80 ಕೋಟಿ ಜನರಿಗೆ ಪಡಿತರ ನೀಡಿದ್ದೇವೆ : ಕೇಜ್ರಿವಾಲ್ ಆರೋಪಕ್ಕೆ ಕೇಂದ್ರ ತಿರುಗೇಟು
Team Udayavani, Jun 6, 2021, 4:11 PM IST
ನವದೆಹಲಿ : ಫಲಾನುಭವಿಗಳ ಮನೆ ಬಾಗಿಲಿಗೆ ಉಚಿತ ಪಡಿತರ ಯೋಜನೆಗೆ ತಡೆಯೊಡ್ಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಮಾಡಿರುವ ಆರೋಪಕ್ಕೆ ಕೇಂದ್ರ ಸರ್ಕಾರ ತಿರುಗೇಟು ನೀಡಿದೆ.
ಇಂದು ದೆಹಲಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಬಿಜೆಪಿ ನಾಯಕಿ ಮೀನಾಕ್ಷಿ ಲೇಖಿ ಸೇರಿದಂತೆ ಹಲವು ನಾಯಕರು, ಕೇಜ್ರಿವಾಲ್ ಸರ್ಕಾರ ಮಾಡಿರುವ ಆರೋಪಕ್ಕೆ ಪ್ರತ್ಯುತ್ತರ ನೀಡಿದರು. ಕೇಂದ್ರ ಸರ್ಕಾರ 80 ಕೋಟಿ ಜನರಿಗೆ ಉಚಿತವಾಗಿ ಪಡಿತರ ನೀಡಿದೆ. ದೆಹಲಿಯ 72 ಲಕ್ಷ ಜನರು ಈ ಸೌಲಭ್ಯ ಪಡೆದಿದ್ದಾರೆ ಎಂದು ಹೇಳಿದರು.
ಇನ್ನು ಇಂದು ಮಧ್ಯಾಹ್ನ ಮಾಧ್ಯಮಗಳ ಎದುರು ಕೇಂದ್ರ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ , ‘ಮುಖ್ಯಮಂತ್ರಿ ಘರ್ ಘರ್ ರೇಷನ್ ಯೋಜನಾ’ ಹೆಸರಿನಡಿ ಬಡವರ ಮನೆ ಬಾಗಿಲಿಗೆ ಉಚಿತವಾಗಿ ಪಡಿತರ ತಲುಪಿಸುವ ಯೋಜನೆಗೆ ನೀವು ತಡೆ ನೀಡಿದಿರಿ. ನಂತರ ಈ ಯೋಜನೆಗೆ ನಾವು ಯಾವುದೆ ಹೆಸರು ಇಡುವುದು ಬೇಡ ಎನ್ನುವ ತೀರ್ಮಾನ ತೆಗೆದುಕೊಂಡೆವು. ಅವಾಗಲೂ ನೀವು ಈ ಮಹತ್ವಾಕಾಂಕ್ಷೆ ಯೋಜನೆಗೆ ಅಡ್ಡಿ ಮಾಡಿದಿರಿ. ಕೇಂದ್ರ ಸರ್ಕಾರದ ಅನುಮತಿ ಇಲ್ಲದೆ ಯೋಜನೆ ಜಾರಿ ಇಲ್ಲ ಎಂದು ಕಾರಣ ನೀಡಿದಿರಿ.
ಈ ಯೋಜನೆಗೆ ಅನುಮತಿ ಕೋರಿ ಕಳೆದ ಕೆಲ ತಿಂಗಳುಗಳಿಂದ 5 ಬಾರಿ ಪತ್ರ ಬರೆದಿದ್ದೇನೆ. ಕೇಂದ್ರದಿಂದ ಇನ್ನು ಯಾವ ರೀತಿಯ ಅನುಮತಿ ಪಡೆಯಬೇಕೆ ಎಂದು ? ಕೇಜ್ರಿವಾಲ್ ಪ್ರಶ್ನಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ