ಮುಂಬೈ: ಧರೆಗುರುಳಿದ ಬಹುಮಹಡಿ ಕಟ್ಟಡ; 11 ಮಂದಿ ಸಾವು, ಹಲವರಿಗೆ ಗಂಭೀರ ಗಾಯ
Team Udayavani, Jun 10, 2021, 8:05 AM IST
ಮುಂಬೈ: ನಾಲ್ಕು ಮಹಡಿಯ ಕಟ್ಟಡವೊಂದು ಧರೆಗುರುಳಿದ ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿದ ಘಟನೆ ಮುಂಬೈನ ಪಶ್ಚಿಮ ಮಲಾಡ್ ನ ಮಾಲ್ವಾನಿ ಪ್ರದೇಶದಲ್ಲಿ ನಡೆದಿದೆ. ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದೊಂದು ನಾಲ್ಕು ಮಹಡಿಯ ವಸತಿ ಕಟ್ಟಡವಾಗಿದ್ದು, ದುರ್ಘಟನೆ ನಡೆದ ಸಂದರ್ಭದಲ್ಲಿ ಮಕ್ಕಳು ಸೇರಿದಂತೆ ಹಲವು ಮಂದಿ ಇಲ್ಲಿದ್ದರು. ಘಟನೆ ನಡೆದ ಕೆಲವೇ ಕ್ಷಣದಲ್ಲಿ ಅಗ್ನಿ ಶಾಮಕ ದಳ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಒಳಗೆ ಸಿಲುಕಿಕೊಂಡವರನ್ನು ರಕ್ಷಣೆ ಮಾಡಲಾಗಿದೆ.
ಇದರ ಬಳಿಯಿರುವ ಇನ್ನೂ ಮೂರು ಕಟ್ಟಡಗಳು ಆತಂಕದ ಪರಿಸ್ಥಿತಿಯಲ್ಲಿದ್ದು, ಅಲ್ಲಿದ್ದ ಎಲ್ಲರನ್ನೂ ಕೂಡಲೇ ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ ಎಂದು ಬೃಹನ್ ಮುಂಬೈ ನಗರಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ:ಕರೆಂಟ್ ಶಾಕ್! ಪ್ರತೀ ಯೂನಿಟ್ಗೆ 30 ಪೈಸೆ ದರ ಹೆಚ್ಚಳ : ಎಪ್ರಿಲ್ ನಿಂದಲೇ ಪೂರ್ವಾನ್ವಯ
ಬುಧವಾರ ನಗರದಲ್ಲಿ ಸುರಿದ ಭಾರಿ ಮಳೆಯ ಕಾರಣದಿಂದ ಈ ಬಹುಮಹಡಿ ಕಟ್ಟಡ ಕುಸಿದಿದೆ ಎಂದು ಮಹಾರಾಷ್ಟ್ರದ ಸಚಿವ ಅಸ್ಲಾಂ ಶೇಖ್ ಹೇಳಿದ್ದಾರೆ. ಮುಂಬೈನಲ್ಲಿ ಬುಧವಾರ ಧಾರಾಕಾರ ಮಳೆಯಾಗಿತ್ತು. ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು. ಇದರಿಂದ ರಸ್ತೆ ಮತ್ತು ರೈಲು ಸಂಚಾರಕ್ಕೂ ಅಡಚಣೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ
PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?
MUST WATCH
ಹೊಸ ಸೇರ್ಪಡೆ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್