ಯುವತಿ ನಿಶ್ಚಿತಾರ್ಥ ಮುರಿಯಲು ಯತ್ನ; ಸಹೋದರನ ಭೀಕರ ಕೊಲೆ


Team Udayavani, Jun 6, 2021, 10:58 AM IST

ಯುವತಿ ನಿಶ್ಚಿತಾರ್ಥ ಮುರಿಯಲು ಯತ್ನ; ಸಹೋದರನ ಭೀಕರ ಕೊಲೆ

ಕಲಬುರಗಿ: ನಿಶ್ಚಿತಾರ್ಥ ಆಗುತ್ತಿದ್ದ ಸಂಬಂಧ ಮುರಿಯಲು ಯತ್ನಿಸಿದ ಹಿನ್ನೆಲೆಯಲ್ಲಿ ನಡೆದ ಜಗಳದಲ್ಲಿ ಮಗನ ಕೊಲೆಯಾಗಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಸಂಬಂಧ ಮುರಿಯುವ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಗುಂಪೊಂದು ಮಗನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ ಅಟಲ್‌ ಬಿಹಾರಿ ವಾಜಪೇಯಿ ಬಡಾವಣೆ ಬಳಿ ಶನಿವಾರ ನಡೆದಿದೆ.

ನಿಖಿಲ್ ರಾಜು ಕನೇಗಾರ (22) ಕೊಲೆಯಾಗಿರುವ ಯುವಕ. ಈತ ಕರುಣೇಶ್ವರ ನಗರದ ನಿವಾಸಿಯಾಗಿದ್ದ. ಈತನ ತಾಯಿ ಕಮಲಾ ಎನ್ನುವರಿಗೆ ಗಂಭೀರ ಗಾಯಗಳಾಗಿವೆ. ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಈಕೆಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ನಿಖಿಲ್ ಸಹೋದರ ವಿಕಾಸ ಸೇರಿದಂತೆ ಮೂವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಮಲಮ್ಮ ತರಕಾರಿ ಮಾರಾಟ ಮಾಡಿಕೊಂಡಿದ್ದರೆ, ಪತಿ ರಾಜು ರಾಮ ಮಂದಿರ ಸಮೀಪದ ಕಾಲೇಜೊಂದರಲ್ಲಿ ಅಡುಗೆ ತಯಾರಕಾಗಿ ಕೆಲಸಮಾಡುತ್ತಿದ್ದಾರೆ. ಮೂವರು ಮಕ್ಕಳೊಂದಿಗೆ ಕರುಣೇಶ್ವರ ನಗರದಲ್ಲಿ ವಾಸವಾಗಿದ್ದರು. ಕೊಲೆ ಯಾಗಿರುವ ನಿಖಿಲ್‌ ಭಜಿ ಬಂಡಿ ಇಟ್ಟುಕೊಂಡಿದ್ದ. ನಿಖಿಲ್ ನ ಸಹೋದರಿ ಮದುವೆಯನ್ನು ಮುಂಬೈನಲ್ಲಿರುವ ವ್ಯಕ್ತಿಯ ಜತೆಗೆ ನಿಗದಿಪಡಿಸಲಾಗಿತ್ತು. ಸೋಮವಾರ ಸರಳವಾಗಿ ನಿಶ್ಚಿತಾರ್ಥ ನಡೆಸಲು ತಯಾರಿ ನಡೆದಿತ್ತು. ಇದನ್ನು ಅರಿತ ಸ್ಟೇಷನ್‌ ಬಜಾರ ಪ್ರದೇಶ ಯುವಕರಿಬ್ಬರು ಸೇರಿಕೊಂಡು ಸಂಬಂಧ ಮುರಿಯಲು ಕುತಂತ್ರ ಮಾಡಿ, ಯುವಕನಿಗೆ ಕರೆ ಮಾಡಿ ಇಲ್ಲದ್ದನ್ನು ಹೇಳಿದ್ದರು. ಆ ಯುವಕ ಮರಳಿ ಯುವತಿ ಮನೆಯವರಿಗೆ ತಿಳಿಸಿದ್ದ. ಅಲ್ಲದೇ ಆ ಸಂಖ್ಯೆಗಳನ್ನು ನೀಡಿದ್ದರು. ಆ ಸಂಖ್ಯೆಗೆ ಶನಿವಾರ ಕರೆ ಮಾಡಿದಾಗ ವಾಗ್ವಾದ ಆಗಿತ್ತು. ಅಲ್ಲದೇ ರಾಮ ಮಂದಿರ ಬಳಿ ಇದ್ದೇವೆ ಬಾ ಎಂದು ಕರೆದಿದ್ದರು.

ಅಲ್ಲಿಗೆ ಹೋದಾಗ ವಾಜಪೇಯಿ ಲೇಔಟ್‌ ಹತ್ತಿರವಿದ್ದೇವೆ ಬನ್ನಿ ಎಂದು ಸವಾಲು ಹಾಕಿದ್ದರು. ನಿಖಿಲ್ ಹಾಗೂ ಮನೆಯವರು ಅಲ್ಲಿಗೆ ಹೋಗಿದ್ದರು. ಇಲ್ಲದ್ದು ಹೇಳಿ ಹೀಗೆ ಮಾಡಬೇಡಿ ಎಂದು ತಿಳಿ ಹೇಳಿದರು. ಕೇಳದೇ ವಾಗ್ವಾದಕ್ಕಿಳಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದರಿಂದ ಕುಪಿತಗೊಂಡ ನಿಖೀಲ್‌ ಉದಯನಿಗೆ ಹೊಡೆದಿದ್ದ. ಆಗ ಆತ ತನ್ನ ಸ್ನೇಹಿತರಿಗೆ ಕರೆ ಮಾಡಿ ಕರೆಸಿಕೊಂಡು ಮಾರಕಾಸ್ತ್ರಗಳಿಂದ ಎಲ್ಲರ ಮೇಲೆ ದಾಳಿ ನಡೆಸಿದ. ದುಷ್ಕರ್ಮಿಗಳೆಲ್ಲರೂ ಸೇರಿಕೊಂಡು ನಡೆಸಿದ ದಾಳಿಯಲ್ಲಿ ಗಂಭೀರ ಗಾಯಗೊಂಡು ನಿಖಿಲ್‌ ಕೊನೆಯುಸಿ ರೆಳೆದಿದ್ದಾನೆ. ಉಳಿದ ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಡಿಸಿಪಿ ಕಿಶೋರಬಾಬು, ಎಸಿಪಿ ಜೆ.ಎಚ್‌.ಇನಾಮದಾರ, ಇನ್‌ಸ್ಪೆಕ್ಟರ್‌ ಶಿವಾನಂದ ಗಾಣಿಗೇರ ಮತ್ತು ಸಿಬ್ಬಂದಿ ಭೇಟಿ ನೀಡಿದ್ದಾರೆ. ಈ ಕುರಿತು ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಆರೋಪಿತರ ಪತ್ತೆಗೆ ಜಾಲ ಬೀಸಲಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.