ಸಿಂದಗಿಯಲ್ಲಿ ಜೋರಾಯ್ತು ಕೃಷಿ ಚಟುವಟಿಕೆ
Team Udayavani, Jun 11, 2021, 9:09 PM IST
ಸಿಂದಗಿ: ತಾಲೂಕಿನಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿದಿರುವ ಹಿನ್ನೆಲೆ ರೈತರು ಬಿತ್ತನೆಯಲ್ಲಿ ತೊಡಗಿದ್ದಾರೆ. ಸರಿಯಾದ ಸಮಯಕ್ಕೆ ಮುಂಗಾರು ಆಗಮಿಸಿದ್ದರಿಂದ ರೈತರು ಜಮೀನು ಹದಗೊಳಿಸಿದ್ದಾರೆ. ಬಿತ್ತನೆಗೆ ಎತ್ತುಗಳ ಕೊರತೆಯ ಹಿನ್ನೆಲೆಯಲ್ಲಿ ಬಹುತೇಕ ರೈತರು ಟ್ರಾÂಕ್ಟರ್ ಮೊರೆ ಹೋಗಿದ್ದಾರೆ.
ತಾಲೂಕಿನಲ್ಲಿ ಕಳೆದ ಎರಡು ದಿನಗಳಲ್ಲಿ ಸಾಕಷ್ಟು ಮಳೆಯಾಗಿದೆ. ಸರಾಸರಿ 45 ಮಿಮೀ ಮಳೆಯಾಗಿದ್ದು ಕೋವಿಡ್ ಸಂಕಷ್ಟದ ಮಧ್ಯೆಯೂ ಕೃಷಿ ಚಟುವಟಿಕೆಗಳು ನಿಂತಿಲ್ಲ. ಸಿಂದಗಿ ಮತ್ತು ಆಲಮೇಲ ಹೋಬಳಿಗಳಲ್ಲಿ ಕಳೆದೆರಡು ದಿನಗಳಿಂದ ಬಿತ್ತನೆ ಕೆಲಸ ಚುರುಕುಗೊಂಡಿದೆ.
ಬಿತ್ತನೆ ಬೀಜದ ದಾಸ್ತಾನು: ಹೋಬಳಿಯಲ್ಲಿ ಪ್ರಮುಖ ಬೆಳೆ ತೊಗರಿಯಾಗಿದ್ದು ಬಹುಪಾಲು ರೈತರು ಕೇಂದ್ರದಲ್ಲಿ ಲಭ್ಯವಿರುವ ಬಿತ್ತನೆ ಬೀಜಗಳನ್ನು ಬಳಸುತ್ತಾರೆ, ತೊಗರಿ ಸಿಂದಗಿ ರೈತ ಸಂಪರ್ಕ ಕೇಂದ್ರದಲ್ಲಿ 170 ಕ್ವಿಂಟಲ್, ಹೆಚ್ಚುವರಿ ಬೀಜ ವಿತರಣಾ ಕೇಂದ್ರ ಯಂಕಂಚಿ ಪಿಕೆಪಿಎಸ್ನಲ್ಲಿ 100 ಕ್ವಿಂಟಲ್, ಸಜ್ಜೆ 2.7 ಕ್ವಿಂಟಲ್, ಸೂರ್ಯಕಾಂತಿ 1.2 ಕ್ವಿಂಟಲ್, ಹೆಸರು 1 ಕ್ವಿಂಟಲ್ ಬಿತ್ತನೆ ಬೀಜ ದಾಸ್ತಾನು ಇದೆ.
ಆಲಮೇಲ ರೈತ ಸಂಪರ್ಕ ಕೇಂದ್ರದಲ್ಲಿ ತೊಗರಿ 171 ಕ್ಷಿಂಟಲ್, ಮೆಕ್ಕೆ ಜೋಳ 980 ಕೆ.ಜಿ., ಸಜ್ಜೆ 180 ಕೆಜಿ, ಹೆಸರು 60 ಕೆಜಿ ಬಿತ್ತನೆ ಬೀಜ ದಾಸ್ತಾನು ಇದೆ. ಬಿತ್ತನೆ ಗುರಿ: ಕಬ್ಬು 15 ಸಾವಿರ ಹೆಕ್ಟೇರ್, ತೊಗರಿ 72800 ಹೆ., ಹತ್ತಿ 24000 ಹೆ., ಮೆಕ್ಕೆಜೋಳ 2500 ಹೆ., ಸಜ್ಜೆ 500 ಹೆ., ಸೆಂಗಾ 400 ಹೆ., ಹೆಸರು 280 ಹೆ., ಸೂರ್ಯಕಾಂತಿ 200 ಹೆ., ಹೀಗೆ ಇತರೆ ಬೆಳೆಗಲಾದ ಉದ್ದು, ಅಲಸಂದಿ, ಸಿರಿ ಧಾನ್ಯಗಳು, ಸೋಯಾ ಸೇರಿದಂತೆ ಒಟ್ಟು 1.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ