ಕೆನರಾ ಬ್ಯಾಂಕ್‌ ಸೇವೆ ಮಾದರಿ


Team Udayavani, Jun 11, 2021, 9:14 PM IST

11-7

ದಾವಣಗೆರೆ: ಕೆನರಾ ಬ್ಯಾಂಕ್‌ ದೇಶಕ್ಕಾಗಿ ಹಣಕಾಸು ಸೇವೆ, ಸಾಮಾಜಿಕ ಬಾಧ್ಯತೆ, ಇತರೆ ಶ್ಲಾಘನೀಯ ಸೇವಾ ಕಾರ್ಯಗಳ ಮೂಲಕ ಇತರೆ ಹಣಕಾಸು ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಮೇಯರ್‌ ಎಸ್‌.ಟಿ. ವೀರೇಶ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೆನರಾ ಬ್ಯಾಂಕ್‌ನಿಂದ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿದ್ದ ಕೊರೊನಾ ಸಂತ್ರಸ್ತರು, ವಾರಿಯರ್ಸ್‌, ಪರಿಚಾರಕರಿಗೆ ಉಚಿತ ಆಹಾರ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು. ಸಂಕಷ್ಟ ಕಾಲದಲ್ಲಿ ಅನೇಕ ಸಂಘ, ಸಂಸ್ಥೆಗಳು ಸೇವಾ ಮತ್ತು ಮಾನವೀಯ ನೆಲೆಗಟ್ಟಿನಲ್ಲಿ ಹಲವಾರು ಕಾರ್ಯಕ್ರಮ ನಡೆಸುತ್ತಿರುವುದು ಅಭಿನಂದನಾರ್ಹ ಎಂದರು.

ಕೆನರಾ ಬ್ಯಾಂಕ್‌ನಂತಹ ಹಣಕಾಸು ಸಂಸ್ಥೆ, ಸಂಘಗಳು ವಿವಿಧ ಕಾರ್ಯಕ್ರಮಗಳ ಮೂಲಕ ಸರ್ಕಾರದೊಂದಿಗೆ ಕೈಜೋಡಿಸಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗುತ್ತಿರುವುದರಿಂದ ಸರ್ಕಾರದ ಕೆಲಸ ಸ್ವಲ್ಪ ಸುಲಭವಾಗಿದೆ. ಬ್ಯಾಂಕ್‌ ಉದ್ಯೋಗಿಗಳು ಸಹ ಕೊರೊನಾ ಅಪಾಯದ ಸಂದರ್ಭದಲ್ಲಿಯೂ ತಮ್ಮ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿದ್ದಾರೆ ಎಂದರು.

ಕೆನರಾ ಬ್ಯಾಂಕಿನ ಕ್ಷೇತ್ರೀಯ ಕಾರ್ಯಾಲಯದ ವಿಭಾಗೀಯ ಪ್ರಬಂಧಕಿ ಜಿ.ಆರ್‌. ನಾಗರತ್ನ ಮಾತನಾಡಿ, ಕೆನರಾ ಬ್ಯಾಂಕ್‌ ತನ್ನ ಸಾಮಾಜಿಕ ಬಾಧ್ಯತೆಯ ಭಾಗವಾಗಿ ಕೊರೊನಾ ಜಾಗೃತಿ ಅಭಿಯಾನ, ಉಚಿತವಾಗಿ ಆಹಾರ, ಮಾಸ್ಕ್, ಸಾನಿಟೈಸರ್‌ ವಿತರಣೆ ಮಾಡುತ್ತಿದೆ. ಜಿಲ್ಲಾ ಆಸ್ಪತ್ರೆಗೆ ಅಗತ್ಯ ಸಲಕರಣೆಗಳನ್ನೂ ಕೊಡುಗೆಯಾಗಿ ನೀಡಿದೆ. ಕೊರೊನಾ ಸಂತ್ರಸ್ತರಿಗೆ ಮತ್ತು ಆಸ್ಪತ್ರೆಗಳಿಗೆ ಹಲವಾರು ಸಾಲ ಯೋಜನೆಗಳನ್ನೂ ಜಾರಿಗೆ ತಂದಿದೆ ಎಂದು ತಿಳಿಸಿದರು.

ಪಾಲಿಕೆ ನಾಮನಿರ್ದೇಶಿತ ಸದಸ್ಯ ಶಿವನಗೌಡ ಟಿ. ಪಾಟೀಲ್‌, ಕೆ. ರಾಘವೇಂದ್ರ ನಾಯರಿ, ಕೆನರಾ ಬ್ಯಾಂಕ್‌ ಹಿರಿಯ ಅ ಧಿಕಾರಿಗಳಾದ ಎಸ್‌.ವಿ. ರಾಮಕೃಷ್ಣ ನಾಯ್ಕ, ಬಿ.ಎ. ಸುರೇಶ್‌, ಹಂಪಣ್ಣ, ಕೆ. ಶಶಿಕುಮಾರ್‌, ಕೆ. ವಿಶ್ವನಾಥ ಬಿಲ್ಲವ, ಆರ್‌. ಆಂಜನೇಯ, ಸಿ.ಪರಶುರಾಮ್‌ ಇತರರು ಇದ್ದರು.

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.