ನಗದು ವ್ಯವಹಾರದತ್ತ ಮತ್ತೆ ಹೆಚ್ಚಿದ ಜನರ ಒಲವು


Team Udayavani, Jun 7, 2021, 6:50 AM IST

ನಗದು ವ್ಯವಹಾರದತ್ತ ಮತ್ತೆ ಹೆಚ್ಚಿದ ಜನರ ಒಲವು

ಕೇಂದ್ರ ಸರಕಾರ ದೇಶದಲ್ಲಿ ಡಿಜಿಟಲ್‌ ವ್ಯವಹಾರವನ್ನು ವೃದ್ಧಿಸುವ ಮೂಲಕ ನಗದು ಚಲಾವಣೆಗೆ ಕಡಿವಾಣ ಹಾಕಲು ನಿರಂತರವಾಗಿ ಶ್ರಮಿಸುತ್ತಿದೆಯಾದರೂ ಜನರು ಮಾತ್ರ ಇನ್ನೂ ನಗದು ವ್ಯವಹಾರದ ಮೇಲೆಯೇ ಹೆಚ್ಚಿನ ಒಲವು ತೋರುತ್ತಿದ್ದಾರೆ. ಈ ಹಿಂದಿನ ಎರಡು ವರ್ಷಗಳಲ್ಲಿ ದೇಶದಲ್ಲಿ ಡಿಜಿಟಲ್‌ ವ್ಯವಹಾರದ ಪ್ರಮಾಣ ಗಮನಾರ್ಹ ಏರಿಕೆಯನ್ನು ಕಂಡಿದೆಯಾದರೂ ಒಟ್ಟಾರೆಯಾಗಿ ಈಗಲೂ ನಗದು ವ್ಯವಹಾರವೇ ಮುಂಚೂಣಿಯಲ್ಲಿದೆ. ಕೊರೊನಾದಿಂದಾಗಿ ಸತತ ಎರಡು ವರ್ಷಗಳಿಂದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಮಾತ್ರವಲ್ಲದೆ ಕೊರೊನಾ ಎರಡನೇ ಅಲೆ ಕಾಣಿಸಿಕೊಂಡ ಬಳಿಕ ದೇಶದ ಹಲವು ರಾಜ್ಯಗಳಲ್ಲಿ ಲಾಕ್‌ಡೌನ್‌, ಕಠಿನ ನಿರ್ಬಂಧ ಮತ್ತಿತರ ಕ್ರಮಗಳನ್ನು ಜಾರಿಗೆ ತಂದಿರುವುದರಿಂದ ಜನರು ಮುಂಜಾಗ್ರತೆ ಕ್ರಮವಾಗಿ ತಮ್ಮ ಕೈಯಲ್ಲಿ ಒಂದಿಷ್ಟು ನಗದನ್ನು ಇರಿಸಿಕೊಳ್ಳಲು ಆಸಕ್ತಿ ತೋರುತ್ತಿದ್ದಾರೆ. ಇದೇ ವೇಳೆ ಖರ್ಚಿನ ಮೇಲೆ ಹಿಡಿತ ಸಾಧಿಸುವ ಮೂಲಕ ಭವಿಷ್ಯದ ದೃಷ್ಟಿಯಿಂದ ಮಿತವ್ಯಯಿಗಳಾಗುತ್ತಿದ್ದಾರೆ.

ಡಿಜಿಟಲ್‌ ವ್ಯವಹಾರದಲ್ಲಿ ಇಳಿಕೆ
2020-21ನೇ ಸಾಲಿನ ಕೊನೆಯ ತ್ತೈಮಾಸಿಕದ ಅಂತ್ಯಕ್ಕೆ ಡಿಜಿಟಲ್‌ ಪಾವತಿ ಪ್ರಮಾಣ ಹೆಚ್ಚಳ ಕಂಡಿತ್ತು. ನ್ಯಾಶನಲ್‌ ಪೇಮೆಂಟ್ಸ್‌ ಕಾರ್ಪೊರೇಶನ್‌ ಆಫ್ ಇಂಡಿಯಾದ ಅಂಕಿಅಂಶಗಳ ಪ್ರಕಾರ ಮಾರ್ಚ್‌ಗೆ ಹೋಲಿಸಿದಲ್ಲಿ ಎಪ್ರಿಲ್‌ ತಿಂಗಳಿನಲ್ಲಿ ಡಿಜಿಟಲ್‌ ಪಾವತಿಯ ಗಾತ್ರ ಮತ್ತು ಮೌಲ್ಯಗಳೆರಡರಲ್ಲೂ ಇಳಿಕೆ ದಾಖಲಾ ಗಿದೆ. ಮಾರ್ಚ್‌ನಲ್ಲಿ ಯುನಿಫೈಡ್‌ ಪೇಮೆಂಟ್ಸ್‌ ಇಂಟರ್‌ಪೇಸ್‌ (ಯುಪಿಐ)ಮೂಲಕ ಗರಿಷ್ಠ 5.04ಲಕ್ಷ ಕೋ.ರೂ.ಗಳಷ್ಟು ವ್ಯವಹಾರ ನಡೆದಿದ್ದರೆ ಎಪ್ರಿಲ್‌ನಲ್ಲಿ ಇದು 4.93 ಲಕ್ಷ ಕೋ. ರೂ.ಗಳಿಗೆ ಇಳಿಕೆಯಾಗಿದೆ. ಒಟ್ಟಾರೆ ಯುಪಿಐ ವಹಿವಾಟಿನ ಪ್ರಮಾ ಣವೂ ಇಳಿಕೆ ಕಂಡಿದ್ದು ಮಾರ್ಚ್‌ನಲ್ಲಿ 273 ಕೋಟಿ ಇದ್ದ ವಹಿವಾಟು ಎಪ್ರಿಲ್‌ನಲ್ಲಿ 264 ಕೋಟಿಗೆ ಇಳಿದಿದೆ. ಅಂತೆಯೇ ಐಎಂಪಿಎಸ್‌ ಮಾರ್ಚ್‌ನಲ್ಲಿ 3.27ಲಕ್ಷ ಕೋ. ರೂ. ಮೌಲ್ಯದ 36.31 ಕೋಟಿ ವಹಿವಾಟು ನಡೆಸಿದ್ದರೆ ಎಪ್ರಿಲ್‌ನಲ್ಲಿ 2.29 ಲಕ್ಷ ಕೋಟಿ ರೂ. ಮೌಲ್ಯದ 32.99 ಕೋಟಿ ವಹಿವಾಟು ನಡೆಸಲಷ್ಟೇ ಶಕ್ತವಾಗಿದೆ.

ಶೇ. 14.2ರಷ್ಟು ಹೆಚ್ಚಳ
ಈ ವರ್ಷ ಎಪ್ರಿಲ್‌ 9ರಿಂದ ಚಲಾವಣೆಯಲ್ಲಿರುವ ನಗದಿನ ಪ್ರಮಾಣ ಏರಿಕೆಯಾಗುತ್ತಿದ್ದು ಮೇ 14ರ ವರೆಗೆ ಇದು ದಾಖಲೆಯ 29,57,854 ಕೋ. ರೂ. ಗಳಿಗೆ ಏರಿದೆ ಎಂದು ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾದ ಅಂಕಿ ಅಂಶಗಳು ತಿಳಿಸಿವೆ.
ಮೇ 7ರಿಂದೀಚೆಗೆ ನಗದು ಚಲಾವಣೆಯು ಪ್ರತೀ ವಾರ 17,856 ಕೋ. ರೂ. ಮತ್ತು ಈ ಹಣಕಾಸು ವರ್ಷದಲ್ಲಿ ಈವರೆಗೆ 99,214 ಕೋಟಿ ರೂ. ಜಿಗಿತ ಕಂಡಿದೆ. ಮಾರ್ಚ್‌ 19ರಂದು ಚಲಾವಣೆಯಲ್ಲಿದ್ದ ನಗದು 28,49,641 ಕೋ. ರೂ.ಗಳಾಗಿತ್ತು. ಈ ಹಣಕಾಸು ವರ್ಷದಲ್ಲಿ ಇದುವರೆಗೆ ಚಲಾವಣೆಯಲ್ಲಿರುವ ನಗದಿನ ಪ್ರಮಾಣದಲ್ಲಿ ಶೇ.14.2ರಷ್ಟು ಏರಿಕೆಯಾಗಿದೆ.

ನಗದು ಪ್ರಮಾಣ ಹೆಚ್ಚಲು ಕಾರಣವೇನು?
ಆರ್ಥಿಕ ಅನಿಶ್ಚತತೆಯು ಪರಿಸ್ಥಿತಿ ಎದುರಾದಾಗಲೆಲ್ಲ ಬ್ಯಾಂಕ್‌ಗಳಿಂದ ನಗದು ಹಿಂಪಡೆಯುವಿಕೆ ಹೆಚ್ಚಾಗುವುದು ಸಾಮಾನ್ಯ. ಕೊರೊನಾ ಎರಡನೇ ಅಲೆ ತೀವ್ರಗೊಂಡ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳು ಲಾಕ್‌ಡೌನ್‌, ಕಠಿನ ನಿರ್ಬಂಧಗಳನ್ನು ಹೇರಿದುದರಿಂದಾಗಿ ಜನರು ತಮ್ಮ ಆರೋಗ್ಯದ ದೃಷ್ಟಿಯಿಂದ ಕೈಯಲ್ಲಿ ಒಂದಿಷ್ಟು ಹಣವನ್ನು ಇರಿಸಿಕೊಳ್ಳುವುದು ಸುರಕ್ಷಿತ ಎಂದು ಭಾವಿಸುತ್ತಿರುವುದೇ ನಗದು ಚಲಾವಣೆ ಹೆಚ್ಚಲು ಪ್ರಮುಖ ಕಾರಣವಾಗಿದೆ. ಅಲ್ಲದೆ ಕಠಿನ ನಿರ್ಬಂಧಗಳಿಂದಾಗಿ ತುರ್ತು ಸಂದರ್ಭದಲ್ಲಿ ಹಣ ವಿಥ್‌ಡ್ರಾ ಮಾಡಲು ಸಾಧ್ಯವಾಗದಿರುವ ಭೀತಿಯ ಕಾರಣದಿಂದಾಗಿಯೂ ಜನರು ಬ್ಯಾಂಕ್‌ಗಳಿಂದ ಹಣ ವಿಥ್‌ಡ್ರಾ ಮಾಡಿ ಮನೆಯಲ್ಲಿ ಇರಿಸಿಕೊಳ್ಳಲು ಮುಂದಾಗಿದ್ದಾರೆ. ಆದರೆ ಇದೇ ವೇಳೆ ಜನರು ಹಣವನ್ನು ಬೇಕಾಬಿಟ್ಟಿಯಾಗಿ ವ್ಯಯಿಸದೆ ಅದನ್ನು ಜೋಪಾನವಾಗಿ ಇರಿಸಿಕೊಂಡಿದ್ದಾರೆ. ಸಂಭಾವ್ಯ ಆರೋಗ್ಯ ತುರ್ತು ಪರಿಸ್ಥಿಯನ್ನು ಎದುರಿಸುವುದೇ ಸದ್ಯ ಜನರ ಮೊದಲ ಆದ್ಯತೆಯಾಗಿದೆ ಎಂದು ಹಣಕಾಸು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.