ಕೊರೊನಾದಿಂದ ಕವಲೇದುರ್ಗ ಮಠದ ಸಿದ್ದಲಿಂಗ ಶಿವಾಚಾರ್ಯ ಶ್ರೀ ಲಿಂಗೈಕ್ಯ


Team Udayavani, Jun 8, 2021, 10:58 PM IST

8-20

ತೀರ್ಥಹಳ್ಳಿ: ಭುವನಗಿರಿ ಸಂಸ್ಥಾನ ಕವಲೇದುರ್ಗದ ಡಾ| ಶ್ರೀ ಸಿದ್ದಗಂಗ ಶಿವಾಚಾರ್ಯ ಸ್ವಾಮೀಜಿ (55) ಕೊರೊನಾ ಸೋಂಕಿನಿಂದ ಸೋಮವಾರ ಲಿಂಗೈಕ್ಯರಾದರು. ಹತ್ತು ದಿನಗಳ ಹಿಂದೆ ಶೀತ, ಸುಸ್ತು, ಜ್ವರ ಬಂದಿತ್ತು ಎನ್ನಲಾಗಿದೆ. ಆದರೆ ಅವರು ಸ್ವಾಭಾವಿಕವಾಗಿ ಬಂದ ಜ್ವರ ಎಂದು ಎಲ್ಲರಲ್ಲೂ ಧೈರ್ಯ ತುಂಬಿ ಮಠದಲ್ಲಿಯೇ ಇದ್ದರು. ಜ್ವರ ಇನ್ನಷ್ಟು ಹೆಚ್ಚಾದ್ದರಿಂದ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್‌ ಪರೀಕ್ಷೆ ಮಾಡಿಸಿದ್ದರು.

ಬಳಿಕ ಅವರಿಗೆ ಕೊರೊನಾ ಸೋಂಕು ದೃಢವಾಗಿತ್ತು. ನಂತರ ಪಟ್ಟಣದ ಜೆಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎರಡು, ಮೂರು ದಿನಗಳಿಂದ ಉಸಿರಾಟದ ಸಮಸ್ಯೆ ಹೆಚ್ಚಾಗಿದ್ದರಿಂದ ಶಿವಮೊಗ್ಗ ಖಾಸಗಿ ಆಸ್ಪತ್ರೆ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸೋಮವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಜೆಸಿ ಆಸ್ಪತ್ರೆಯಲ್ಲಿ ಶ್ರೀಗಳು ದಾಖಲಾದಾಗ ಪತ್ರಿಕೆ ಜೊತೆ ದೂರವಾಣಿ ಮೂಲಕ ಮಾತನಾಡಿ, ಶ್ರೀಗಳು ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ, ಸಿಬ್ಬಂದಿಯ ಸೇವೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಮಾನವೀಯತೆ ಮೆರೆದ ಶ್ರೀಗಳು: ಕೊರೊನಾ ಸೋಂಕು ಬಂದ ತಕ್ಷಣ ತಮ್ಮ ಸಿಬ್ಬಂದಿಗೆ ಮಾಹಿತಿ ನೀಡಿ ತಮ್ಮ ಜತೆ ಇದ್ದ ಓರ್ವ ಶಿಷ್ಯನ ಮನೆ ಸೀಲ್‌ ಡೌನ್‌ ಮಾಡಿದ್ದು, ಅವರ ಕುಟುಂಬಕ್ಕೆ ಶ್ರೀಗಳು 15 ಸಾವಿರ ಧನ ಸಹಾಯ ಕಳುಹಿಸಿಕೊಟ್ಟು ಮಾದರಿಯಾಗಿದ್ದರು. ಆದರೆ ಇದೀಗ ಅವರೇ ಇಹಲೋಕ ತ್ಯಜಿಸಿದ್ದಾರೆ.

ಸ್ವಾಮೀಜಿಯವರ ನಿಧನದ ವಿಷಯ ತಿಳಿಯುತ್ತಿದ್ದಂತೆ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ತಕ್ಷಣ ಶಿವಮೊಗ್ಗ ನಾರಾಯಣ ಹೃದಯಾಲಯಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಪಾರ್ಥಿವ ಶರೀರವನ್ನು ತೀರ್ಥಹಳ್ಳಿಗೆ ತರಲು ಎಲ್ಲಾ ವ್ಯವಸ್ಥೆ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, ಶ್ರೀಗಳ ಸಾವು ತುಂಬಾ ದುಃಖ ತರುವ ವಿಷಯವಾಗಿದೆ. ಇತ್ತೀಚೆಗೆ ಶ್ರೀ ಮಠದಲ್ಲಿ ಸ್ವಾಮಿಗಳು ಯಾರೂ ಇರಲಿಲ್ಲ. ಅವರ ಪಟ್ಟಾಭಿಷೇಕ ಆದ ನಂತರ ಕವಲೇದುರ್ಗ ಮಠಕ್ಕೆ ಜೀವಂತಿಕೆಯನ್ನು ತುಂಬಿದ್ದರು. ಸ್ವಾಮೀಜಿಯವರು ಸಾಕಷ್ಟು ಪದವಿಗಳನ್ನು ಪಡೆದಿದ್ದರು. ಈ ಭಾಗದ ಜನಸಾಮಾನ್ಯರ ನಡುವೆ ಬೆರೆಯುತ್ತಿದ್ದರು.

ಸಹಕಾರ ಸಂಘದ ನಿರ್ದೇಶಕರಾಗಿ, ಗೌರವಾಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಿದ್ದರು. ನಮಗೆಲ್ಲರಿಗೂ ವಿಶೇಷ ಮಾರ್ಗದರ್ಶಕರಾಗಿದ್ದರು. ಮಠಕ್ಕೆ ರಾಜ ಪರಂಪರೆ ಹಿನ್ನೆಲೆಯಿದ್ದು ಮಠವನ್ನು ಬಹಳ ಎತ್ತರಕ್ಕೆ ಬೆಳೆಸುವ ಆಸೆ ಶ್ರೀಗಳದ್ದಾಗಿತ್ತು. ಅದಕ್ಕಾಗಿ ತುಂಬಾ ಕೆಲಸ ಮಾಡುತ್ತಿದ್ದರು. ಸ್ವಾಮೀಜಿಯಾಗಿದ್ದೂ ಒಬ್ಬ ಸಾಮಾನ್ಯ ರೈತನಾಗಿ ಬೆವರು ಸುರಿಸಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಮೂಲತಃ ಅವರು ಅಥಣಿಯವರಾಗಿದ್ದರು. ಅವರಿಗೆ ಅಡಕೆ ಬೆಳೆ ಬಗ್ಗೆ ಏನೂ ಕಲ್ಪನೆ ಇರಲಿಲ್ಲ. ಕವಲೇದುರ್ಗ ಮಠಕ್ಕೆ ಬಂದ ನಂತರ ಮಠಕ್ಕೆ ಉಳಿದುಕೊಂಡಿದ್ದ ಸ್ವಲ್ಪ ಜಮೀನಿನನ್ನು ಚೆನ್ನಾಗಿ ಅಭಿವೃದ್ಧಿ ಮಾಡಿದ್ದರು.

ಪ್ರತಿ ದಿನ ಹೆಚ್ಚಾಗಿ ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಯವರೆಗೆ ತೋಟದಲ್ಲಿದ್ದು ಮಣ್ಣು ಕಡಿಯುವುದರಿಂದ ಎಲ್ಲಾ ಕೆಲಸವನ್ನೂ ಮಾಡುತ್ತಿದ್ದರು. ಬಹಳ ದೊಡª ಶ್ರಮ ಜೀವಿಯಾಗಿದ್ದರು. ಭುವನಗಿರಿ ದುರ್ಗಾ ಮಠ ಅವರ ಕನಸಿನಂತೆ ಯಾತ್ರಾ ಸ್ಥಳವಾಗಬೇಕು ಎಂದು ಮಠದ ನೀಲನಕ್ಷೆಯನ್ನು ತಯಾರಿಸಿಕೊಂಡು ಒಂದು ವಾರದ ಹಿಂದೆ ನಮ್ಮ ಮನೆಗೆ ಬಂದಿದ್ದರು. ಅವರನ್ನು ಕಳೆದುಕೊಂಡಿದ್ದು ತುಂಬಾ ದುಃಖವಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.