ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಜೀವ ಉಳಿಸಿತು14,000 ಕಿ.ಮೀ ದೂರದಿಂದ ಬಂದ ಫೋನ್ ಕರೆ..!
Team Udayavani, Jun 6, 2021, 8:28 AM IST
ಹೊಸದಿಲ್ಲಿ: ಒಂದು ಫೋನ್ ಕರೆ ನಿಮ್ಮ ಜೀವನವನ್ನೇ ಬದಲಿಸಬಹುದು. ಹೌದು ಇಂತಹದ್ದೇ ಘಟನೆ ನಡೆದಿದೆ. ಸುಮಾರು 14,000 ಕಿ.ಮೀ ದೂರದಿಂದ ಬಂದ ಫೋನ್ ಕರೆಯೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಜೀವವನ್ನು ಉಳಿಸಿದೆ.
39 ವರ್ಷ ಪ್ರಾಯದ ವ್ಯಕ್ತಿಯೊಬ್ಬ ಫೇಸ್ ಬುಕ್ ಲೈವ್ ಮಾಡಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದಾಗ ಫೇಸ್ ಬುಕ್ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿ ಆತನನ್ನು ಆತ್ಮಹತ್ಯೆಯಿಂದ ರಕ್ಷಿಸುವಲ್ಲಿ ಸಫಲರಾಗಿದ್ದಾರೆ. ಈ ಘಟನೆ ನಡೆದಿದ್ದು ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ.
ಫೇಸ್ ಬುಕ್ ನ ಅಮೆರಿಕ ಕಚೇರಿಯಲ್ಲಿ ಈ ವಿಡಿಯೋವನ್ನು ಗಮನಿಸಿದ ಅಧಿಕಾರಿಗಳು ಕೂಡಲೇ ದಿಲ್ಲಿ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದಾರೆ.
ಜೂನ್ 3 ರ ಮಧ್ಯರಾತ್ರಿಯ ವೇಳೆ ಸೋಹನ್ ಲಾಲ್ (ಹೆಸರು ಬದಲಾಗಿದೆ) ನೆರೆಹೊರೆಯವರೊಂದಿಗೆ ವಾಗ್ವಾದ ನಡೆಸಿದ ಬಳಿಕ ಬೇಸರಗೊಂಡು, ಕೈಯಲ್ಲಿ ಅನೇಕ ಆಳವಾದ ಕಡಿತಗಳನ್ನು ಮಾಡಿಕೊಂಡಿದ್ದ. ಫೇಸ್ ಬುಕ್ ಲೈವ್ ನಲ್ಲಿ ಬೇಸರ ತೋಡಿಕೊಂಡಿದ್ದ. ಆದರೆ ಮಧ್ಯರಾತ್ರಿ ಸುಮಾರು 14,000 ಕಿ.ಮೀ ದೂರದಿಂದ ಬರುವ ಒಂದು ದೂರವಾಣಿ ಕರೆಯಿಂದ ಅವನ ಜೀವವನ್ನು ಉಳಿಸಲಾಗುವುದು ಎಂದು ಅವನಿಗೆ ತಿಳಿದಿರಲಿಲ್ಲ. ಸಿಹಿ ತಿಂಡಿ ಅಂಗಡಿಯಲ್ಲಿ ಕೆಲಸ ಮಾಡುವ ಸೋಹನ್ ಲಾಲ್ ಮತ್ತು ಇಬ್ಬರು ಚಿಕ್ಕ ಮಕ್ಕಳೊಂದಿಗೆ ವಾಸವಾಗಿದ್ದಾನೆ. 2016 ರಲ್ಲಿ ಪತ್ನಿಯ ಮರಣದ ನಂತರ ಸೋಹನ್ ಲಾಲ್ ಭಾವನಾತ್ಮಕವಾಗಿ ದುರ್ಬಲರಾಗಿದ್ದರು. ನೆರೆಹೊರೆಯವರೊಂದಿಗಿನ ವಾಗ್ವಾದವು ಆತ್ಮಹತ್ಯೆಯಂತಹ ಕಠಿಣ ಹೆಜ್ಜೆ ಇಡಲು ಪ್ರೇರೇಪಿಸಿತು ಎಂದು ಫೇಸ್ ಬುಕ್ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:50 ಪೈಸೆಯ ಶಾಂಪೂ ಮಾರಿ 500 ಕೋಟಿ ದುಡಿದ ಕಥೆ
ಮಧ್ಯರಾತ್ರಿ 12.50ರ ಸುಮಾರಿಗೆ ಈ ಘಟನೆ ನಡೆದಿದ್ದು, ಕೂಡಲೇ ಫೇಸ್ ಬುಕ್ ಅಧಿಕಾರಿಗಳು ದಿಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸೋಹನ್ ಲಾಲ್ ನ ವಿಳಾಸ, ವಿಡಿಯೋಗಳನ್ನು ಕೂಡಲೇ ಪಾಲಂ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪಾಲಂ ಠಾಣೆಯ ಪಿಎಸ್ ಐ ಅಮಿತ್ ಕುಮಾರ್ ಕೂಡಲೇ ಸ್ಥಳಕ್ಕಾಗಮಿಸಿ ವ್ಯಕ್ತಿಯನ್ನು ರಕ್ಷಿಸುವಲ್ಲಿ ಸಫಲರಾದರು. ಸೋಹನ್ ಲಾಲ್ ಗೆ ತೀವ್ರ ರಕ್ತಸ್ರಾವವಾಗಿತ್ತು. ಮೊದಲು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಏಮ್ಸ್ ಗೆ ದಾಖಲಿಸಲಾಯಿತು ಎಂದು ಪೊಲೀಸ್ ಮೂಲಗಳು ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು