ರಸ್ತೆ ಮಧ್ಯೆ ತೆಗ್ಗು-ವಾಹನ ಸಂಚಾರಕ್ಕೆ ಪರದಾಟ


Team Udayavani, Jun 12, 2021, 9:47 AM IST

ರಸ್ತೆ ಮಧ್ಯೆ ತೆಗ್ಗು-ವಾಹನ ಸಂಚಾರಕ್ಕೆ ಪರದಾಟ

ಚಿಂಚೋಳಿ: ತಾಲೂಕಿನ ಹುಲಸಗೂಡ- ಸಿರಸನಬುಗಡಿ ತಾಂಡಾ-ಮಂಡಗೋಳ ತಾಂಡಾ-ಚಂದನಕೇರಾ ಮಧ್ಯೆ ನಡೆಯುತ್ತಿರುವ ರಸ್ತೆ ಸುಧಾರಣೆ ಡಾಂಬರೀಕರಣ ಅಭಿವೃದ್ಧಿ ಕಾಮಗಾರಿಗೆ ತಡೆಯೊಡ್ಡಲು ತಾಲೂಕು ವಲಯ ಅರಣ್ಯ ಇಲಾಖೆಯವರು ರಸ್ತೆ ಮಧ್ಯೆ ತೆಗ್ಗು ತೋಡಿಸಿದ್ದರಿಂದ ವಾಹನಗಳ ಓಡಾಟಕ್ಕೆ ತೊಂದರೆ ಉಂಟಾಗಿದೆ.

ಹುಲಸಗೂಡ-ಚಂದನಕೇರಾ ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸುವುದಕ್ಕಾಗಿ 2015-16ನೇ ಸಾಲಿನಲ್ಲಿ ಪ್ರಧಾನಮಂತ್ರಿ ಗ್ರಾಮೀಣ ಸಡಕ್‌ ಯೋಜನೆ ಅಡಿಯಲ್ಲಿ ಒಟ್ಟು 13 ಕಿ.ಮೀ. ರಸ್ತೆ ಸುಧಾರಣೆ ಮತ್ತು ಡಾಂಬರೀಕರಣಕ್ಕಾಗಿ ಒಂಭತ್ತು ಕೋಟಿ ರೂ. ನೀಡಲಾಗಿತ್ತು. ಈಗಾಗಲೇ ಹುಲಸಗೂಡ-ಮಂಡಗೋಳ ತಾಂಡಾದವರೆಗೆ ಒಟ್ಟು 6 ಕಿ.ಮೀ. ರಸ್ತೆ ಸಂಪರ್ಕ ಮತ್ತು ಡಾಂಬರೀಕರಣ ಕಾಮಗಾರಿ ಪೂರ್ಣ ವಾಗಿದೆ. ಆದರೆ ಮಂಡಗೋಳ- ಸಿರಸನಬುಗಡಿ ತಾಂಡಾ ಮಧ್ಯೆ ಇರುವ 2.5ಕಿಮಿ ರಸ್ತೆ ಸುಧಾರಣೆ ಡಾಂಬರೀಕರಣ ಕಾಮಗಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಬ್ರೇಕ್‌ ಹಾಕಿದ್ದಾರೆ.

ಮಂಡಗೋಳ ಮತ್ತು ಸಿರಸನ ಬುಗಡಿ ತಾಂಡಾ ಮಧ್ಯೆ ರಸ್ತೆ ಸುಧಾರಣೆಗೆ ಗುತ್ತಿಗೆದಾರನು ಅರಣ್ಯ ಇಲಾಖೆಗೆ 10 ಲಕ್ಷ ರೂ. ತುಂಬಿ ಅನುಮತಿ ಪಡೆದುಕೊಳ್ಳಲಾಗಿದೆ. ಆದರೆ ಸ್ಟೇಜ್‌ ಎರಡು ಅಪ್ರೂಲ್‌ ಆಗಿರುವುದರಿಂದ ಗುತ್ತಿಗೆದಾರನು ನೋಂದಣಿ ಮಾಡಿ ಕೊಳ್ಳದೇ ಇರುವುದರಿಂದ ರಸ್ತೆ ಕಾಮಗಾರಿಗೆ ಅಡಚಣೆ ಉಂಟಾಗಿದೆ. ಕಾಮಗಾರಿ ಪ್ರಾರಂಭಿಸಲು ಜಿಲ್ಲಾ ಅರಣ್ಯಾಧಿಕಾರಿ, ಶಾಸಕರು, ಸಂಸದರು ವಲಯ ಅರಣ್ಯಾಧಿಕಾರಿಗಳಿಗೆ ತಿಳಿಸಿದರೂ ರಸ್ತೆಗೆ ಹಾಕುವ ಮುರುಮ ಮತ್ತು ಕಂಕರ ಹೊತ್ತು ತರುವ ಟಿಪ್ಪರ್‌, ಲಾರಿಗಳನ್ನು ತಾಲೂಕು ವಲಯ ಅರಣ್ಯಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅಲ್ಲದೇ ರಸ್ತೆ ಸುಧಾರಣೆ ನಡೆಯದಂತೆ ರಸ್ತೆ ಮಧ್ಯೆ ತೆಗ್ಗು ತೋಡಿಸಿದ್ದಾರೆ ಎಂದು ಮುಖಂಡ ಚಂದನಕೇರಾ ಹಣಮಂತ ಪೂಜಾರಿ ಆಪಾದಿಸಿದ್ದಾರೆ.

ಹಿಂದುಳಿದ ಪ್ರದೇಶಕ್ಕೆ ಜನರ ಬೇಡಿಕೆಯಂತೆ ಶಾಸಕರು, ಸಂಸದರು ರಸ್ತೆ ಸಂಪರ್ಕಕ್ಕಾಗಿ ಪ್ರಯತ್ನಪಟ್ಟಿದ್ದಾರೆ. ಆದರೆ ಚಂದನಕೇರಾ-ಸಿರಸನಬುಗಡಿ ತಾಂಡಾ, ಮಂಡಗೊಳ ತಾಂಡಾ ಹುಲಸಗೂಡ ತಾಂಡಾದಿಂದ ಚಿಂಚೋಳಿ-ಕಲಬುರಗಿ ರಾಜ್ಯ ಹೆದ್ದಾರಿಗೆ ರಸ್ತೆ ಸಂಪರ್ಕ ಕಲ್ಪಿಸುವ ಬಹುದಿನಗಳ ಜನರ ಬೇಡಿಕೆ ಈಡೇರದಂತಾಗಿದೆ. ವಲಯ ಅರಣ್ಯಇಲಾಖೆ ಮತ್ತು ಗುತ್ತಿಗೆದಾರರ ಮಧ್ಯದ ಶೀಲತ ಸಮರದಿಂದಾಗಿ ಜನರಿಗೆ ರಸ್ತೆ ಸಂಪರ್ಕ ಭಾಗ್ಯ ಇಲ್ಲದಂತಾಗಿದೆ.

ಪ್ರಕ್ರಿಯೆ ಜಾರಿಯಲ್ಲಿ: ಪ್ರಧಾನಮಂತ್ರಿ ಗ್ರಾಮೀಣ ಸಡಕ್‌ ಯೋಜನೆ ಅಡಿಯಲ್ಲಿ ರಸ್ತೆ ಅಭಿವೃದ್ಧಿ ಕೆಲಸ ಮಾಡಲು ಅರಣ್ಯ ಇಲಾಖೆ ಸ್ಟೇಜ್‌ ಎರಡು ಅಪ್ರೂಲ್‌ ನೀಡಿದೆ. ಆದರೆ ಲಾಕ್‌ಡೌನ್‌ ಇರುವುದರಿಂದ ಅನುಮತಿಗೆ ಸ್ವಲ್ಪಮಟ್ಟಿಗೆ ವಿಳಂಬ ಆಗಿದೆ. ಸರ್ಕಾರದಿಂದ ಅನುಮತಿ ಪಡೆಯುವುದಕ್ಕಾಗಿ ನಡೆಯುತ್ತಿರುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಇಲಾಖೆ ಇಂಜಿನಿಯರ್‌ ತಿಳಿಸಿದ್ದಾರೆ.

ಮಂಡಗೊಳ-ಸಿರಸನಬುಗಡಿ ತಾಂಡಾಕ್ಕೆ ರಸ್ತೆ ಸಂಪರ್ಕ ಕಾಮಗಾರಿ ನಡೆಸಲು ಅರಣ್ಯಇಲಾಖೆ ನೀಡಿದ ಪರವಾನಗಿ ಹೊರತುಪಡಿಸಿ ಇನ್ನು 300 ಮೀಟರ್‌ ರಸ್ತೆಯನ್ನು ಮೀಸಲು ಅರಣ್ಯಪ್ರದೇಶದಲ್ಲಿ ಅರಣ್ಯ ಕಾಯ್ದೆ ಉಲ್ಲಂಘಿಸಿ, ಕಾನೂನು ವಿರುದ್ಧವಾಗಿ ಕೆಲಸ ನಡೆಯುತ್ತಿದೆ. ಆದ್ದರಿಂದ ಕಾಮಗಾರಿಗೆ ತಡೆಯೊಡ್ಡಿ ವಾಹನಗಳನ್ನು ಜಪ್ತಿ ಮಾಡಿ, ಪ್ರಕರಣ ದಾಖಲಿಸಲಾಗಿದೆ. ಇನ್ನುಳಿದ ಕಾಮಗಾರಿಗೆ ಸರಕಾರ ಅನುಮತಿ ನೀಡುವವರೆಗೆ ಯಾವುದೇ ಕೆಲಸ ನಡೆಸಲು ಅನುಮತಿ ನೀಡುವುದಿಲ್ಲ.-ಮಹಮ್ಮದ್‌ ಮುನೀರ್‌ ಅಹೆಮದ್‌, ವಲಯ ಅರಣ್ಯಾಧಿಕಾರಿ

 

-ಶಾಮರಾವ್‌ ಚಿಂಚೋಳಿ

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.