ಬಿತ್ತನೆಗೆ ಅನ್ನದಾತರ ದುಂಬಾಲು


Team Udayavani, Jun 10, 2021, 5:45 PM IST

9 krr 2

ವರದಿ : ಜೆ.ವಿ. ಕೆರೂರ

ಕೆರೂರ: ಕಳೆದ ಸುಮಾರು ಐದು ವರ್ಷಗಳಿಂದ ಈ ಭಾಗದ ನೇಗಿಲಯೋಗಿಗಳಿಗೆ ಹುಸಿ ಮುನಿಸು ತೋರಿದ್ದ “ರೋಹಿಣಿ ಮಳೆ’, ಈ ಬಾರಿ ಉತ್ತಮವಾಗಿ ಸುರಿದಿದ್ದು ಕೃಷಿ ಜಮೀನುಗಳು ಹೆಚ್ಚು ತೇವಾಂಶದಿಂದ ಬಿತ್ತನೆಗೆ ಸಿದ್ಧಗೊಂಡಿದ್ದರೆ, ರೈತರು ಮುಂಗಾರು ಬಿತ್ತನೆಗೆ ಬೀಜ, ರಸಗೊಬ್ಬರಗಳ ಖರೀದಿಯ ಧಾವಂತದಲ್ಲಿ ಮುನ್ನಡೆದಿದ್ದಾರೆ.

ಕಳೆದ ಭಾನುವಾರ ಮೂರ್‍ನಾಲ್ಕು ಗಂಟೆಗಳ ಕಾಲ ಎಡಬಿಡದೇ ಸುರಿದ ರೋಹಿಣಿ ಮಳೆಯು ಪಟ್ಟಣದಲ್ಲಿ 72.08 ಮಿ.ಮೀ ಅ ಕ ಪ್ರಮಾಣದಲ್ಲಿ ಸುರಿಯಿತು. ಜಮೀನುಗಳನ್ನು ಬಿತ್ತನೆಗೆ ಸಿದ್ಧ ಮಾಡಿಕೊಂಡಿದ್ದ ರೈತರಲ್ಲಿ ಮುಂಗಾರು ಬೆಳೆಗಳ ಬಿತ್ತನೆಗೆ ಮುಂದಾಗಿದ್ದಾರೆ. ಎಲ್ಲಿ ನೋಡಿದಲ್ಲಿ ಕೃಷಿಕ ಜಮೀನುಗಳಲ್ಲಿ ಬಿತ್ತನೆಯ ಭರದ ಚಟುವಟಿಕೆಯಲ್ಲಿ ತೊಡಗಿರುವುದು ಕಂಡು ಬರುತ್ತಿದೆ. ಮಳೆಯಿಂದ ಈ ಸಲ ಉತ್ತಮ ಫಸಲಿನ ನಿರೀಕ್ಷೆ ಇಲ್ಲಿನ ರೈತರಲ್ಲಿ ಹೆಚ್ಚು ಆಶಾಭಾವ ಮೂಡಿದೆ. ಹಳ್ಳಿ ಭಾಗಗಳಲ್ಲಿ ಬಿತ್ತನೆ ಕಾರ್ಯ ಅಂತಿಮಗೊಂಡಿದೆ ಎನ್ನುತ್ತಾರೆ ಹಿರಿಯ ರೈತ ಕೃಷ್ಣಪ್ಪ ನಡಮನಿ.

ಬಿತ್ತನೆಗೆ ಧಾವಂತ: ಈಗಾಗಲೇ ಕೃಷಿಕರು ಬೀಜ, ರಸಗೊಬ್ಬರದ ಭರಾಟೆಯ ಖರೀದಿ ಭರದಲ್ಲಿ ಚಟುವಟಿಕೆ ನಿರತರಾಗಿದ್ದು ಗ್ರಾಮೀಣ ಪ್ರದೇಶಗಳಿಂದ ನಿತ್ಯ ನೂರಾರು ಕೃಷಿಕರು ಲಾಕ್‌ಡೌನ್‌ ಕಾರಣ ನಸುಕಿನ ಜಾವದಿಂದ ಆಗಮಿಸುತ್ತಿರುವುದು ಸಾಮಾನ್ಯವಾಗಿದೆ. ಈಗಾಗಲೇ ಸಜ್ಜೆ, ಹೆಸರು, ಗೋವಿನಜೋಳ, ಸೂರ್ಯಕಾಂತಿ ಮುಂತಾದ ಬೀಜಗಳ ಬಿತ್ತನೆ ಕಾರ್ಯವು ಪ್ರಗತಿಯಲ್ಲಿದೆ.

“ಬಾದಾಮಿ ತಾಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿ ಸೂರ್ಯಕಾಂತಿ ಬೀಜ ಸಿಗುತ್ತಿಲ್ಲ. ಸದ್ಯ ಉತ್ತಮ ಮಳೆ ಸುರಿದಿದ್ದು ಕೂಡಲೇ ಬಿತ್ತನೆ ಮುಗಿಸದಿದ್ದರೆ ಎಲ್ಲವೂ ವ್ಯರ್ಥವಾಗಲಿದೆ. ಖಾಸಗಿ ವ್ಯಾಪಾರಿಗಳ ದುಬಾರಿ ದರದಿಂದ ನಾವು ಅಸಹಾಯಕರಾಗಿದ್ದೇವೆ’ ಎನ್ನುತ್ತಾರೆ ಜಂಗವಾಡದ ರಾಮಪ್ಪ ಬಡಿಗೇರ.

“ಈವರೆಗೂ ಬೀಜ ಕಂಪನಿಗಳಿಂದ ಪೂರೈಕೆಯೇ ಆಗಿಲ್ಲ. ಹೀಗಾಗಿ ತಾಲೂಕಿನಲ್ಲಿ ಸೂರ್ಯಕಾಂತಿ ಬೀಜ ಖರೀದಿಗೆ ಲಭ್ಯವಿಲ್ಲ. ದಾಸ್ತಾನು ಬಂದ ಕೂಡಲೇ ಬೀಜ ವಿತರಣೆಗೆ ನಾವು ಎದುರು ನೋಡುತ್ತಿದ್ದೇವೆ’ ಎನ್ನುತ್ತಾರೆ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.