ಸಮಸ್ಯೆ ಇತ್ಯರ್ಥಕ್ಕೆ ಮೋದಿ-ಜಿನ್ಪಿಂಗ್ ಸಮರ್ಥ : ರಷ್ಯಾ ಅಧ್ಯಕ್ಷ ಪುಟಿನ್ ಅಭಿಮತ
Team Udayavani, Jun 5, 2021, 7:24 PM IST
ಸೇಂಟ್ ಪೀಟರ್ಸ್ಬರ್ಗ್ (ರಷ್ಯಾ):“ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಇಬ್ಬರೂ ಜವಾಬ್ದಾರಿಯುತ ನಾಯಕರಾಗಿದ್ದು, ಭಾರತ-ಚೀನಾ ನಡುವಿನ ಗಡಿ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ಅವರಿಬ್ಬರೂ ಶಕ್ತರಾಗಿದ್ದಾರೆ. ಹಾಗಿರುವಾಗ, ಉಭಯ ದೇಶಗಳ ಗಡಿ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ಯಾವುದೇ ತೃತೀಯ ಶಕ್ತಿಯ ಅಗತ್ಯವಿಲ್ಲ” ಎಂದು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ.
ಇತ್ತೀಚೆಗೆ ರೂಪಿತವಾಗಿರುವ ಕ್ವಾಡ್ ಒಕ್ಕೂಟದ ಬಗ್ಗೆ ಕೇಳಲಾದ ಪ್ರಶ್ನೆಗೆ ಸುದೀರ್ಘ ಉತ್ತರ ಕೊಡುವಾಗ ಪುಟಿನ್ ಮೇಲಿನಂತೆ ತಿಳಿಸಿದ್ದಾರೆ. ಭಾರತ, ಅಮೆರಿಕ, ಜಪಾನ್ ಹಾಗೂ ಆಸ್ಟ್ರೇಲಿಯಾ ಸೇರಿ ಕ್ವಾಡ್ ರಚನೆ ಮಾಡಿಕೊಂಡಿದ್ದು, ಈ ಒಕ್ಕೂಟದಿಂದ ರಷ್ಯಾವನ್ನು ಹೊರಗಿಟ್ಟಿರುವುದಕ್ಕೆ ರಷ್ಯಾ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿತ್ತು. ಆದರೆ, ಈ ಅಸಮಾಧಾನವು ರಷ್ಯಾ-ಭಾರತ ನಡುವಿನ ಬಾಂಧವ್ಯಕ್ಕೆ ಯಾವುದೇ ಚ್ಯುತಿ ತರಲಾರದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ :ಲಾಕ್ ಡೌನ್ ಅವಧಿಯಲ್ಲಿ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಸಂತಾನಾಭಿವೃದ್ಧಿ
ಹಾಗೆಯೇ, ಚೀನಾ-ಭಾರತ ನಡುವಿನ ಗಡಿ ಸಮಸ್ಯೆಯ ಬಗ್ಗೆಯೂ ಮಾತನಾಡಿರುವ ಅವರು, “ನನಗೆ ಚೀನಾ ಅಧ್ಯಕ್ಷರ ಹಾಗೂ ಭಾರತದ ಪ್ರಧಾನಿಯ ಗುಣಸ್ವಭಾವಗಳು ಗೊತ್ತಿದೆ. ಅವರಿಬ್ಬರೂ ಸಮರ್ಥ ನಾಯಕರು. ಹಾಗಾಗಿ, ಎರಡೂ ದೇಶಗಳ ಸಮಸ್ಯೆಗಳನ್ನು ಅವರೇ ನಿಭಾಯಿಸಬಲ್ಲರು” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?