ಸಸಿ ನೆಟ್ಟು ಪರಿಸರ ಬೆಳೆಸಿ-ಉಳಿಸಿ
ಕೊರೊನಾ ಸೋಂಕಿತರ ಆಮ್ಲಜನಕ ಸಮಸ್ಯೆಗೆ ಪರಿಸರ ಹಾನಿಯೇ ಕಾರಣ: ಚಂದ್ರಶೇಖರ ಶ್ರೀ
Team Udayavani, Jun 6, 2021, 6:36 PM IST
ಬೆಳಗಾವಿ: ನಾಡಿನ ಪರಿಸರ ಶುದ್ಧ ಇದ್ದರೆ ಎಂತಹ ರೋಗವನ್ನೂ ತಡೆಗಟ್ಟಬಹುದು. ಕಾರಣ ಪ್ರತಿಯೊಬ್ಬರು ಮನೆಯ ಮುಂದೆ ಸಸಿಗಳನ್ನು ನೆಟ್ಟು ಪರಿಸರ ಬೆಳೆಸಬೇಕು ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಸಸಿ ನೆಡುವುದರ ಮೂಲಕ ವಿಶ್ವಪರಿಸರ ದಿನ ಆಚರಿಸಿ ಮಾತನಾಡಿದ ಅವರು, ಸಮಾಜದಲ್ಲಿ ಜನರು ಪರಿಸರ ರಕ್ಷಣೆ ಮಾಡುತ್ತಿಲ್ಲ. ಇದರಿಂದ ಹೊರಗಡೆ ಬರಲು ಸಾಧ್ಯವಾಗದ ಸ್ಥಿತಿಯಲ್ಲಿ ನಾವಿದ್ದೇವೆ. ಆಮ್ಲಜನಕ ಸಿಗುತ್ತಿಲ್ಲ ಎಂದು ಸಾಕಷ್ಟು ಪರಿಶ್ರಮ ಪಡುತ್ತಿದ್ದೇವೆ. ಮರಗಳನ್ನು ಉಳಿಸಿ ಬೆಳೆಸುವಲ್ಲಿ ವಿಫಲವಾಗಿದ್ದೇವೆ ಎಂದು ವಿಷಾದಿಸಿದರು.
ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕಿತರು ಆಕ್ಸಿಜನ್ಗಾಗಿ ಹೋರಾಟ ನಡೆಸುತ್ತಿದ್ದಾರೆ. ಅಲ್ಲದೆ ಸೂಕ್ತ ಸಂದರ್ಭದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟ ಉದಾಹರಣೆಗಳು ಸಾಕಷ್ಟಿದೆ. ಈಗಲೂ ನಾವು ಪರಿಸರ ಬೆಳೆಸದಿದ್ದರೆ ಮುಂದೆ ಇನ್ನೂ ಹೆಚ್ಚಿನ ಅನಾಹುತ ಎದುರಿಸಬೇಕಾಗುತ್ತದೆ ಎಂದು ಹೇಳಿದರು. ಅರಳಿಮರ ನಿತ್ಯ ಆಮ್ಲಜನಕ ಕೊಡುತ್ತದೆ. ಆಲದ ಮರ ಒಂದು ದಿನಕ್ಕೆ 20 ಗಂಟೆಗಳ ಕಾಲ ಆಮ್ಲಜನಕವನ್ನು ಕೊಡುತ್ತದೆ. ಬೇವಿನ ಮರ 18 ಗಂಟೆ ಆಮ್ಲಜನಕವನ್ನು ಬಿಡುಗಡೆ ಮಾಡುತ್ತದೆ. ಪ್ರತಿಯೊಂದು ಮರಗಳನ್ನು ನಾವು ಬೆಳೆಸುವುದರಿಂದ ನಮಗೆ ಬಹಳ ಲಾಭವಿದೆ. ಜನರು ಇದನ್ನು ಅರಿತು ಗಿಡಗಳನ್ನು ಬೆಳೆಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು