ಜಗದ ಸಂಚಾರ ಮುಗಿಸಿದ ಸಂಚಾರಿ ವಿಜಯ್: ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ
Team Udayavani, Jun 14, 2021, 12:49 PM IST
ಬೆಂಗಳೂರು : ಅಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ನಟ ಸಂಚಾರಿ ವಿಜಯ್ ನಿಧನರಾಗಿದ್ದು ಇನ್ನಷ್ಟೇ ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಹೊರ ಬರಬೇಕಿದೆ.
ಸಂಚಾರಿ ವಿಜಯ್ ಕೊನೆಯುಸಿರೆಳೆದಿದ್ದಾರೆ ಎಂದು ಟ್ವೀಟ್ ಮಾಡುವ ಮೂಲಕ ನಟ ಕಿಚ್ಚ ಸುದೀಪ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಸುದೀಪ್ ಟ್ವೀಟ್ :
ಸಂಚಾರ ವಿಜಯ್ ಕೊನೆಯುಸಿರೆಳೆದಿದ್ದಾರೆ ಎಂಬುದನ್ನು ಒಪ್ಪಲು ಬಹಳ ಕಷ್ಟವಾಗುತ್ತಿದೆ. ಲಾಕ್ಡೌನ್ಗೂ ಮೊದಲು ಕೆಲವು ಬಾರಿ ಅವರನ್ನ ಭೇಟಿಯಾಗಿದ್ದೆ. ಎಲ್ಲರೂ ಅವರ ಮುಂಬರುವ ಚಿತ್ರಕ್ಕಾಗಿ ನಿರೀಕ್ಷಿತರಾಗಿದ್ದರು.. ಅದು ರಿಲೀಸ್ಗೆ ಕಾಯುತ್ತಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು ಎಂದಿದ್ದಾರೆ.
( ಜೂನ್ 12) ರಂದು ರಾತ್ರಿ ಈ ಅಪಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆಸ್ಪತ್ರೆಗೆ ಕರೆ ತಂದಾಗಲೆ ಅವರ ಸ್ಥಿತಿ ಗಂಭೀರವಾಗಿತ್ತು, ಸ್ಕ್ಯಾನ್ ಮಾಡಿದಾಗ ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವವಾಗುತ್ತಿತ್ತು.ಚಿಕಿತ್ಸೆಗೆ ಸ್ಪಂದಿಸದೆ ಇಂದು ಅವರು ನಿಧನರಾಗಿದ್ದಾರೆ.
ಆಸ್ಪತ್ರೆ ಮುಂದೆ ಮಾತಾನಾಡಿದ ವಿಜಯ್ ಸಹೋದರ ಸಿದ್ದೇಶ್ ,ಸಮಾಜದ ಒಳಿತಿಗಾಗಿ ಸಂಚಾರಿ ವಿಜಯ್ ದುಡಿಯುತ್ತಿದ್ದ ಹೀಗಾಗಿ ಅವನ ಅಂಗಾಂಗಗಳನ್ನ ದಾನ ಮಾಡಲು ನಿರ್ಧರಿಸಿದ್ದೇವೆ. ಅವನಿಲ್ಲ ಅನ್ನೋದನ್ನು ಕಲ್ಪಿಸಿಕೊಳ್ಳಲು ಆಗುತ್ತಿಲ್ಲ. ವೈದ್ಯರು ಹೇಳುವ ಪ್ರಕಾರ ಅವರ ನಾರ್ಮಲ್ ಡೆತ್ ಆದರೆ ಅಂಗಾಂಗ ದಾನವನ್ನೂ ಮಾಡೋದ್ದಕ್ಕೆ ಆಗುವುದಿಲ್ಲ ಇದರಿಂದ ನಾಲ್ಕು ಜನರಿಗೆ ಸಹಾಯವಾಗಿ ಅಂತ ಬಯಸುತ್ತೇವೆ ಎಂದು ಭಾವುಕರಾದರು.
ಅವನು ಬ್ರೈನ್ ಡೆಡ್ ಸ್ಟೇಜ್ ನಿಂದ ಹೊರಬರೋದು ಕಷ್ಟವಿದೆ.. ಪ್ರಶಸ್ತಿಗಳನ್ನು ಬದಿಗಿಟ್ಟು ಜನರೊಂದಿಗೆ ಬೆರೆಯುತ್ತಿದ್ದ ವ್ಯಕ್ತಿ. ಅವನು ನನಗೆ ಫ್ರೆಂಡ್ ಗೈಡ್ ಎಲ್ಲ ಆಗಿದ್ದ.ಅವನಿಲ್ಲದೆ ಇರುವುದನ್ನು ನನಗೆ ಕಲ್ಪಿಸಿಕೊಳ್ಳಲು ಆಗುತ್ತಿಲ್ಲ. ಕಷ್ಟದ ಸಮಯದಲ್ಲೂ ದಿನರಾತ್ರಿ ಎನ್ನದೆ ಬಡವರಿಗಾಗಿ ಸಹಾಯಕ್ಕೆ ನಿಲ್ಲುತ್ತಿದ್ದ ಎಂದು ಹೇಳುತ್ತಾ ಭಾವುಕರಾದರು.
ಬಣ್ಣದ ಲೋಕದಲ್ಲಿ ವಿಜಯ್:
‘ನಾನು ಅವನಲ್ಲ ಅವಳು’ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದಿರುವ ನಟ ಸಂಚಾರಿ ವಿಜಯ್, ಅಲ್ಲಮ, ವಿಲನ್, ಗೋಧಿ ಬಣ್ಣ ಸಾಧಾರಣ ಮೈಕಟ್ಟು,ಒಗ್ಗರಣೆ, ಕೃಷ್ಣ ತುಳಸಿ, ಕಿಲ್ಲಿಂಗ್ ವೀರಪ್ಪನ್, ಮುಂತಾದ ಅನೇಕ ಸಿನಿಮಾಗಳಲ್ಲಿ ತಮ್ಮ ನಟನ ಪ್ರತಿಭೆಯನ್ನು ತೋರಿಸಿದ್ದರು.
ಸ್ಯಾಂಡಲ್ ವುಡ್ ಮಾತ್ರವಲ್ಲದೆ ಕಾಲಿವುಡ್ ಚಿತ್ರರಂಗದಲ್ಲೂ ವಿಜಯ್ ನಟಿಸಿದ್ದಾರೆ. ಕೋವಿಡ್ ಮೊದಲ ಅಲೆಯಿಂದಾಗಿ ಆಗಿದ್ದ ಲಾಕ್ಡೌನ್ ತೆರೆವುಗೊಂಡ ನಂತರ ರಿಲೀಸ್ ಆಗಿದ್ದ ಸಿನಿಮಾ ಆಕ್ಟ್ 1978 ಚಿತ್ರದಲ್ಲೂ ನಟಿಸಿದ್ದಾರೆ. 2011ರಲ್ಲಿ ತೆರೆಕಂಡ ರಂಗಪ್ಪ ಹೋಗ್ಬಿಟ್ನಾ ಚಿತ್ರದ ಮೂಲಕ ಸಂಚಾರಿ ವಿಜಯ್ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ