ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಿ


Team Udayavani, Jun 14, 2021, 9:53 PM IST

14-11

ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್‌, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಡಾ| ವಿಜಯಮಹಾಂತೇಶ್‌ ದಾನಮ್ಮನವರ್‌ ಇತರೆ ಅಧಿಕಾರಿಗಳು ಭಾನುವಾರ ನಿಗದಿತ ಕೋವಿಡ್‌ ಆಸ್ಪತ್ರೆಗೆ (ಜಿಲ್ಲಾ ಚಿಗಟೇರಿ ಆಸ್ಪತ್ರೆ) ಭೇಟಿ ನೀಡಿ ಕೊರೊನಾ ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆ, ವಿವಿಧ ಸೌಲಭ್ಯಗಳು, ಆಸ್ಪತ್ರೆಯಲ್ಲಿನ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿದರು.

ಜಿಲ್ಲಾ ನಿಗದಿತ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್‌ ಸೋಂಕಿತರಿಗೆ ಒದಗಿಸಲಾಗುತ್ತಿರುವ ಚಿಕಿತ್ಸೆಯ ಪ್ರತಿ ಹಂತವನ್ನ ಕೂಲಂಕುಷವಾಗಿ ಪರಿಶೀಲನೆ ನಡೆಸಿದ ಅಧಿಕಾರಿಗಳ ತಂಡ, ಉತ್ತಮ ಚಿಕಿತ್ಸೆ ನೀಡಬೇಕು. ಯಾವುದೇ ಲೋಪವಾಗದಂತೆ ನಿಗಾ ವಹಿಸಬೇಕು ಎಂದು ಸೂಚಿಸಿತು.

ಆಸ್ಪತ್ರೆಯ ಹೊರಾಂಗಣ, ಒಳಾಂಗಣ, ಕೋವಿಡ್‌ ಚಿಕಿತ್ಸಾ ಕೊಠಡಿ ಇತರೆ ವಾರ್ಡ್‌ಗಳಲ್ಲಿನ ಸ್ಥಿತಿಗತಿಗಳ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗರಾಜ್‌, ಸರ್ಜನ್‌ ಡಾ| ಜಯಪ್ರಕಾಶ್‌ ಮತ್ತಿತರ ಅಧಿಕಾರಿಗಳೊಡನೆ ಚರ್ಚಿಸಲಾಯಿತು. ಸ್ವತ್ಛತೆ ಇತರೆ ವಿಷಯಗಳ ಬಗ್ಗೆ ಗಮನಹರಿಸುವಂತೆ ಸೂಚಿಸಲಾಯಿತು. ಮಹಾಮಾರಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರೊಡನೆ ಆಸ್ಪತ್ರೆಯಲ್ಲಿ ಇರುವಂತಹ ಸಂಬಂಧಿಕರು ಇತರರು ಅನಗತ್ಯವಾಗಿ ಓಡಾಡುತ್ತಿರುವುದು ಇತರೆ ಸಮಸ್ಯೆಗೆ ಕಾರಣವಾಗಬಹುದು.

ಹಾಗಾಗಿ ಅನಗತ್ಯವಾಗಿ ಓಡಾಡುವುದನ್ನ ನಿರ್ಬಂಧಿಸುವಂತೆ ಜಿಲ್ಲಾ ಆಸ್ಪತ್ರೆ ಅಧೀಕ್ಷಕ ಡಾ| ಜಯಪ್ರಕಾಶ್‌ ಅವರಿಗೆ ಸೂಚಿಸಲಾಯಿತು. ನಿಗದಿತ ಕೋವಿಡ್‌ ಆಸ್ಪತ್ರೆಯ ಎಲ್ಲ ವಾರ್ಡ್‌ಗಳನ್ನು ಒಂದು ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ನಡೆಸಲಾ ಯಿತು. ಆಸ್ಪತ್ರೆಯ ಹಿಂಭಾಗದಲ್ಲಿನ ತುರ್ತು ಚಿಕಿತ್ಸಾ ಕೊಠಡಿ, ಕೋವಿಡ್‌ ಫ್ಲೂ ಕೊಠಡಿ ವೀಕ್ಷಿಸಿದ ಅಧಿಕಾರಿಗಳ ತಂಡ, ಆಸ್ಪತ್ರೆಯಲ್ಲಿನ ಸೋಂಕಿತ ಸಂಬಂಧಿಕರು, ಸಾರ್ವಜನಿಕರೊಡಗೆ ಆಸ್ಪತ್ರೆಯಲ್ಲಿನ ಸ್ಥಿತಿಗತಿ, ಚಿಕಿತ್ಸೆ, ಸೌಲಭ್ಯಗಳ ಇತರೆ ವಿಚಾರಗಳ ಬಗ್ಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು. ರೋಗಿಗಳ ಸಂಬಂಧಿಕರು ಕೆಲ ವಿಚಾರದ ಬಗ್ಗೆ ಗಮನ ಸೆಳೆದರು.

ಜಿಲ್ಲಾ ಆಸ್ಪತ್ರೆಗೆ ಆಮ್ಲಜನಕ ಪೂರೈಸುವ ಘಟಕ, ಕೊಠಡಿಗಳ ಪರಿಶೀಲನೆ ನಡೆಸಲಾಯಿತು. ಆಕ್ಸಿಜನ್‌ ಲಭ್ಯತೆ, ಬಳ್ಳಾರಿ ಸಮೀಪದ ಜಿಂದಾಲ್‌ ಘಟಕದಿಂದ ಪೂರೈಕೆಯ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿಗೆ ಮಾಹಿತಿ ನೀಡಲಾಯಿತು. ಆಸ್ಪತ್ರೆಯಲ್ಲಿ ಎಷ್ಟು ಜಂಬೋ ಸಿಲಿಂಡರ್‌ ಇವೆ, ಯಾವ ರೀತಿ ಕೆಲಸ ನಡೆಯುತ್ತಿದೆ ಎಂದು ವಿವರ ನೀಡಲಾಯಿತು. ಆಸ್ಪತ್ರೆ ಆವರಣದಲ್ಲಿರುವ ಲಿಕ್ವಿಡ್‌ ಆಕ್ಸಿಜನ್‌ ಶೇಖರಣಾ ಘಟಕವನ್ನೂ ಪರಿಶೀಲಿಸಿದ ಅಧಿಕಾರಿಗಳ ತಂಡ, ಎಷ್ಟು ಖಾಲಿ ಇದೆ ಹಾಗೂ ಯಾವೆಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದರ ಕುರಿತಂತೆ ಚರ್ಚಿಸಿತು.

ಆಮ್ಲಜನಕ ಒಳಗೊಂಡಂತೆ ಅನೇಕ ವಿಷಯಗಳ ಬಗ್ಗೆ ವೈದ್ಯಾಧಿಕಾರಿಗಳ ಜೊತೆಗೆ ಕೂಲಂಕುಷವಾಗಿ ಚರ್ಚಿಸಿ, ಹಲವಾರು ಅಗತ್ಯ ಸಲಹೆ ನೀಡಲಾಯಿತು. ಸೋಂಕಿತರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಉತ್ತಮ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಸೋಂಕಿನ ಪ್ರಮಾಣ ಕಡಿಮೆ ಆಗುವತ್ತಲೂ ಶ್ರಮವಹಿಸ ಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿತು. ಡಾ| ಶಶಿಧರ, ಜಿಲ್ಲಾ ಆಸ್ಪತ್ರೆಯ ವೈದ್ಯರು, ವೈದ್ಯಕಿಯೇತರ ಸಿಬ್ಬಂದಿ ಇತರರು ಇದ್ದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.