹನುಮಂತಪ್ಪ, ಕೆ.ಬಾನಪ್ಪ, ತಿಪ್ಪೇಸ್ವಾಮಿ, ಮಂಜುನಾಥ, ಶಿವರುದ್ರಪ್ಪ ಸೇರಿದಂತೆ ಸಂಘಟನೆಯಎಲ್ಲ ಸದಸ್ಯರು ಪರಿಸರ ಸಂರಕ್ಷಣೆ ಕಾಯಕದಲ್ಲಿ ಕೈಜೋಡಿಸಿದ್ದಾರೆ.

ಒಟ್ಟಾರೆ ಆವರಗೆರೆ ಗ್ರಾಮದ ಶ್ರೀಕಾಯಕಯೋಗಿ ಬಸವ ಪರಿಸರ ವೇದಿಕೆ ಸದಸ್ಯರ ಪರಿಸರ ಪ್ರೇಮ ಹಾಗೂ ಪರಿಸರ ಪೂರಕ ಚಟುವಟಿಕೆ ಇತರರಿಗೂ ಮಾದರಿಯಾಗಿದೆ.

ಕಳೆದ ಎರಡು ವರ್ಷಗಳಿಂದಆವರಗೆರೆಯಲ್ಲಿ ಶ್ರೀಕಾಯಕಯೋಗಿಬಸವ ಪರಿಸರ ವೇದಿಕೆ ಮಾಡಿಕೊಂಡು ಗ್ರಾಮದವಿವಿಧೆಡೆ ಸಸಿ ನೆಟ್ಟು ಪೋಷಿಸುತ್ತ ಬರಲಾಗುತ್ತಿದೆ.ಜತೆಗೆ ಪ್ರತಿ ರವಿವಾರ ಶ್ರಮದಾನದ ಮೂಲಕಗ್ರಾಮದ ಸ್ವಚ್ಛತಾ ಕಾರ್ಯ ಮಾಡಿ, ಗ್ರಾಮದ ಸೌಂದರ್ಯ ಹೆಚ್ಚಿಸಲಾಗುತ್ತಿದೆ. ವೇದಿಕೆಯಈ ಕಾರ್ಯಕ್ಕೆ ಗ್ರಾಮಸ್ಥರಿಂದ ಸಹಕಾರ,ಪ್ರೋತ್ಸಾಹವೂ ದೊರೆತಿದೆ.- ಎಂ. ಗುರುಸಿದ್ಧಸ್ವಾಮಿ, ಶಿಕ್ಷಕರು, ಸದಸ್ಯರು, ಶ್ರೀಕಾಯಕಯೋಗಿ ಬಸವ ಪರಿಸರ ವೇದಿಕೆ.

 

-ಎಚ್‌.ಕೆ. ನಟರಾಜ

 

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.