33 ಆಮ್ಲಜನಕ ಘಟಕ ಸ್ಥಾಪಿಸುವ ಯೋಜನೆ


Team Udayavani, Jun 11, 2021, 12:45 PM IST

——–

ಅಹ್ಮದ್‌ನಗರ: ಕೊರೊನಾ ಎರಡನೇ ಅಲೆಯಿಂದ ರೋಗಿಗಳ ತುರ್ತು ಚಿಕಿತ್ಸೆಗಾಗಿ ಅಗತ್ಯವಿದ್ದ ಆಮ್ಲಜನಕ ದೊರೆಯದ ಕಾರಣ ಜಿಲ್ಲಾ ವೈದ್ಯಕೀಯ ವಿಭಾಗವು ಅನೇಕ ಸಮಸ್ಯೆ ಎದುರಿಸಬೇಕಾಯಿತು. ಇದನ್ನು ಗಮನದಲ್ಲಿರಿಸಿದ ಸರಕಾರವು ಜಿಲ್ಲೆಯಲ್ಲಿ  ಮೂರನೇ ಅಲೆಯನ್ನು ಎದುರಿಸಲು ಎಲ್ಲ ರೀತಿಯ ಸಿದ್ದತೆಯಲ್ಲಿ ತೊಡಗಿದ್ದು, ಜಿಲ್ಲೆಯು ಆಮ್ಲಜನಕದ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಗುರಿ ಹೊಂದಲಾಗಿದೆ.

ಜಿಲ್ಲೆಯಲ್ಲಿ ಈಗ 33 ಆಮ್ಲಜನಕ ಉತ್ಪಾದನ ಘಟಕ ಸ್ಥಾಪಿಸುವ ಯೋಜನೆಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ಒಟ್ಟು 33 ಆಮ್ಲಜನಕ ಉತ್ಪಾದನ ಘಟಕಗಳ ಪೈಕಿ 16 ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳ ಮೂಲಕ ಸ್ಥಾಪಿಸಲಾಗುತ್ತಿದೆ. ಕೆಲವು ಘಟಕಗಳನ್ನು ಖಾಸಗಿಯ ವಲಯಗಳ ವತಿಯಿಂದ  ಸ್ಥಾಪಿಸಲಾಗಿದೆ. ಜಿಲ್ಲಾ ಯೋಜನ ಸಮಿತಿಯ ನಿಧಿಯೊಂದಿಗೆ 14 ಯೋಜನೆಗಳನ್ನು ಸ್ಥಾಪಿಸಲಾಗಿದ್ದು, ಮುಂದಿನ ಹದಿನೈದು ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಕೆಲವು ದಿನಗಳ ಹಿಂದೆ ವೈದ್ಯಕೀಯ ಆಮ್ಲಜನಕಕ್ಕಾಗಿ ಜಿಲ್ಲಾಡಳಿತ ಸಹಿತ ಖಾಸಗಿ ಆಸ್ಪತ್ರೆಗಳ ವ್ಯವಸ್ಥೆ ಹೆಚ್ಚಿನ ಪ್ರಯತ್ನ ಮಾಡಬೇಕಾಯಿತು.  ಬಳಿಕ ಒಂದೂವರೆ ತಿಂಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಸನ್‌ ಮುಶ್ರಿಫ್‌ ಮತ್ತು ಕಲೆಕ್ಟರ್‌ ಡಾ| ರಾಜೇಂದ್ರ ಭೋಸ್ಲೆ ಅವರ ನೇತೃತ್ವದಲ್ಲಿ ಆಮ್ಲಜನಕ ಉತ್ಪಾದನೆಯಲ್ಲಿ ಬದಲಾವಣೆಗಳನ್ನು ಕಂಡುಕೊಳ್ಳಲಾಯಿತು.

ನಿತ್ಯ 60 ಮೆಟ್ರಿಕ್‌ ಟನ್‌ ಆಮ್ಲಜನಕ ಅಗತ್ಯ

ಕೊರೊನಾ ಎರಡನೇ ಅಲೆ ಅವಧಿಯಲ್ಲಿ ಅಹ್ಮದ್‌ನಗರ ಜಿಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ದೈನಂದಿನ 30 ಮೆಟ್ರಿಕ್‌ ಟನ್‌ ಅಮ್ಲಜನಕದ ಅಗತ್ಯವಿರುತ್ತಿತ್ತು. ಖಾಸಗಿ ಆಸ್ಪತ್ರೆಗಳಲ್ಲಿ ಸುಮಾರು 30ರಿಂದ 35 ಮೆಟ್ರಿಕ್‌ ಟನ್‌ ಅಗತ್ಯವಿತ್ತು. ಸಮಯಕ್ಕೆ ಆಮ್ಲಜನಕ ಲಭ್ಯವಿಲ್ಲದಿದ್ದರೆ ಸಾವಿನ ಅಪಾಯವಿತ್ತು. ಆದರೆ ಜಿಲ್ಲಾಡಳಿತ ಮತ್ತು ಖಾಸಗಿ ಆಸ್ಪತ್ರೆಗಳು ಅದನ್ನು ನಿಭಾಯಿಸುವಲ್ಲಿ ಯಶಸ್ಸು ಕಂಡವು.

ಮುಂದಿನ ಅವಧಿಯಲ್ಲಿ ಈ ರೀತಿಯ ಸಮಸ್ಯೆ ಉಂಟಾಗಬಾರದೆಂಬ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವ ಮುಶ್ರಿಫ್‌ ಅವರು ಜಿಲ್ಲಾ ಯೋಜನಾ ಸಮಿತಿಯ ಮೂಲಕ 49.84 ಕೋಟಿ ರೂ.ಗಳನ್ನು ಆಮ್ಲಜನಕ ಉತ್ಪಾದನೆ ಯೋಜನೆಗೆ ನೀಡಿದ್ದಾರೆ. ಈ ಮೂಲಕ ಪ್ರತಿ ತಾಲೂಕಿನಲ್ಲಿ ಒಂದರಂತೆ ಜಿಲ್ಲೆಯಲ್ಲಿ 14 ಸ್ಥಳಗಳಲ್ಲಿ ಆಮ್ಲಜನಕ ಉತ್ಪಾದಿಸುವ ಘಟಕ ಸ್ಥಾಪಿಸುವ ಯೋಜನೆಗಳನ್ನು ಮಾಡಲಾಗುತ್ತಿದ್ದು, ಅವುಗಳಲ್ಲಿ ರಾಹುರಿ ತಾಲೂಕಿನ ವಂಬೊರಿಯ ಗ್ರಾಮೀಣ ಆಸ್ಪತ್ರೆಯಲಿ , ಕರ್ಜತ್‌ ಮತ್ತು ಪಥಾರ್ಡಿಯಲ್ಲಿ ಉಪ-ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಘಟಕ ಸ್ಥಾಪಿಸಲಾಗುತ್ತಿದೆ.

ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಮುಂದಿನ ಹದಿನೈದು ದಿನಗಳಲ್ಲಿ ಈ ಯೋಜನೆಗಳು ಕಾರ್ಯರೂಪಕ್ಕೆ ಬರಲಿವೆ. ಈ ಯೋಜನೆಯಿಂದ ವೈದ್ಯಕೀಯ ವಲಯಕ್ಕೆ ಆಮ್ಲಜನಕ ಹೆಚ್ಚಿನ ಪ್ರಮಾಣದಲ್ಲಿ ಒದಗುವುದು ಎಂದು ಜಿಲ್ಲಾ ಯೋಜನಾ ಅಧಿಕಾರಿ ನಿಲೇಶ್‌ ಭದಾನೆ ಮಾಹಿತಿ ನೀಡಿದ್ದಾರೆ.

ಎಲ್ಲ ಸ್ಥಳಗಳಲ್ಲಿ ಉತ್ಪಾದನೆ ಜತೆಗೆ ಅಲ್ಲಿನ ಸಿಲಿಂಡರ್‌ಗಳಿಗೆ ತುಂಬಲು ವ್ಯವಸ್ಥೆ ಮಾಡಲಾಗಿದೆ. ಯೋಜನ ಸ್ಥಳದಲ್ಲಿ ಶಾಶ್ವತ ವಿದ್ಯುತ್‌ ಸರಬರಾಜು ಖಚಿತಪಡಿಸಿ ಕೊಳ್ಳಲು ಶಾಸಕರ ಸಹಯೋಗದೊಂದಿಗೆ ಜನರೇಟರ್‌ ಸ್ಥಾಪಿಸಲಾಗಿದೆ. ಆಮ್ಲಜನಕ ಲಭ್ಯವಿ ರುವುದರಿಂದ ಎಲ್ಲ ಗ್ರಾಮೀಣ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಾಮರ್ಥ್ಯವನ್ನು ಶೇ. 25ರಷ್ಟು ಹೆಚ್ಚಿಸಲು ಜಿಲ್ಲಾಡಳಿತ ಪ್ರಸ್ತಾವಿಸಿದೆ.

ಟಾಪ್ ನ್ಯೂಸ್

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.