ಬಿಡುವಿಲ್ಲದಂತೆ ಕೋವಿಡ್‌ಗೆ ಶ್ರಮಿಸಿದ್ದೇನೆ


Team Udayavani, Jun 8, 2021, 11:20 AM IST

ಬಿಡುವಿಲ್ಲದಂತೆ ಕೋವಿಡ್‌ಗೆ ಶ್ರಮಿಸಿದ್ದೇನೆ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಕೇರಳ ಮತ್ತು ತಮಿಳುನಾಡು ಗಡಿಗಳನ್ನು ಹಂಚಿಕೊಂಡಿದೆ. ಚಾಮರಾಜನಗರ ತಾಲೂಕಿನ ಹರವೆ ಹೋಬಳಿಯನ್ನೂ ಒಳಗೊಂಡಿರುವುದು ಈ ಕ್ಷೇತ್ರದ ವಿಶೇಷ. ಈ ಕ್ಷೇತ್ರದ ಶಾಸಕ ಸಿ.ಎಸ್‌. ನಿರಂಜನಕುಮಾರ್‌ ಅವರು ಜಿಲ್ಲೆಯಲ್ಲಿ ಆಡಳಿತ ಪಕ್ಷ ಬಿಜೆಪಿಯ ಏಕೈಕ ಶಾಸಕ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್‌-19 ಎರಡನೇ ಅಲೆಯನ್ನು ಎದುರಿಸಲು ಶಾಸಕ ಸಿ.ಎಸ್‌. ನಿರಂಜನ್‌ ಕುಮಾರ್‌ ಹೇಗೆ ಕೆಲಸ ಮಾಡಿದ್ದಾರೆ ಎಂಬುದರ ಕುರಿತು, ಉದಯವಾಣಿ ನಡೆಸಿದ ಕಿರು ಸಂದರ್ಶನ.

 ನಿಮ್ಮ ಕ್ಷೇತ್ರದಲ್ಲಿ ಪ್ರಸ್ತುತ ಕೋವಿಡ್‌-19 ಪರಿಸ್ಥಿತಿ ಹೇಗಿದೆ?

ಈಗ ಬಹಳಷ್ಟು ನಿಯಂತ್ರಣಕ್ಕೆ ಬಂದಿದೆ. ಕಳೆದ 15 ದಿನಗಳ ಹಿಂದೆ, ನಮ ಕ್ಷೇತ್ರದಲ್ಲೇ ದಿನಕ್ಕೆ 250-300 ಕೇಸ್‌ ಬರ್ತಾ ಇತ್ತು. ಈಗ ಪ್ರತಿ ದಿನ 50 ರೊಳಗೆ ಪ್ರಕರಣಗಳು ಬರುತ್ತಿವೆ. ಜಿಲ್ಲಾ ಟಾಸ್ಕ್ಫೋರ್ಸ್‌ ಸಮಿತಿ ತೀರ್ಮಾನದ ನಂತರ ಕೋವಿಡ್‌ ಕೇರ್‌ ಸ್ಥಾಪಿಸಿದ್ದೇವೆ. ನಮ್ಮ ತಾಲೂಕಿನಲ್ಲಿ 5 ಕೋವಿಡ್‌ ಕೇರ್‌ ಇದೆ. ಕೋವಿಡ್‌ ಕೇರ್‌ಗಳಲ್ಲಿ 650 ಬೆಡ್‌ ಸಾಮರ್ಥ್ಯ ಇದೆ. ತಾಲೂಕು ಆಸ್ಪತ್ರೆಯಲ್ಲಿ 50 ಆಕ್ಸಿಜನ್‌ ಬೆಡ್‌ಗಳಿವೆ. ಜಿಲ್ಲೆಯಲ್ಲಿ ಲಾಕ್‌ಡೌನ್‌ ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು, ಹೋಂ ಐಸೋಲೇಷನ್‌ ನಿಲ್ಲಿಸಿದ ಬಳಿಕ ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಕೋವಿಡ್‌ ನಿರ್ವಹಣೆಗೆ ಶಾಸಕರಾಗಿ ಏನೇನು ಕೆಲಸ ಮಾಡಿದಿರಿ?

ನನ್ನ ಕ್ಷೇತ್ರದಲ್ಲಿ 40 ಗ್ರಾಮ ಪಂಚಾಯಿತಿಗಳಿವೆ. ಈ ಎಲ್ಲಾ 40 ಗ್ರಾಪಂಗಳಲ್ಲೂ ಕೋವಿಡ್‌ ಕಾರ್ಯಪಡೆ ಸಮಿತಿ ಸಭೆ ನಡೆಸಿದ್ದೇನೆ. ಗ್ರಾಪಂಗಳಲ್ಲಿ ಸಭೆಗಳನ್ನು ನಡೆಸಿ, ಕೋವಿಡ್ ಮುಕ್ತ ಪಂಚಾಯಿತಿ ಮಾಡಲು ನಿಮ್ಮ ಸಹಕಾರ ಅಗತ್ಯ ಎಂದು ಮನವಿ ಮಾಡಲಾಯಿತು. ಸಭೆಯಲ್ಲಿ ವೈದ್ಯರು, ಎಎನ್‌ಎಂಗಳು, ಆಶಾ, ಅಂಗನವಾಡಿ ಕಾರ್ಯಕರ್ತರು, ಗ್ರಾಪಂ ಸದಸ್ಯರೊಡನೆ ಚರ್ಚಿಸಲಾಯಿತು. ಹೋಂ ಐಸೋಲೇಷನ್‌ ಮಾಡಿ, ಟೆಸ್ಟ್‌ಗಳನ್ನು ಹೆಚ್ಚಿಸಿ, ಪ್ರಾಥಮಿಕ ಸಂಪರ್ಕಿತರನ್ನೂ ಪರೀಕ್ಷಿಸಬೇಕು. ಲಸಿಕೆ ನೀಡಿಕೆ ಹೆಚ್ಚಿಸಬೇಕು ಎಂದು ಸಲಹೆ ಸೂಚನೆ ನೀಡಿದೆ. ಕೋವಿಡ್‌ ಕೇರ್‌ ಸೆಂಟರ್‌ ಗಳಿಗೆ ಭೇಟಿ ನೀಡುತ್ತಿದ್ದೇನೆ. ರೋಗಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು, ಆಹಾರದ ಗುಣಮಟ್ಟ ಪರೀಕ್ಷಿಸಲು ಪ್ರತಿ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಊಟ ಮಾಡಿದೆ. ರಸ ಮಂಜರಿ ಕಾರ್ಯಕ್ರಮಗಳನ್ನು ಏರ್ಪಡಿಸಿದೆ. ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿನ ಸಮಸ್ಯೆಗಳನ್ನು ಆಲಿಸಿ, ಅಲ್ಲಿನ ಕುಂದು ಕೊರತೆ ನಿವಾರಿಸಲು ಶ್ರಮಿಸಿದ್ದೇನೆ.

ಶಾಸಕರ ನಿಧಿಯಿಂದ ಕೋವಿಡ್‌ ನಿರ್ವಹಣೆಗೆ ಎಷ್ಟು ಹಣ ನೀಡಿದ್ದೀರಿ? ಶಾಸಕರ ನಿಧಿಯಿಂದ ಕೋವಿಡ್‌ ನಿರ್ವಹಣೆಗೆ 50 ಲಕ್ಷ ರೂ. ನೀಡಿದ್ದೇನೆ. ಇದರಲ್ಲಿ ಆ್ಯಂಬುಲೆನ್ಸ್‌, ಶವ ಸಾಗಿಸುವ ವಾಹನ, ಆಸ್ಪತ್ರೆಗೆ ಬೇಕಾದ ಪರಿಕರಗಳನ್ನು ಖರೀದಿಸಲಾಗಿದೆ. ಅಗತ್ಯ ಬಿದ್ದರೆ ಇನ್ನೂ ಹೆಚ್ಚಿನ ಅನುದಾನ ನೀಡಲಾಗುವುದು. ಸ್ನೇಹಿತರಿಗೆ ಹೇಳಿ ಆಕ್ಸಿಜನ್‌ ಸಾಂದ್ರಕಗಳನ್ನು ಕೊಡಿಸಿದ್ದೇನೆ. ಸಂಘ ಸಂಸ್ಥೆಗಳಿಂದ ಆಹಾರ ಕಿಟ್‌ ವಿತರಿಸಿದ್ದೇನೆ. ಒಂದು ದಿನವೂ ಬಿಡುವಿರದೇ, ಕೋವಿಡ್‌ ನಿರ್ವಹಣೆಯಲ್ಲಿ ತೊಡಗಿಸಿಕೊಂಡಿದ್ದೇನೆ. ನನ್ನ ಕ್ಷೇತ್ರದಲ್ಲಿ 80 ಮಂದಿ ಕೋವಿಡ್‌ ಸೋಂಕಿತರು ಮೃತಪಟ್ಟಿದ್ದಾರೆ. ಅವರೆಲ್ಲರ ಮನೆಗಳಿಗೂ ತೆರಳಿ, ಆರ್ಥಿಕ ಸಹಾಯ ನೀಡಿ ಸಾಂತ್ವನ ಹೇಳುತ್ತಿದ್ದೇನೆ.

ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌ ಚಿಕಿತ್ಸೆಗೆ ಬೆಡ್‌ಗಳು ಸಾಲುತ್ತಿಲ್ಲ. ಆಡಳಿತ ಪಕ್ಷದ ಶಾಸಕರಾಗಿ ಸಮಸ್ಯೆ ನಿವಾರಣೆಗೆ ಏನು ಮಾಡುತ್ತೀರಿ?

ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆ ಬಿಟ್ಟರೆ ಒಂದೆರಡು ಚಿಕ್ಕಪುಟ್ಟ ಖಾಸಗಿ ಆಸ್ಪತ್ರೆಗಳಿವೆ. ಇದನ್ನು ಹೊರತುಪಡಿಸಿ ನೆರೆಯ ಜಿಲ್ಲೆ ರೀತಿ ಸಾಕಷ್ಟು ಖಾಸಗಿ ಆಸ್ಪತ್ರೆಗಳೂ ಇಲ್ಲ. ಹೀಗಾಗಿ ಸರ್ಕಾರಿ ಆಸ್ಪತ್ರೆಯ ಮೇಲೆ ಒತ್ತಡ ಹೆಚ್ಚಿದೆ. ಜಿಲ್ಲಾಸ್ಪತ್ರೆಯಲ್ಲಿ ಇನ್ನಷ್ಟು ಆಕ್ಸಿಜನ್‌ ಬೆಡ್‌, ವೆಂಟಿಲೇಟರ್‌ ವ್ಯವಸ್ಥೆ ಮಾಡಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುತ್ತೇನೆ.

ಕ್ಷೇತ್ರದ ಜನರಿಗೆ ನಿಮ್ಮ ಸಲಹೆ ಏನು? :

ಕೋವಿಡ್‌ ಬಗ್ಗೆ ಭಯ ಗಾಬರಿ ಬೇಡ. ರೋಗ ಲಕ್ಷಣ ಕಂಡ ತಕ್ಷಣ ಚಿಕಿತ್ಸೆ ಪಡೆಯಬೇಕು. ನಿರ್ಲಕ್ಷ್ಯ ವಹಿಸಬಾರದು. ಪರೀಕ್ಷೆ ಮಾಡಿಸಿಕೊಳ್ಳಲು ಹಿಂಜರಿಯಬಾರದು. ತಕ್ಷಣ ಚಿಕಿತ್ಸೆ ಪಡೆದರೆ ಬೇಗ ಗುಣಮುಖರಾಗಬಹುದು. ಅಲ್ಲದೇ ಪ್ರತಿಯೊಬ್ಬರೂ ಕೋವಿಡ್‌ ನಿರೋಧಕ ಲಸಿಕೆ ಪಡೆಯಬೇಕು.

 

ಕೆ.ಎಸ್‌. ಬನಶಂಕರ ಆರಾಧ್ಯ

 

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.