ಮಕ್ಕ ಳಿಂದ ಭೂಮಿಗೆ 6000 ಬೀಜದುಂಡೆ


Team Udayavani, Jun 5, 2021, 6:25 PM IST

4hub-11

ವರದಿ:ಬಸವರಾಜ ಹೂಗಾರ

ಹುಬ್ಬಳ್ಳಿ: ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸಲು ಇಲ್ಲಿನ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಮಕ್ಕಳಿಂದಲೇ ಸುಮಾರು 6 ಸಾವಿರ ಬೀಜದುಂಡೆಗಳನ್ನು ತಯಾರಿಸಿದ್ದು, ವಿಶ್ವ ಪರಿಸರ ದಿನವಾದ ಜೂ. 5ರಂದು ಅವುಗಳನ್ನು ಮಕ್ಕಳಿಂದ ಭೂಮಿಗೆ ಸಮರ್ಪಣೆ ಮಾಡಿಸಲಾಗುತ್ತಿದೆ.

ಮಕ್ಕಳಲ್ಲಿ ವಿಜ್ಞಾನದ ಕೌತುಕ ಹೆಚ್ಚಿಸುವ, ಮಕ್ಕಳಿಂದಲೇ ವಿವಿಧ ಮಾದರಿಗಳನ್ನು ತಯಾರಿಸುವ, ತರಬೇತಿ ನೀಡುವ ಕಾರ್ಯದಲ್ಲಿ ತೊಡಗಿರುವ ಪ್ರತಿಷ್ಠಾನ, 5ರಿಂದ 9ನೇ ತರಗತಿ ಮಕ್ಕಳಿಗೆ ಬೀಜದುಂಡೆ ತಯಾರಿಸುವ ತರಬೇತಿ ನೀಡಿದೆ. ಅವರು ತಯಾರಿಸಿದ ಬೀಜದುಂಡೆಗಳನ್ನು ಭೂಮಿಗೆ ಸಮರ್ಪಿಸುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಮುಂದಾಗಿದೆ.

ವಿದ್ಯಾರ್ಥಿಗಳಿಗೆ ತರಬೇತಿ: ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನದಿಂದ 5ರಿಂದ 10ನೇ ತರಗತಿ ಸುಮಾರು 15 ಸಾವಿರಕ್ಕೂ ಅಧಿಕ ಮಕ್ಕಳು ಆನ್‌ಲೈನ್‌ ತರಬೇತಿಗೆ ಹೆಸರು ನೋಂದಾಯಿಸಿಕೊಂಡಿದ್ದು, ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಪರಿಕರಗಳನ್ನು ಜೋಡಿಸಿಕೊಂಡು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಆನ್‌ ಲೈನ್‌ ಬೇಸಿಗೆ ಶಿಬಿರ ನಡೆಸಲಾಗುತ್ತಿದೆ. ಇದರ ಜೊತೆಯಲ್ಲಿಯೇ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಬೀಜದುಂಡೆ ಮಾಡುವ ಕುರಿತು ಮಕ್ಕಳಿಗೆ ವಿಶೇಷ ತರಬೇತಿ ನೀಡಲಾಗಿದೆ. ಮಕ್ಕಳಿಗೆ ಬೀಜದುಂಡೆ ಹೇಗೆ ತಯಾರಿಸಬೇಕು ಎಂಬ ಮಾಹಿತಿ ನೀಡಲಾಗಿತ್ತು. ಈಗಾಗಲೇ ವಿವಿಧ ಜಿಲ್ಲೆಯಲ್ಲಿನ ಸಿಬ್ಬಂದಿ, ಮಣ್ಣು, ಸಾವಯವ ಗೊಬ್ಬರ, ಮರಳು ಬಳಸಿಕೊಂಡು ವಿವಿಧ ಬೀಜಗಳನ್ನು ಹಾಕುವ ಮೂಲಕ ಬೀಜದುಂಡೆ ತಯಾರಿಸುವ ಬಗ್ಗೆ ತರಬೇತಿ ನೀಡಿದ್ದು, ಒಂದು ಮಗು ಸುಮಾರು 5 ಬೀಜದುಂಡೆ ನಿರ್ಮಿಸಬೇಕೆಂದು ಹೇಳಲಾಗಿತ್ತು, ಆದರೆ ಮಕ್ಕಳು ನಮ್ಮ ನಿರೀಕ್ಷೆ ಮೀರಿ ಬೀಜದುಂಡೆಗಳನ್ನು ಸಿದ್ಧಪಡಿಸಿದ್ದಾರೆ.

ಬೀಜದುಂಡೆ ತಯಾರಿಸಿ ಸುಮಾರು 24ರಿಂದ 48 ಗಂಟೆಗಳ ಕಾಲ ನೆರಳಿನಲ್ಲಿ ಒಣಗಿಸಿ, ನಂತರ ಅದನ್ನು ಭೂಮಿಗೆ ಹಾಕಬೇಕು. 9ನೇ ತರಗತಿ ಮಕ್ಕಳಿಗೆ ಬೀಜದುಂಡೆ ಭೂಮಿಗೆ ಹಾಕಲು ತಿಳಿಸಿದ್ದು, ಇನ್ನುಳಿದ ಮಕ್ಕಳು ತಮ್ಮ ಹೊಲಗಳ ಬದುವಿನಲ್ಲಿ, ಹೊರಭಾಗದ ಬಯಲು ಪ್ರದೇಶದಲ್ಲಿ ಬೀಜದುಂಡೆ ಹಾಕಲು ಸೂಚಿಸಲಾಗಿದೆ.

ಈ ವರ್ಷದ ಘೋಷವಾಕ್ಯದನ್ವಯ “ಮರು ರೂಪಿಸು, ಮರು ಸೃಷ್ಟಿಸು ಹಾಗೂ ಮರು ಸ್ಥಾಪಿಸು’ ಎಂಬಂತೆ ಕೋವಿಡ್‌ ಕರ್ಫ್ಯೂ ಸಮಯದಲ್ಲಿ ಮಕ್ಕಳು ಹಾಗೂ ಪಾಲಕರು ಹೊರಹೋಗಲಾರದ ಸಂದರ್ಭದಲ್ಲಿ ಅಗಸ್ತ್ಯ ತಂಡ ಕೋವಿಡ್‌ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ ಆನ್‌ಲೈನ್‌ ಮೂಲಕ ಬೀಜದುಂಡೆ ತಯಾರಿಸಿವ ಬಗೆ, ಅದರ ಉದ್ದೇಶ ಹಾಗೂ ಅದರಿಂದಾಗುವ ಲಾಭದ ಬಗ್ಗೆ ವಿವರಣೆ ನೀಡಿತ್ತು. ಇನ್ನು ಸುಮಾರು 20,000ಕ್ಕೂ ಹೆಚ್ಚು ಬೀಜದುಂಡೆ ತಯಾರಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.