ಸೋಂಕು ಏರಿಕೆಯಾಗದಂತೆ ಕ್ರಮವಹಿಸಿ
Team Udayavani, Jun 15, 2021, 3:32 PM IST
ಬೆಂಗಳೂರು: ನಗರದಲ್ಲಿ ಅನ್ಲಾಕ್ ಪ್ರಕ್ರಿಯೆ ಜಾರಿಗೊಳಿಸಿದ್ದು, ಕೋವಿಡ್-19 ಸೋಂಕು ನಿಯಂತ್ರಿಸಲು ಪಾಲಿಕೆಯ ಎಲ್ಲ ಜಂಟಿ ಆಯುಕ್ತರು,ಆರೋಗ್ಯಾಧಿಕಾರಿಗಳು ಕ್ರಮ ವಹಿಸಬೇಕು ಎಂದು ಬಿಬಿಎಂಪಿ ಮುಖ್ಯಆಯುಕ್ತರು ಗೌರವ್ ಗುಪ್ತ ಸೂಚಿಸಿದ್ದಾರೆ.
ಈ ಸಂಬಂಧ ಸೋಮವಾರ ಸುತ್ತೋಲೆ ಹೊರಡಿಸಿರುವ ಅವರು, ಲಾಕ್ಡೌನ್ ತೆರವಿನಲ್ಲಿಹಲವು ಅಗತ್ಯ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಹೀಗಾಗಿ, ಕೂಲಿ ಕಾರ್ಮಿಕರು ಸೇರಿದಂತೆಸಾವಿರಾರು ಜನರು ನಗರಕ್ಕೆ ಹಿಂದಿರುಗುತ್ತಿದ್ದಾರೆ.ಎಲ್ಲರಿಗೂ ಕಡ್ಡಾಯವಾಗಿ ಪರೀಕ್ಷೆ ಮಾಡಿಸಬೇಕು.
ಈಹಿನ್ನೆಲೆಯಲ್ಲಿ ಕೋವಿಡ್-19 ಪರೀಕ್ಷೆಯನ್ನು ತೀವ್ರಗೊಳಿಸಬೇಕು ಮತ್ತುಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಶಿಬಿರಗಳನ್ನು ಆಯೋಜಿಸಬೇಕು. 24ಗಂಟೆಯೊಳಗೆ ಪರೀಕ್ಷೆ ವರದಿ ಪಡೆಯಬೇಕು ಎಂದು ಆರೋಗ್ಯಾಧಿಕಾರಿಗಳಿಗೆತಾಕೀತು ಮಾಡಿದ್ದಾರೆ.
ಈ ಸಂಬಂಧ ಕೋವಿಡ್-19 ಸೋಂಕುಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲ ವಲಯ, ಪ್ರಾಥಮಿಕಆರೋಗ್ಯ ಕೇಂದ್ರ ವಾರ್ಡ್ ಮಟ್ಟದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.ಆಯಾ ವಲಯಗಳ ವ್ಯಾಪ್ತಿಯಲ್ಲಿ ನಾಗರಿಕರಿಗೆ ಜಾಗೃತಿ ಮೂಡಿಸಬೇಕು. ಈಸಂಬಂಧ ಕೂಡಲೇ ಪಾಲಿಕೆಯ ಎಲ್ಲ ಜಂಟಿ ಆಯುಕ್ತರು, ಆರೋಗ್ಯಾಧಿಕಾರಿಗಳು ಕಾರ್ಯೋನ್ಮುಖವಾಗಬೇಕು ಎಂದು ಆದೇಶಿಸಿದ್ದಾರೆ.