ಬಾಹ್ಯಾಕಾಶಕ್ಕೆ ಜಿಗಿಯಲಿದ್ದಾರೆ ಅಮೆಜಾನ್ ಸಂಸ್ಥಾಪಕ ಜೆಫ್ ಬೇಜೋಸ್
ಜುಲೈ 20ಕ್ಕೆ ಬಾಹ್ಯಾಕಾಶಕ್ಕೆ ತೆರಳಲಿರುವ ಜಗತ್ತಿನ ಶ್ರೀಮಂತ ವ್ಯಕ್ತಿ ಜೆಫ್ ಬೇಜೋಸ್
Team Udayavani, Jun 9, 2021, 5:23 PM IST
ವಾಷಿಂಗ್ಟನ್ : ಅಮೆಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೇಜೋಸ್ ಜುಲೈ 20 ರಂದು ತನ್ನ ಬಹುದಿನಗಳ ಕನಸನ್ನು ಸಾಕಾರಗೊಳಿಸಿಕೊಳ್ಳುವ ತವಕದಲ್ಲಿದ್ದಾರೆ.
ಹೌದು, ಜಗತ್ತಿನ ಶ್ರೀಮಂತ ವ್ಯಕ್ತಿ ಜೆಫ್ ಬೇಜೋಸ್ ಬಾಹ್ಯಾಕಾಶ ಪರಿಶೋಧಾನಾ ಕಂಪನಿಯಾದ ಬ್ಲೂ ಒರಿಜಿನ್ ನ ಮೊದಲ ಮಾನವ ಬಾಹ್ಯಾಕಾಶ ಹಾರಾಟದ ಮಿಷನ್ ನಲ್ಲಿ ಬಾಹ್ಯಾಕಾಶಕ್ಕೆ ನೆಗೆಯಲಿದ್ದಾರೆ.
ಇದನ್ನೂ ಓದಿ : ಬಿಜೆಪಿ ಸರ್ಕಾರದ ಪೆಟ್ರೋಲ್ ಪಿಕ್ ಪಾಕೆಟ್ ಖಂಡಿಸಿ ‘100 ನಾಟೌಟ್’ ಆಂದೋಲನ: ಡಿ.ಕೆ ಶಿವಕುಮಾರ್
ಈಗಾಗಲೇ ಬಾಹ್ಯಾಕಾಶ ಪರಿಶೋಧಾನಾ ಕಂಪನಿಯಾದ ಬ್ಲೂ ಒರಿಜಿನ್ ನ ಮೊದಲ ಮಾನವ ಬಾಹ್ಯಾಕಾಶ ಹಾರಾಟದ ಮಿಷನ್ ನಲ್ಲಿ ಜೆಫ್ ಬೇಜೋಸ್ ಕೂಡ ಬುಕ್ ಮಾಡಿದ್ದು, ಜುಲೈ 20ರಂದು ಬಾಹ್ಯಾಕಾಶಕ್ಕೆ ಲಗ್ಗೆ ಇಡಲಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಇನ್ ಸ್ಟಾಗ್ರಾಮ್ ಖಾತೆಯ ಮೂಲಕ ಪ್ರತಿಕ್ರಿಯಿಸಿದ ಜೆಫ್ ಬೇಜೋಸ್, ಐದು ವರ್ಷದವನಾಗಿದ್ದಾಗಿನಿಂದ, ಬಾಹ್ಯಾಕಾಶಕ್ಕೆ ಪ್ರಯಾಣಿಸುವ ಕನಸು ಹೊಂದಿದ್ದೆ. ಜುಲೈ 20 ರಂದು ನಾನು ನನ್ನ ಸಹೋದರನೊಂದಿಗೆ ಆ ಪ್ರಯಾಣವನ್ನು ಮಾಡಲಿದ್ದೇನೆ” ಎಂದು ತಿಳಿಸಿದ್ದಾರೆ.
ಜುಲೈ 20 ಅಪೊಲೊ 11 ನೌಕೆಯು ಚಂದ್ರನ ಮೇಲೆ ಲ್ಯಾಂಡ್ ಆದ ವಾರ್ಷಿಕೋತ್ಸವದ ದಿನದಂದು, ಈ ಪ್ರವಾಸವನ್ನು ನಿಗದಿ ಮಾಡಲಾಗಿದ್ದು, ಇದೇ ದಿನ ಟೆಕ್ಸಾಸ್ನಿಂದ ಬಾಹ್ಯಾಕಾಶಕ್ಕೆ ನೌಕೆ ಉಡಾವಣೆ ಆಗಲಿದೆ.
ನ್ಯೂ ಶೆಪರ್ಡ್ ವಾಹನದಲ್ಲಿ ಬಾಹ್ಯಾಕಾಶಕ್ಕೆ ಹೋಗಲು ಸೀಟ್ ಗಾಗಿ ನಡೆಯುತ್ತಿರುವ ಹರಾಜು ಶನಿವಾರ ಕೊನೆಗೊಳ್ಳಲಿದೆ. ಇದೀಗ ಬಿಡ್ಡಿಂಗ್ ಮೊತ್ತ 2.8 ಮಿಲಿಯನ್ ಡಾಲರ್ ಗಳಷ್ಟಿದೆ. 143 ದೇಶಗಳಿಂದ ಸುಮಾರು 6,000 ಜನರು ಇದರಲ್ಲಿ ಭಾಗಿಯಾಗಿದ್ದಾರೆ.
ಇನ್ನು, ಈಗಾಗಲೇ ತಿಳಿಸಿರುವಂತೆ ಜೆಫ್ ಬೇಜೋಸ್ ಜುಲೈ 5ರಂದು ಅಮೆಜಾನ್ ಸಿಇಒ ಸ್ಥಾನದಿಂದ ಹೊರಬರಲಿದ್ದು, ಕಂಪನಿಯ ಜವಾಬ್ದಾರಿಯನ್ನು ತನ್ನ ಉತ್ತರಾಧಿಕಾರಿ ಆ್ಯಂಡಿ ಜಾಸ್ಸಿಗೆ ಹಸ್ತಾಂತರಿಸಲಿದ್ದಾರೆ.
ಇದನ್ನೂ ಓದಿ : ನಮ್ಮದು ಮದುವೆಯೇ ಆಗಿಲ್ಲ: ಗಂಡನಿಗೆ ಶಾಕ್ ಕೊಟ್ಟ ನಟಿ-ಸಂಸದೆ ನುಸ್ರತ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ