ಹಳ್ಳಿಗಳಲ್ಲಿ ಹೆಚ್ಚುತ್ತಿದೆ ಅಕ್ರಮ ಮದ್ಯದ ಅಮಲು!


Team Udayavani, Jun 5, 2021, 10:27 AM IST

ಹಳ್ಳಿಗಳಲ್ಲಿ ಹೆಚ್ಚುತ್ತಿದೆ ಅಕ್ರಮ ಮದ್ಯದ ಅಮಲು!

ಹಗರಿಬೊಮ್ಮನಹಳ್ಳಿ: ತಾಲೂಕಿನಲ್ಲಿ ಒಂದೆಡೆ ಕೋವಿಡ್ ಸೋಂಕು ಹೆಚ್ಚುತ್ತಿದೆ. ಹಳ್ಳಿಗಳಲ್ಲೂ ಸೋಂಕು ತನ್ನ ಪ್ರಭಾವ ತೋರಿಸುತ್ತಿದೆ. ಇನ್ನೊಂದೆಡೆ ಹಳ್ಳಿಗಳಲ್ಲಿ ಮದ್ಯ ಅಕ್ರಮ ಮಾರಾಟವೂ ಜೋರಾಗಿದ್ದು ಇದನ್ನು ತಡೆಯುವವರ್ಯಾರು ಎಂಬುದೇ ಪ್ರಶ್ನೆಯಾಗಿದೆ.

ತಾಲೂಕಿನ ಅನೇಕ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದ್ದು, ಪರೋಕ್ಷವಾಗಿ ಸರಕಾರವೇ ಇದನ್ನು ಬೆಂಬಲಿಸುತ್ತಿದೆಯೇ ಎಂಬ ಶಂಕೆ ಮೂಡಿದೆ. ಮದ್ಯ ಮಾರಾಟ ನಡೆಯುತ್ತಿದ್ದರೂ ಪೊಲೀಸ್‌ ಇಲಾಖೆ ಜಾಣ ಮೌನ ವಹಿಸಿದೆ. ಈ ವರೆಗೂ ಸರಕಾರ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್‌ ಹಾಕದೆ, ಅಬಕಾರಿ ಇಲಾಖೆ ಗುರಿ ಮುಟ್ಟುವ ತವಕದಲ್ಲಿ ಹಳ್ಳಿ ಜನರ ಆರೋಗ್ಯದೊಂದಿಗೆ ಆಟವಾಡುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಪಟ್ಟಣದಲ್ಲಿರುವ ಮದ್ಯದಂಗಡಿಯವರು ಸುತ್ತಮುತ್ತಲಿನ ಹಳ್ಳಿಗಳಿಗೆ ಮದ್ಯ ಸರಬರಾಜು ಮಾಡುತ್ತಾರೆ. ಹೀಗೆ ಬಂದ ಮದ್ಯ ಹಳ್ಳಿಗಳಲ್ಲಿ ನಿರಾತಂಕವಾಗಿ ಮಾರಾಟವಾಗುತ್ತಿದೆ. ಆಗೊಮ್ಮೆ ಈಗೊಮ್ಮೆ ಪೊಲೀಸರು ಅಕ್ರಮವಾಗಿ ಮದ್ಯ ಮಾರುವವರ ವಿರುದ್ಧ ಪ್ರಕರಣ ದಾಖಲಿಸಿ ಸುಮ್ಮನಾಗುತ್ತಿದ್ದಾರೆ ಹೊರತು ಕಠಿಣ ಕ್ರಮಕ್ಕೆ ಮುಂದಾಗುತ್ತಿಲ್ಲ. ಇದರಿಂದ ಅದೇ ರಾಗ ಅದೇ ಹಾಡು ಎಂಬಂತೆ ಹಳ್ಳಿಯಲ್ಲಿ ಮದ್ಯದ ಅಮಲು ಹೆಚ್ಚುತ್ತಲೇ ಇದೆ ಹೊರತು ಕಡಿಮೆಯಾಗುತ್ತಿಲ್ಲ.

ಒಮ್ಮೊಮ್ಮೆ ಪೊಲೀಸರು ಮದ್ಯ ಅಕ್ರಮ ಮಾರಾಟ ಪತ್ತೆ ಹಚ್ಚುವ ನೆಪದಲ್ಲಿ ಯಾರು ಮದ್ಯ ಮಾರಾಟ ಮಾಡುತ್ತಿಲ್ಲವೋ ಅಂತಹವರ ಮನೆಗಳನ್ನು ಪರಿಶೀಲಿಸಿ ಬರಿಗೈಲಿ ವಾಪಸ್ಸಾಗಿದ್ದೂ ಇದೆ. ಇದು ಮದ್ಯ ಮಾರದವರ ಮುಜುಗರಕ್ಕೆ ಕಾರಣವಾದರೆ ನಿಜವಾಗಿಯೂ ಮದ್ಯ ಮಾರುವವರು ಭಯವಿಲ್ಲದೆ ತಮ್ಮ ದಂಧೆ ಮುಂದುವರಿಸಲು ಪೊಲೀಸರೇ ಸಹಕಾರ ನೀಡಿದಂತಾಗಿದೆ ಎಂಬುದು ಅನೇಕ ಗ್ರಾಮಸ್ಥರ ಅಭಿಪ್ರಾಯವಾಗಿದೆ.

ಧಾರ್ಮಿಕ ಕಾರ್ಯಕ್ರಮದ ನೆವ: ಹಳ್ಳಿಗಳಲ್ಲಿ ದೇವಾಲಯ, ಧಾರ್ಮಿಕ ಕಾರ್ಯಕ್ರಮದ ಹೆಸರಲ್ಲಿ ಮದ್ಯ ಮಾರಾಟ ನಡೆಯುತ್ತಿರುವುದು ದೊಡ್ಡ ದುರಂತ. ದೇವಾಲಯದ ಗೋಪುರ ಕಟ್ಟಿಸಲು, ಇನ್ಯಾವುದೋ ಧಾರ್ಮಿಕ ಕಾರ್ಯಕ್ರಮಗಳಿಗೆ ಇಂತಿಷ್ಟು ಹಣ ಎಂದು ಮೊದಲೇ ವಾಗ್ಧಾನ ಮಾಡಿ ಹರಾಜು ಪ್ರಕ್ರಿಯೆಯಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಪಡೆಯಲಾಗುತ್ತಿದೆ ಎಂದು ತಿಳಿದು ಬಂದಿದೆ.

ಹಳ್ಳಿಗಳಲ್ಲಿ ಲಕ್ಷಾಂತರ ರೂ.ಗಳಿಗೆ ಮದ್ಯ ಮಾರಾಟದ ಹರಾಜು ನಡೆಯುತ್ತದೆ. ಉಳ್ಳವರುಹರಾಜಿನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಪಡೆದು ದೇವಾಲಯದ ಆಡಳಿತ ಮಂಡಳಿಅಥವಾ ಧಾರ್ಮಿಕ ಕಾರ್ಯಕ್ರಮಕ್ಕೆ ಸೂಚಿಸಿದ ಹಣ ನೀಡುತ್ತಾರೆ ಎನ್ನಲಾಗಿದೆ. ಸರಕಾರ ಮದ್ಯ ಮಾರಾಟಕ್ಕಾಗಿ ಅಲ್ಲಲ್ಲಿ ಎಂಎಸ್‌ಐಲ್‌ ಮಳಿಗೆ ಸ್ಥಾಪಿಸಿದ್ದರೂ ಸಹ ಗ್ರಾಮೀಣ ಪ್ರದೇಶದ ಕೆಲ ಉಳ್ಳವರು ತಮ್ಮ ಲಾಭಕ್ಕಾಗಿ ಗ್ರಾಮದಲ್ಲಿಯೇ ಅಕ್ರಮ ಮದ್ಯ ಮಾರಾಟಕ್ಕೆ ಮುಂದಾಗುತ್ತಿದ್ದಾರೆ ಎಂಬ ಆರೋಪಗಳೂ ಕೇಳಿಬರುತ್ತಿವೆ.

ಕೋವಿಡ್  ವೈರಸ್‌ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿದ್ದರೂ ಅಕ್ರಮ ಮದ್ಯ ಮಾರಾಟ ಮಾತ್ರ ನಿಂತಿಲ್ಲ. ಸೋಂಕು ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಲಾಕ್‌ ಡೌನ್‌, ಸೀಲ್‌ಡೌನ್‌ ಎಲ್ಲ ಮಾಡಲಾಗಿದ್ದರೂ ಹಳ್ಳಿಗಳಲ್ಲಿ ಕದ್ದುಮುಚ್ಚಿ ಅಕ್ರಮ ಮದ್ಯ ಮಾರಾಟ ನಡೆಯುತ್ತಲೇ ಇದೆ. ಮದ್ಯ ಮಾರಾಟ ತಡೆಗೆ ಸಂಬಂಧಿಸಿದ ಇಲಾಖೆ, ಅಧಿಕಾರಿಗಳು ಮುಂದಾಗಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ತಾಲೂಕಿನ ಮದ್ಯದಂಗಡಿ ಸನ್ನದ್ದುದಾರರು ಅಕ್ರಮ ಮಾರಾಟಕ್ಕೆ ಸಂಪೂರ್ಣ ಒತ್ತು ನೀಡುತ್ತಾರೆ. ಕಾರಣ, ಇಲಾಖೆಯವರು ಟಾರ್ಗೆಟ್‌ ಮುಟ್ಟಲು ಒತ್ತಾಯ ಮಾಡುವುದರಿಂದ ಮದ್ಯದಂಗಡಿಯವರು ಅಕ್ರಮ ಮಾರಾಟಕ್ಕೆ ಬೆಂಬಲಿಸುವುದು ಸಾಮಾನ್ಯವಾಗಿದೆ. ಇಂತಹ ಕೋವಿಡ್ ಸಮಯದಲ್ಲೂ ಕೂಡ ಮುಂಚಿತವಾಗಿಯೇ ಮದ್ಯ ಸಂಗ್ರಹಿಸಿ ಹಳ್ಳಿಗಳಲ್ಲಿ ಎಲ್ಲೆಂದರಲ್ಲಿ ಮದ್ಯ ಅಕ್ರಮ ಮಾರಾಟ ಎಗ್ಗಿಲ್ಲದೆ ನಡೆದಿದೆ. ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಮದ್ಯ ಅಕ್ರಮ ಮಾರಾಟ ತಡೆಯಲು ಗ್ರಾಪಂ ಅಧಿಕಾರಿಗಳು, ಸದಸ್ಯರು, ಸ್ವಯಂಸೇವಕರು ಒಳಗೊಂಡ ತಂಡ ರಚಿಸಿ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಬೇಕು. -ಮಲ್ಲೇಶ್‌ ಕೋಗಳಿ, ಜಿಲ್ಲಾ ಸಂಯೋಜಕ, ಗ್ರಾಕೂಸ್‌ .

ಮದ್ಯ ಅಕ್ರಮ ಮಾರಾಟ ನಿಯಂತ್ರಣಕ್ಕೆ ತರಲು ಆಯಾ ಜಿಲ್ಲೆಗಳ ಅಬಕಾರಿ ಡಿಸಿಗಳಿಗೆ ತಿಳಿಸಲಾಗುವುದು. ಮೊದಲು ಎಲ್ಲರೂ ಕೊರೊನಾದಿಂದ ಮುಕ್ತರಾಗೋಣ. ಬಳಿಕ ಮದ್ಯ ಮಾರಾಟಕ್ಕೆ ಆದ್ಯತೆ ನೀಡೋಣ. ಇಂತಹ ಸಂದಿಗ್ಧ ಪರಿಸ್ಥಿಯಲ್ಲಿ ಮದ್ಯ ಅಕ್ರಮ ಮಾರಾಟಕ್ಕೆ ಆಸ್ಪದ ನೀಡುವುದಿಲ್ಲ. ಈ ಸಂದರ್ಭದಲ್ಲಿ ಮದ್ಯ ಅಕ್ರಮ ಮಾರಾಟಕ್ಕೆ ಬೆಂಬಲಿಸಿ ಮದ್ಯ ನೀಡಿದ ಮದ್ಯದಂಗಡಿಗಳ ಪರವಾನಗಿ ರದ್ದು ಮಾಡಲಾಗುವುದು.-ಕೆ.ಗೋಪಾಲಯ್ಯ ಅಬಕಾರಿ ಸಚಿವರು

ಮದ್ಯ ಅಕ್ರಮ ಮಾರಾಟಕ್ಕೆ ಸರಕಾರವೇ ಅವಕಾಶ ಕೊಟ್ಟಂತಿದೆ. ತಾಲೂಕಿನ ಸಿಪಿಐ, ಪಿಎಸ್‌ಐಗಳು ಮದ್ಯ ಅಕ್ರಮ ಮಾರಾಟದಲ್ಲಿ ಭಾಗಿಯಾಗಿರುವ ಸಂಶಯವಿದೆ. ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ, ಪ್ರಕರಣ ದಾಖಲಿಸಿಲ್ಲ. ತಾಲೂಕಿನ ಕೆಲ ಮದ್ಯದಂಗಡಿಗಳಲ್ಲಿ ಸೆಕೆಂಡ್ಸ್‌ ಮದ್ಯ ಮಾರುವವರ ವಿರುದ್ಧ ಅಬಕಾರಿ ಡಿಸಿಯವರ ಗಮನಕ್ಕೆ ತಂದರೂ ಈವರೆಗೂ ಗಮನಹರಿಸಿಲ್ಲ. -ಎಸ್‌.ಭೀಮಾನಾಯ್ಕ, ಶಾಸಕರು, ಹಗರಿಬೊಮ್ಮನಹಳ್ಳಿ.

ಏನ್‌ ಮಾಡೋದ್ರಿ ಕೊರೊನಾದಲ್ಲಿ ಕೆಲಸ ಇಲ್ದೆ ಮನೆಯಲ್ಲಿಯೇ ಇದ್ದಿವಿ. ಮನೆಗಿದ್ದರೆ ಗಂಡ ಕುಡಿಲಿಕ್ಕೆ ರೊಕ್ಕ ಕೇಳ್ತಾನ್ರಿ, ಎಲ್ಲಿಂದ ಕೊಡಬೇಕ್ರಿ. ಕೋವಿಡ್ ಅಂತಹ ಎಲ್ಲಾ ಬಂದ್‌ ಮಾಡ್ಯಾರ. ಆದ್ರ ಈ ಬ್ರ್ಯಾಂಡಿ ಬಂದ್‌ ಮಾಡೋದು ಆಗೋಲ್ದು. ನಮ್ಮ ಹಳ್ಯಾಗ ಎಲ್ಲಿಬೇಕು ಅಲ್ಲಿ ಬ್ರಾಂಡಿ ಸಿಗೋಕ್ಕತೈತಿ ಹಂಗಾ ಆಗಿ ಕುಡಿಯೋದು ಊರಾಗ ಬಾಳ ಆಗೈತಿ.-ನೊಂದ ಮಹಿಳೆ.

ಗ್ರಾಮೀಣ ಪ್ರದೇಶಗಳಲ್ಲಿ ದೈವಸ್ಥರು ಎಂದರೆ ದೇವರು ಇದ್ದಂತೆ. ಇವರನ್ನು ಜನರು ಪೂಜ್ಯ ಭಾವದಿಂದ ಕಾಣುತ್ತಾರೆ. ಕೆಲ ಹಳ್ಳಿಗಳಲ್ಲಿ ದೈವಸ್ಥರು ಇಂಥ ಅಕ್ರಮ ಮದ್ಯ ಮಾರಾಟಕ್ಕೆ ಅವಕಾಶ ನೀಡಿ ತಮ್ಮ ಗೌರವ ಕಡಿಮೆ ಮಾಡಿಕೊಳ್ಳುತ್ತಿದ್ದಾರೆ. ಜನರ ಆರೋಗ್ಯ ಕಾಪಾಡಬೇಕಾದ ಸರ್ಕಾರವೇ ಅಕ್ರಮ ಮದ್ಯ ಮಾರಾಟಕ್ಕೆ ಪರೋಕ್ಷವಾಗಿ ಅವಕಾಶ ನೀಡಿ ಆರೋಗ್ಯ ಹದಗೆಡಿಸುತ್ತಿದೆ. -ಅಕ್ಕಮಹಾದೇವಿ ಮದ್ಯ ನಿಷೇಧ ಆಂದೋಲನದ ಸಂಚಾಲಕಿ

 

-ಸುರೇಶ ಯಳಕಪ್ಪನವರ

ಟಾಪ್ ನ್ಯೂಸ್

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.