ಕಸದ ರಾಶಿ ಪಕ್ಕ ನಟಿ ಬಿ. ಜಯಮ್ಮ ಮೃತದೇಹ : ಕುಟುಂಬಸ್ಥರು ಹೇಳಿದ್ದೇನು ?
Team Udayavani, Jun 5, 2021, 12:52 PM IST
ಬೆಂಗಳೂರು: ಹಿರಿಯ ನಟಿ ಬಿ. ಜಯಮ್ಮ ಮೃತದೇಹ ರಸ್ತೆ ಪಕ್ಕದಲ್ಲಿ ಅನಾಥವಾಗಿದ್ದ ವಿಡಿಯೋ ಕುರಿತು ಅವರ ಕುಟುಂಬಸ್ಥರು ಸ್ಪಷ್ಟನೆ ನೀಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ ವಿಡಿಯೋ ಕುರಿತು ಜಯಾ ಸಹೋದರನ ಪುತ್ರಿ ಮಾತನಾಡಿದ್ದು, ಕೊವಿಡ್ ನಿಂದಾಗಿ ಅವರ ಅಂತ್ಯಸಂಸ್ಕಾರಕ್ಕೆ ಯಾರೂ ಬರುವುದು ಬೇಡ ಎಂದು ನಾವೇ ಹೇಳಿದ್ದೆವು. 11.30 ರಿಂದ 12 ಗಂಟೆಯವರೆಗೆ ನಮಗೆ ಸ್ಮಶಾನದಲ್ಲಿ ಸಮಯ ನಿಗದಿಯಾಗಿತ್ತು. ಆದರೆ ಒಳಗಡೆ ನಮ್ಮ ಸಂಪ್ರದಾಯ ಪ್ರಕಾರ ವಿಧಿ ವಿಧಾನ ಮಾಡಲು ಅವಕಾಶವಿರಲಿಲ್ಲ. ಹೀಗಾಗಿ ಅಲ್ಲಿನ ನಿಯಮದ ಪ್ರಕಾರ ಹೊರಗಡೆಯೇ ಪೂಜೆ ಮಾಡಬೇಕಾಯ್ತು.ಹಾಗಾಗಿ ರಸ್ತೆ ಪಕ್ಕದಲ್ಲೇ ಪೂಜೆ ಮಾಡಿದ್ವಿ. ಇದನ್ನೇ ಯಾರೋ ವಿಡಿಯೋ ಮಾಡಿ ಅಪಪ್ರಚಾರ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಇನ್ನು ಕನ್ನಡದಲ್ಲಿ ಹಲವು ಸಿನಿಮಾ, ಧಾರವಾಹಿಗಳಲ್ಲಿ ನಟಿಸಿದ ಹಿರಿಯ ನಟಿ ಮೃತದೇಹ ಕಸದ ರಾಶಿಯ ಪಕ್ಕ, ರಸ್ತೆ ಬದಿಯಲ್ಲಿ ಇಡಲಾಗಿರುವ ದೃಶ್ಯವನ್ನು ಕೆಲವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಅವಿವಾಹಿತರಾಗಿದ್ದ ಜಯಮ್ಮ ಅಂತ್ಯ ಸಂಸ್ಕಾರ ಮಾಡಲು ಕುಟುಂಬಸ್ಥರೂ ಬಂದಿಲ್ಲ. ಹಿರಿಯ ನಟ ಶವ ಅನಾಥವಾಗಿದೆ ಎಂದು ಆರೋಪ ಕೇಳಿಬಂದಿತ್ತು. ಕನ್ನಡ ಚಿತ್ರರಂಗದವರು ಘಟನೆ ಕುರಿತು ಆಘಾತ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ