ಮತ್ತೆ ತೈಲೋತ್ಪನ್ನ ದರ ಹೆಚ್ಚಳ; ಮೊದಲ ಬಾರಿಗೆ 100 ರೂಪಾಯಿಯತ್ತ ದಾಪುಗಾಲಿಟ್ಟ ಡೀಸೆಲ್ ಬೆಲೆ
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 97.69 ರೂಪಾಯಿ, ಡೀಸೆಲ್ ಬೆಲೆ ಲೀಟರ್ ಗೆ 91.92 ರೂಪಾಯಿಗೆ ಹೆಚ್ಚಳವಾಗಿದೆ.
Team Udayavani, Jun 14, 2021, 10:41 AM IST
ನವದೆಹಲಿ/ಬೆಂಗಳೂರು: ಇಂಧನ ಬೆಲೆ ಸೋಮವಾರ(ಜೂನ್ 14) ಮತ್ತೆ ಹೆಚ್ಚಳವಾದ ಪರಿಣಾಮ ಡೀಸೆಲ್ ಬೆಲೆಯೂ ಲೀಟರ್ ಗೆ ನೂರು ರೂಪಾಯಿಗೆ ಸಮೀಪಿಸಿದೆ. ಅದೇ ರೀತಿ ಉದ್ಯಾನನಗರಿ ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್ ಬೆಲೆ 99.33 ರೂಪಾಯಿಗೆ ಏರಿಕೆಯಾಗಿದ್ದು, ನೂರು ರೂಪಾಯಿಯತ್ತ ದಾಪುಗಾಲಿರಿಸಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಭಾರೀ ಇಳಿಕೆ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 70,421 ಕೋವಿಡ್ ಪ್ರಕರಣ ಪತ್ತೆ, 3921 ಸಾವು
ದೇಶಾದ್ಯಂತ ಪೆಟ್ರೋಲ್ ಬೆಲೆ ಲೀಟರ್ ಗೆ ಇಂದು 29-30 ಪೈಸೆಯಷ್ಟು ಹೆಚ್ಚಳವಾಗಿದ್ದು, ಡೀಸೆಲ್ ಬೆಲೆ ಲೀಟರ್ ಗೆ 28-30ಪೈಸೆ ಏರಿಕೆಯಾಗಿದೆ ಎಂದು ರಾಜ್ಯ ಸ್ವಾಮಿತ್ವದ ಇಂಧನ ಮಾರಾಟಗಾರರ ಕಂಪನಿಯ ಪ್ರಕಟಣೆ ತಿಳಿಸಿದೆ. ಬೆಲೆ ಏರಿಕೆಯೊಂದಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತಷ್ಟು ಹೆಚ್ಚಳವಾದಂತಾಗಿದೆ.
ಬೆಂಗಳೂರಿನಲ್ಲಿ ಡೀಸೆಲ್ ಲೀಟರ್ ಗೆ 92.58 ರೂಪಾಯಿಗೆ ಏರಿಕೆಯಾಗಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ಬೆಲೆ 96.04 ರೂಪಾಯಿಯಾಗಿದ್ದು, ಡೀಸೆಲ್ ಲೀಟರ್ ಬೆಲೆ 87.28 ರೂಪಾಯಿಗೆ ಹೆಚ್ಚಳವಾಗಿದೆ ಎಂದು ವರದಿ ವಿವರಿಸಿದೆ.
ರಾಜಸ್ಥಾನದ ಶ್ರೀಗಂಗಾನಗರ್ ನಲ್ಲಿ ಡೀಸೆಲ್ ಲೀಟರ್ ಬೆಲೆ 100 ರೂಪಾಯಿಗಿಂತ ಹೆಚ್ಚಳವಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಡಾಖ್ ನಲ್ಲಿ ಪೆಟ್ರೋಲ್ ಲೀಟರ್ ಬೆಲೆ ನೂರು ರೂಪಾಯಿ ಮೀರಿರುವುದಾಗಿ ವರದಿ ತಿಳಿಸಿದೆ.
ಸ್ಥಳೀಯ ತೆರಿಗೆಗಳಾದ ವ್ಯಾಟ್ ಮತ್ತು ಸರಕು ಶುಲ್ಕದ ಆಧಾರದ ಮೇಲೆ ಪೆಟ್ರೋಲ್ , ಡೀಸೆಲ್ ಬೆಲೆ ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 102.58 ರೂಪಾಯಿ, ಡೀಸೆಲ್ ಬೆಲೆ ಲೀಟರ್ ಗೆ 94.70 ರೂಪಾಯಿಗೆ ಹೆಚ್ಚಳವಾಗಿದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 97.69 ರೂಪಾಯಿ, ಡೀಸೆಲ್ ಬೆಲೆ ಲೀಟರ್ ಗೆ 91.92 ರೂಪಾಯಿಗೆ ಹೆಚ್ಚಳವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ