ಅನ್‌ ಲಾಕ್‌ ಎಂದರೆ ಜವಾಬ್ದಾರಿ ಮರೆತು ಓಡಾಡುವುದು ಎಂದಲ್ಲ


Team Udayavani, Jun 12, 2021, 7:20 AM IST

ಅನ್‌ ಲಾಕ್‌ ಎಂದರೆ ಜವಾಬ್ದಾರಿ ಮರೆತು ಓಡಾಡುವುದು ಎಂದಲ್ಲ

ಹನ್ನೊಂದು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರೆಡೆ ಭಾಗಶಃ ಅನ್‌ ಲಾಕ್‌ ಘೋಷಿಸಲಾಗಿದೆ. ಇದು ಸೋಮವಾರ  ಜಾರಿಗೆ ಬರಲಿದೆ. ಹಾಗೆಂದು ಇದು ಸಂಪೂರ್ಣ ಓಡಾಟಕ್ಕೆ ನೀಡಿರುವ ಅನುಮತಿಯಲ್ಲ. ಕಳೆದ ಎರಡು ದಿನಗಳನ್ನು ಗಮನಿಸಿದರೆ, ಜನ ಈಗಾಗಲೇ ಕೊರೊನಾವನ್ನು ಲಘುವಾಗಿ ಪರಿಗಣಿಸಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಂತೂ ಕೊರೊನಾ 2ನೇ ಅಲೆ ಪೂರ್ವದಲ್ಲಿ ಓಡಾಡಿದ ಹಾಗೆಯೇ ಜನ ಬೀದಿಗಿಳಿಯಲು ಮುಂದಾಗಿದ್ದಾರೆ.
ಗುರುವಾರ ಸರಕಾರ ಘೋಷಿಸಿರುವ ಅನ್‌ ಲಾಕ್‌ ಆಧಾರದ ಮೇಲೆ ಹೇಳುವುದಾದರೆ, ಇದು ಈಗಿರುವ ಲಾಕ್‌ ಡೌನ್‌ಅನ್ನು ಒಂದಷ್ಟು ಸಡಿಲಿಕೆ ಮಾಡಿರುವುದು ಮಾತ್ರ. ಅಂದರೆ ಬೆಳಗ್ಗೆ 6ರಿಂದ 10ರ ವರೆಗೆ ತೆರೆಯುತ್ತಿದ್ದ ದಿನಸಿ ಅಂಗಡಿಗಳನ್ನು ಮಧ್ಯಾಹ್ನ 2 ಗಂಟೆವರೆಗೆ ತೆರೆಯುವುದು. ಬೀದಿ ಬದಿ ವ್ಯಾಪಾರಿಗಳ ವ್ಯಾಪಾರಕ್ಕೆ ಅವಕಾಶ ನೀಡಿರುವುದು, ಕಾರ್ಖಾನೆಗಳಲ್ಲಿ ಶೇ.50 ಕಾರ್ಮಿಕರೊಂದಿಗೆ ಕೆಲಸ ಮಾಡುವುದು, ಗಾರ್ಮೆಂಟ್ಸ್‌ ಗಳಲ್ಲಿ ಶೇ.30ರ ಹಾಜರಾತಿಯೊಂದಿಗೆ ಕೆಲಸ ಮಾಡುವುದು ಈಗ ನೀಡಿರುವ ಸಡಿಲಿಕೆಯಲ್ಲಿ ಸೇರಿದೆ.

ಹಾಗೆಯೇ ಬಸ್‌ ಸಂಚಾರ, ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಿಲ್ಲ. ಟ್ಯಾಕ್ಸಿಗಳು ಮತ್ತು ಆಟೋಗಳಲ್ಲಿ ಇಬ್ಬರು ಪ್ರಯಾಣಿಕರೊಂದಿಗೆ ಓಡಾಡಲು ಅವಕಾಶ ನೀಡಲಾಗಿದೆ. ಈ ಎಲ್ಲ ಸಡಿಲಿಕೆ ಮಧ್ಯೆ ಪ್ರಮುಖವಾದ ಅಂಶವೊಂದು ನೆನಪಿನಲ್ಲಿ ಇರಿಸಿಕೊಳ್ಳಬೇಕಾಗಿದೆ. ರಾಜ್ಯದಲ್ಲಿ ಇನ್ನೂ ಕೊರೊನಾ ನಿಯಂತ್ರಣಕ್ಕೆ ಬಂದಿಲ್ಲ. ಶುಕ್ರವಾರದ ಅಂಕಿ ಅಂಶಗಳ ಪ್ರಕಾರ, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.5ಕ್ಕಿಂತ ಕೆಳಗೆ ಇಳಿದಿದೆ. ಆದರೆ ಇನ್ನೂ ಕೆಲವು ರಾಜ್ಯಗಳಲ್ಲಿ ಪಾಸಿಟಿವಿಟಿ ದರ ಶೇ.10ಕ್ಕಿಂತ ಹೆಚ್ಚೇ ಇದೆ. ಹೀಗಾಗಿ ಜನ ಕೊರೊನಾ ಬಗ್ಗೆ ಎಚ್ಚರಿಕೆಯಿಂದ ಇರಬೇಕಾದದ್ದು ಮುಖ್ಯ.

ಏಕೆಂದರೆ ಹರಡುವಿಕೆ ವಿಚಾರದಲ್ಲಿ ಕೊರೊನಾ ಹೆಚ್ಚು ಅಪಾಯಕಾರಿ. ಒಂದೇ ಒಂದು ಪ್ರಕರಣವಿದ್ದರೂ, ಅದು ಐದು ಮಂದಿಗೆ ಹಬ್ಬಿಸಬಹುದು. ಹೀಗಾಗಿ ಕೊರೊನಾ ಸಂಪೂರ್ಣವಾಗಿ ತಹಬದಿಗೆ ಬರುವ ವರೆಗೆ ಅದರ ಬಗ್ಗೆ ಎಚ್ಚರಿಕೆಯಿಂದ ಇರಲೇಬೇಕಾದದ್ದು ಜನರ ಕರ್ತವ್ಯ. ಈಗ ಸಡಿಲಿಕೆ ಮಾಡಿದ್ದಾರೆ ಎಂಬ ಕಾರಣಕ್ಕೆ ಜನ ಸುಖಾಸುಮ್ಮನೆ ಬೀದಿಗೆ ಇಳಿಯಬಾರದು. ಆವಶ್ಯಕವಿದ್ದರಷ್ಟೇ ಮನೆಯಿಂದ ಆಚೆ ಬರಬೇಕು.

ಸದ್ಯ ಕಾರ್ಖಾನೆಗಳು ಮತ್ತು ಗಾರ್ಮೆಂಟ್‌ ಗಳಿಗೆ ಷರತ್ತಿನ ಮೇರೆಗೆ ಅನುಮತಿ ನೀಡಲಾಗಿದೆ. ಸರಕಾರಿ ಕಚೇರಿಗಳನ್ನು ಪ್ರಮುಖವಾದ ಮತ್ತು ಅತ್ಯಗತ್ಯ ಸೇವೆ ಒದಗಿಸುವ ಕಚೇರಿಗಳಿಗೆ ಅನುಮತಿ ನೀಡಲಾಗಿದೆ. ಉಳಿದ ಕಚೇರಿಗಳು, ಖಾಸಗಿ ಸಂಸ್ಥೆಗಳನ್ನು ತೆರೆಯಲು ಇನ್ನೂ ಅನುಮತಿ ನೀಡಿಲ್ಲ.

ಹೀಗಾಗಿ ಜನ ಮನೆಯಿಂದ ಆಚೆ ಬರಬೇಕಾಗಿಲ್ಲ. ಮನೆಯಿಂದ ಹೊರಗೆ ಬಂದರೂ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಮುಂದುವರಿಸಬೇಕು. ಗುಂಪು ಸೇರಬಾರದು. ಮದುವೆಯಲ್ಲಿ 40 ಜನ ಹಾಗೂ ಅಂತ್ಯ ಸಂಸ್ಕಾರದಲ್ಲಿ 5 ಜನರಿಗೆ ಅವಕಾಶ ನೀಡಲಾಗಿದೆ. ಸರಕಾರ ನೀಡಿರುವ ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಮದುವೆಯಲ್ಲಿ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.