ಬೆಲೆಯೇರಿಕೆಯಾಗುತ್ತಿದ್ದರೂ ‘ಅಚ್ಚೇ ದಿನ್ ಆಯೇಗಾ’ ಎಂದು ಬಿಜೆಪಿ ಜಪ: ಕಾಂಗ್ರೆಸ್ ಆರೋಪ


Team Udayavani, Jun 12, 2021, 1:12 PM IST

hunasur

ಹುಣಸೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿರಂತರವಾಗಿ ಏರಿಸುವ ಮೂಲಕ ಕೊರೊನಾದಿಂದ ಸಂಕಷ್ಟದಲ್ಲಿರುವ ಜನರ ಮೇಲೆ ಗದಾ ಪ್ರಹಾರ ಮಾಡುತ್ತಿರುವ  ವಿರುದ್ಧ ಹುಣಸೂರು ಕಾಂಗ್ರೆಸ್ ಸಮಿತಿಯು ಶಾಸಕ ಎಚ್ ಪಿ ಮಂಜುನಾಥ್ ರವರ ನೇತೃತ್ವದಲ್ಲಿ ನಗರದ ಸಂವಿಧಾನ  ವೃತ್ತದ ಪೆಟ್ರೋಲ್ ಬಂಕ್ ಮುಂಭಾಗ 100-ನಾಟೌಟ್ ಹೆಸರಿನಲ್ಲಿ ಪ್ರತಿಭಟನೆ ನಡೆಸಿತು.

ಈ ವೇಳೆ ಶಾಸಕ ಎಚ್ ಪಿ ಮಂಜುನಾಥ್ ಮಾತನಾಡಿ  ಕೇಂದ್ರ ಸರ್ಕಾರವು ದಿನದಿಂದ ದಿನಕ್ಕೆ ತೈಲ ಬೆಲೆ ಹೆಚ್ಚಳ ಮಾಡಿ ಜನಸಾಮಾನ್ಯರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ತೈಲ ಬೆಲೆ ಜೊತೆ ಅಡಿಗೆ ಎಣ್ಣೆ ಸೇರಿದಂತೆ ದಿನನಿತ್ಯ ವಸ್ತುಗಳನ್ನು ಬೆಲೆ ಏರಿಕೆ ಮಾಡುತ್ತಿರುವುದು ದುರದೃಷ್ಟಕರ. ಅಧಿಕಾರಕ್ಕೆ ಬರುವ ಮೊದಲು  ಬಿಜೆಪಿಯ ಅಂದ ಭಕ್ತರು ಮೋದಿಗೆ ಜೈ, ಬಿಜೆಪಿಗೆ ಜೈ ಎನ್ನುತ್ತಿದ್ದು ಈಗ ಅಧಿಕಾರಕ್ಕೆ ಬಂದ 7 ವರ್ಷದಿಂದಲೂ  ಎಲ್ಲಾ ವಸ್ತುಗಳಿಗೆ ಬೆಲೆ ಏರಿಕೆ ಮಾಡುತ್ತಿದ್ದರೂ   ಬಿಜೆಪಿ ಅಂದ ಭಕ್ತರು ಈಗ ಕಣ್ಮುಚ್ಚಿ ಕುಳಿತು *ಅಚ್ಚೆ ದಿನ್ ಆಯೆಗಾ ಎಂದು ಕಣ್ಮುಚ್ಚಿ   ಕುಳಿತಿರುವುದು ದುರದೃಷ್ಟಕರ ಎಂದು ತಿಳಿಸಿ  ಕರೋನಾ ಸಂಕಷ್ಟ ನಡುವೆ ಕಾಂಗ್ರೆಸ್ ಪಕ್ಷವು ಜನಸಾಮಾನ್ಯರ ಪರ ಮೊದಲಿನಿಂದಲೂ ನಿಂತಿದ್ದು  ಈಗ ಹುಣಸೂರಿನಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ರಾಷ್ಟ್ರವ್ಯಾಪ್ತಿ ಕಾಂಗ್ರೆಸ್ ಪಕ್ಷವು ಬೆಲೆ ಏರಿಕೆ ವಿರುದ್ಧ ಬೃಹತ್ ಪ್ರತಿಭಟನೆ ಹೋರಾಟ ಮಾಡಲಿದೆ ಎಂದು ತಿಳಿಸಿದರು.

ನಂತರ ಪ್ರತಿಭಟನಾ ಸ್ಥಳದಿಂದ ಕಾಂಗ್ರೆಸ್ ಪಕ್ಷದ ಕಚೇರಿವರೆಗೂ ಸೈಕಲ್ ನಲ್ಲಿ ಪ್ರಯಾಣ ಬೆಳೆಸಿ ಪ್ರತಿಭಟನೆಗೆ ಸಾಥ್ ನೀಡಿದರು

ಈ ವೇಳೆ ನಗರಸಭೆ ಅಧ್ಯಕ್ಷರಾದ ಅನುಷಾ ರಘು ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರುಗಳಾದ ರಮೇಶ್ ,ನಾರಾಯಣ, ದೇವರಾಜ್ ಕಾರ್ಯಾಧ್ಯಕ್ಷ ಕೆಂಪೇಗೌಡ ಮುಖಂಡರಾದ ಹಂದನಹಳ್ಳಿ ಸೋಮಶೇಖರ್ ಉದ್ಯಮಿ ಅಮರನಾಥ್ ಕಲ್ಕುಣಿಕೆ ಶ್ರೀನಿವಾಸ್ ಸೇರಿದಂತೆ  ಕಾಂಗ್ರೆಸ್ ಪಕ್ಷದ ಎಲ್ಲಾ ಪದಾಧಿಕಾರಿಗಳು ನಗರಸಭೆ ಸದಸ್ಯರು ಗ್ರಾಮ ಪಂ ಸದಸ್ಯರು ಯುವಕಾಂಗ್ರೆಸ್ ಹಾಗೂ ಮಹಿಳಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು  ಸ್ನೇಹಜೀವಿ  ಬಳಗ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.