ಹಿಂದುಳಿದ ಜಿಲ್ಲೆಗಳೇ ಲಸಿಕೆಯಲ್ಲಿ ಮುಂದು! ಉತ್ತರ ಕರ್ನಾಟಕದಲ್ಲಿ ಗುರಿ ಸಾಧನೆ ಹೆಚ್ಚು

ಕರಾವಳಿಯಲ್ಲಿ ಹಿನ್ನಡೆ

Team Udayavani, Jun 8, 2021, 7:00 AM IST

ಹಿಂದುಳಿದ ಜಿಲ್ಲೆಗಳೇ ಲಸಿಕೆಯಲ್ಲಿ ಮುಂದು! ಉತ್ತರ ಕರ್ನಾಟಕದಲ್ಲಿ ಗುರಿ ಸಾಧನೆ ಹೆಚ್ಚು

ಬೆಂಗಳೂರು : ರಾಜ್ಯದಲ್ಲಿ “ಹಿಂದುಳಿದ ಪ್ರದೇಶಗಳು’ ಎಂದು ಗುರುತಿಸಲ್ಪಡುವ ಭಾಗಗಳೇ ಕೊರೊನಾ ಲಸಿಕೆ ಅಭಿಯಾನದಲ್ಲಿ ಮುಂಚೂಣಿಯಲ್ಲಿವೆ. ಉತ್ತರ ಕರ್ನಾಟಕ ಭಾಗದ ಬಹುತೇಕ ಎಲ್ಲ ಜಿಲ್ಲೆಗಳು ಜನಸಂಖ್ಯಾವಾರು ಲಸಿಕೆ ಹಂಚಿಕೆ ಗುರಿ ಸಾಧನೆಯಲ್ಲಿ ಮುಂದಿದ್ದರೆ, ದಕ್ಷಿಣ ಕರ್ನಾಟಕದ ಜಿಲ್ಲೆಗಳು ಹಿಂದುಳಿದಿವೆ.

ಮೇಲ್ನೋಟಕ್ಕೆ ಬೆಂಗಳೂರು, ಮೈಸೂರು, ತುಮಕೂರಲ್ಲಿ ಲಸಿಕೆ ಪಡೆದ ಜನರ ಸಂಖ್ಯೆ ಹೆಚ್ಚಿರಬಹುದು. ಆದರೆ ಜಿಲ್ಲೆಗಳಲ್ಲಿ ಲಸಿಕೆ ಪಡೆಯಲು ಅರ್ಹರಾದ 18 ವರ್ಷ ಮೇಲ್ಪಟ್ಟವರ ಜನಸಂಖ್ಯೆಯಲ್ಲಿ ಶೇಕಡಾ ಎಷ್ಟು ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ ಎಂಬುದರ ಆಧಾರದಲ್ಲಿ ಆ ಜಿಲ್ಲೆಯ ಗುರಿ ಸಾಧನೆಯನ್ನು ಪರಿಗಣಿಸಲಾಗುತ್ತದೆ. ಉದಾಹರಣೆಗೆ, ಹಾವೇರಿಯ ಜಿಲ್ಲೆಯಲ್ಲಿ ಲಸಿಕೆಗೆ ಅರ್ಹ 20 ಲಕ್ಷ ಜನರಲ್ಲಿ ಸದ್ಯ 1.7 ಲಕ್ಷ ಮಂದಿ ಲಸಿಕೆ ಪಡೆದಿದ್ದಾರೆ. ಆ ಜಿಲ್ಲೆಯ ಗುರಿಸಾಧನೆ ಶೇ. 8.3ರಷ್ಟಿದೆ.
ರಾಜ್ಯ ಕೊರೊನಾ ವಾರ್‌ ರೂಂ ಮಾಹಿತಿ ಪ್ರಕಾರ, ಉತ್ತರ ಕರ್ನಾಟಕದ 12 ಜಿಲ್ಲೆಗಳಲ್ಲಿ ಸರಾಸರಿ ಲಸಿಕೆ ಗುರಿ ಸಾಧನೆ ಶೇ. 6ರಷ್ಟಿದೆ. ಆದರೆ ದಕ್ಷಿಣ ಕರ್ನಾಟಕದ 15 ಜಿಲ್ಲೆಗಳಲ್ಲಿ ಸರಾಸರಿ ಶೇ. 3.5ರಷ್ಟಿದೆ. ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಇದು ಶೇ. 3.8ರಷ್ಟಿದೆ.

ಸೋಂಕು ಹೆಚ್ಚಳವೇ ಹಿನ್ನಡೆಗೆ ಕಾರಣ
ಸೋಂಕಿಗೆ ಒಳಗಾದವರಿಗೆ 3 ತಿಂಗಳ ಬಳಿಕ ಲಸಿಕೆ ಎಂಬ ನಿಯಮವಿದ್ದು, ಹಲವರು ಲಸಿಕೆಯಿಂದ ದೂರ ಉಳಿದಿದ್ದಾರೆ. ಸೋಂಕು ಹೆಚ್ಚಿರುವಾಗ ಜನದಟ್ಟಣೆ, ಸರತಿಯ ಸಹವಾಸವೇ ಬೇಡ ಎಂದೂ ಹಿಂದೇಟು ಹಾಕುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಗುರಿಸಾಧನೆಗೆ ಹಿನ್ನಡೆಯಾಗಿದೆ. ಈ ಜಿಲ್ಲೆಗಳಲ್ಲಿ ಜನಸಂಖ್ಯೆ ಹೆಚ್ಚಿದ್ದು, ಹಂಚಿಕೆ ವ್ಯತ್ಯಯವಾಗಿರುವ ಸಾಧ್ಯತೆಗಳೂ ಇವೆ.

ಉತ್ತರ ಕರ್ನಾಟಕ ಯಾಕೆ ಮುಂದು?
– ಸೋಂಕು ಮತ್ತು ಲಸಿಕೆ ಕುರಿತು ಹೆಚ್ಚಿನ ಜನರಲ್ಲಿ ಹೆಚ್ಚಿನ ಜಾಗೃತಿ.
– ಸೋಂಕಿನ ತೀವ್ರತೆ ಕಡಿಮೆ ಇರುವ ಕಾರಣ ಭೀತಿಯಿಲ್ಲದೆ ಲಸಿಕೆ ಪಡೆಯುತ್ತಿರುವುದು.
– ವಿಶೇಷ ಅಭಿಯಾನಗಳನ್ನು ಕೈಗೊಳ್ಳುತ್ತಿರುವುದು.
– ಜನಸಂಖ್ಯೆ ಕಡಿಮೆ ಹಿನ್ನೆಲೆಯಲ್ಲಿ ವ್ಯವಸ್ಥಿತ ನಿರ್ವಹಣೆ.

ಕರಾವಳಿಯಲ್ಲೂ ಹಿನ್ನಡೆ
ಕರಾವಳಿ ಜಿಲ್ಲೆಗಳಲ್ಲಿಯೂ ಲಸಿಕೆ ಅಭಿಯಾನಕ್ಕೆ ಹಿನ್ನಡೆಯಾಗಿದೆ. ಗುರಿಸಾಧನೆಯಲ್ಲಿ ಬೆಂಗಳೂರು ನಗರ ಜಿಲ್ಲೆ ಬಿಟ್ಟರೆ ಉಡುಪಿ ಎರಡನೇ ಸ್ಥಾನದಲ್ಲಿದೆ. ಲಸಿಕೆಗೆ ಗುರುತಿಸಿರುವ ಜನಸಂಖ್ಯೆ ಪೈಕಿ ಉಡುಪಿಯಲ್ಲಿ ಶೇ. 3.2, ಉತ್ತರ ಕನ್ನಡದಲ್ಲಿ ಶೇ. 4.3, ದಕ್ಷಿಣ ಕನ್ನಡ ಶೇ. 4.1ರಷ್ಟು ಮಂದಿ ಮಾತ್ರ ಲಸಿಕೆ ಪಡೆದಿದ್ದಾರೆ.

– ಜಯಪ್ರಕಾಶ್ ಬಿರಾದರ್

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.