1.40 ಕೋಟಿ ಮೌಲ್ಯದ ಮದ್ಯ ಜಪ್ತಿ


Team Udayavani, Jun 5, 2021, 8:51 PM IST

04kpl-4

ಕೊಪ್ಪಳ: ಜಿಲ್ಲೆಯಲ್ಲಿ ಏ. 23ರಿಂದ ಜೂ. 3ರವರೆಗೆ 1,40,86,197 ರೂ. ಮೌಲ್ಯದ ವಿವಿಧ ಮಾದರಿಯ ಅಬಕಾರಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಬಕಾರಿ ಉಪ ಆಯುಕ್ತೆ ಸಿ. ಸೇಲಿನಾ ತಿಳಿಸಿದ್ದಾರೆ.

ಏ. 23ರಿಂದ ಜೂ. 3ರವರೆಗೆ ಅಬಕಾರಿ ಇಲಾಖೆಯಿಂದ ಜಿಲ್ಲಾದ್ಯಂತ 45 ಕಡೆಗಳಲ್ಲಿ ದಾಳಿ ಮಾಡಲಾಗಿದೆ. ಅವುಗಳಲ್ಲಿ 16 ಘೋರ, 7 ಬಿಎಲ್‌ಸಿ ಹಾಗೂ 15(ಎ) ಅಡಿ 24 ಸೇರಿದಂತೆ ಒಟ್ಟು 47 ಪ್ರಕರಣಗಳನ್ನು ದಾಖಲಿಸಲಾಗಿದ್ದು, 3 ಆರೋಪಿಗಳನ್ನು ಬಂಧಿ ಸಲಾಗಿದೆ.

ದಾಳಿ ವೇಳೆ 8 ವಾಹನಗಳು, 15069.390 ಲೀ. ಮದ್ಯ, 44.340 ಲೀಟರ್‌ ಬಿಯರ್‌, 5 ಲೀ. ಐಡಿ ಮತ್ತು 40,000 ಲೀ. ಮದ್ಯಸಾರವನ್ನು ಜಪ್ತಿ ಮಾಡಲಾಗಿದೆ. ಅವುಗಳ ಒಟ್ಟು ಮೌಲ್ಯ 1,40,86,197 ರೂ. ಆಗಿದೆ. ಕೋವಿಡ್‌-19 ಹಿನ್ನೆಲೆಯಲ್ಲಿ ಮೇ 17ರಿಂದ ಜೂ. 7ರ ಮಧ್ಯರಾತ್ರಿ 12ರ ವರೆಗೂ ಜಿಲ್ಲಾಧಿ ಕಾರಿಗಳು ಮದ್ಯ ಮಾರಾಟ ಸೇರಿದಂತೆ ಎಲ್ಲ ಚಟುವಟಿಕೆಗಳನ್ನು ನಿರ್ಬಂಧಿಸಿ ಆದೇಶಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ವಿಧದ ಸನ್ನದುಗಳನ್ನು ಇಲಾಖೆ ಸೀಲಿನಿಂದ ಸೀಲು ಮಾಡಿ ಬಂದ್‌ ಮಾಡಿಸಿದೆ.

ಲಾಕ್‌ಡೌನ್‌ ಅವಧಿಯಲ್ಲಿ ದೃಶ್ಯ ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ಬಂದ ವರದಿ ಅನುಸಾರ ಗಂಗಾವತಿ ವಲಯದ 2 ಸಿಎಲ್‌-7 ಸನ್ನದುಗಳನ್ನು ಡಿಸಿ ಆದೇಶದನ್ವಯ ಮೇ 24ರಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಮಾನತ್ತುಗೊಳಿಸಲಾಗಿದೆ. ವ್ಯಸನಿಗಳು ಇತರೆ ಮಾದಕ ವಸ್ತುಗಳಾದ ನಕಲಿ ಮದ್ಯ, ಕಳ್ಳಭಟ್ಟಿ ಸಾರಾಯಿ, ಸ್ಯಾನಿಟೈಸರ್‌, ವಾರ್ನಿಶ್‌ ನಂತಹ ರಾಸಾಯನಿಕ ವಸ್ತುಗಳನ್ನು ಸೇವನೆ ಮಾಡಬಾರದು. ಇದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಅಬಕಾರಿ ಉಪ ಆಯುಕ್ತ ಸಿ. ಸೇಲಿನಾ ಮೊ. 9449597170, ಕೊಪ್ಪಳ ಮೊ. 9449597175, ವಿಚಕ್ಷಣ ದಳದ ಸ್ವತಂತ್ರಕುಮಾರ ಮೊ. 9591795689, ರಮೇಶ ಅಗಡಿ ಮೊ. 7675114929, ಗಂಗಾವತಿ ಮೊ. 9740394078, ಕುಷ್ಟಗಿ ಮೊ. 9845947828 ಅವರನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.