ಎಲ್ಲರ ಅಭಿಪ್ರಾಯ ಪಡೆಯಿರಿ : ದಿಲ್ಲಿಯಲ್ಲಿ ಅರುಣ್ ಸಿಂಗ್ಗೆ ಬೆಲ್ಲದ ಮನವಿ
Team Udayavani, Jun 15, 2021, 7:10 AM IST
ಎಲ್ಲರ ಅಭಿಪ್ರಾಯ ಪಡೆಯಿರಿ : ದಿಲ್ಲಿಯಲ್ಲಿ ಅರುಣ್ ಸಿಂಗ್ಗೆ ಬೆಲ್ಲದ ಮನವಿ
ಬೆಂಗಳೂರು : ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರು ಭೇಟಿ ಸಮೀಪಿಸುತ್ತಿರುವಂತೆಯೇ ಸಿಎಂ ಪರ -ವಿರೋಧಿ ಬಣದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಎಲ್ಲ ಶಾಸಕರ ಅಭಿಪ್ರಾಯಗಳನ್ನು ಪ್ರತ್ಯೇಕವಾಗಿ ಪಡೆದು ವರಿಷ್ಠರಿಗೆ ವರದಿ ನೀಡಿ ಎಂದು ಭಿನ್ನಮತೀಯರ ತಂಡ ಮನವಿ ಮಾಡಿದೆ.
ಹೊಸದಿಲ್ಲಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ ಶಾಸಕ ಅರವಿಂದ ಬೆಲ್ಲದ, ಎಲ್ಲ ಶಾಸಕರ ಅಭಿಪ್ರಾಯಗಳನ್ನು ಪ್ರತ್ಯೇಕವಾಗಿ ಪಡೆದು ವರಿಷ್ಠರಿಗೆ ವರದಿ ಸಲ್ಲಿಸುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಮೂರು ದಿನಗಳ ಹಿಂದೆ ಖಾಸಗಿ ಕಾರ್ಯದ ನೆಪದಲ್ಲಿ ದಿಲ್ಲಿಗೆ ದೌಡಾಯಿಸಿದ್ದ ಅರವಿಂದ ಬೆಲ್ಲದ, ಆರೆಸ್ಸೆಸ್ ನಾಯಕರು ಮತ್ತು ಬಿಜೆಪಿಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದಾರೆ.
ಅಧಿಕೃತ ಸಭೆ ಇಲ್ಲ?
ಅರುಣ್ ಸಿಂಗ್ ಜೂ. 16ರಂದು 3 ದಿನಗಳ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಶಾಸಕರ ಜತೆಗೆ ಅಧಿಕೃತ ಸಭೆ ಇರುವುದಿಲ್ಲ. ಶಾಸಕಾಂಗ ಸಭೆ ಕರೆಯುವಂತೆ ಸಿಎಂಗೆ ಸೂಚಿಸಿ ಎಂದು ಬಹುತೇಕ ಶಾಸಕರು ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ. ಆದರೂ ಅಧಿಕೃತ ಶಾಸಕಾಂಗ ಸಭೆ ಕರೆಯುವ ಸಾಧ್ಯತೆ ಕಡಿಮೆ. ಅರುಣ್ ಸಿಂಗ್ ಜೂ. 15ರಂದು ಸಚಿವರ ಜತೆಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸೋಂಕು ನಿಯಂತ್ರಣಕ್ಕೆ ಸಚಿವರು ಕೈಗೊಂಡ ಕ್ರಮಗಳ ಮಾಹಿತಿ ಪಡೆಯಲಿದ್ದಾರೆ. ಸಂಪುಟ ಪುನಾ ರಚನೆಗೆ ತೀರ್ಮಾನಿಸಿದರೆ ಸ್ಥಾನ ತ್ಯಾಗಕ್ಕೂ ಸಿದ್ಧರಾಗಿರಬೇಕು ಎಂಬ ಸಂದೇಶ ನೀಡುವ ಸಾಧ್ಯತೆ ಇದೆ. ಜೂ. 18ರಂದು ಬಿಜೆಪಿ ರಾಜ್ಯ ಘಟಕದ ಕೋರ್ ಕಮಿಟಿ ಸಭೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ