ಕೇಂದ್ರಕ್ಕೆ ಕೋವ್ಯಾಕ್ಸಿನ್ ನನ್ನು 150 ರೂ.ನಂತೆ ನೀಡಲು ಸಾಧ್ಯವಾಗುತ್ತಿಲ್ಲ: ಭಾರತ್ ಬಯೋಟೆಕ್

ಕೇಂದ್ರ ಸರ್ಕಾರಕ್ಕೆ ಪ್ರತಿ ಡೋಸ್ ಗೆ 150 ರೂ. ನಂತೆ ನೀಡುತ್ತಿರುವುದು ಸ್ಪರ್ಧಾತ್ಮಕ ಬೆಲೆಯಲ್ಲ : ಭಾರತ್ ಬಯೋಟೆಕ್ ಸಂಸ್ಥೆ

Team Udayavani, Jun 15, 2021, 5:21 PM IST

Rs 150 per Covaxin dose to govt not sustainable: Bharat Biotech justifies higher price to pvt sector

ನವ ದೆಹಲಿ : ಖಾಸಗಿ ವಲಯದಲ್ಲಿ ಇತರೆ ಕೋವಿಡ್ ಲಸಿಕೆಗಳಿಗಿಂತ ಹೆಚ್ಚಿನ ಬೆಲೆಯಲ್ಲಿ ಕೋವ್ಯಾಕ್ಸಿನ್ ಲಸಿಕೆಗಳು ಮಾರಾಟವಾಗುತ್ತಿರುವುದರ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ ಭಾರತ್ ಬಯೋಟೆಕ್ ಸಂಸ್ಥೆ ಆರೋಪಗಳಿಗೆ ಕಾರಣ ನೀಡುವುದರ ಮೂಲಕ ತನ್ನನ್ನು ತಾನು ಸಮರ್ಥಿಸಿಕೊಂಡಿದೆ.

ಕೇಂದ್ರ ಸರ್ಕಾರಕ್ಕೆ ತನ್ನ ಕೋವ್ಯಾಕ್ಸಿನ್ ಲಸಿಕೆಯ ಪ್ರತಿ ಡೋಸ್ ನನ್ನು  150 ರೂಪಾಯಿಗಳಿಗೆ ನೀಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ನಾವು ಖಾಸಗಿ ಆಸ್ಪತ್ರೆಗಳಿಗೆ ಹೆಚ್ಚಿನ ಬೆಲೆಗೆ ನೀಡುತ್ತಿದ್ದೇವೆ ಎಂದು ಭಾರತ್ ಬಯೋಟೆಕ್ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ : 17 ಜನ ಹೊರಗಿನಿಂದ ಬಂದಿದ್ದರಿಂದ ಸಮಸ್ಯೆಯಾಗಿದೆ ಎಂಬ ಈಶ್ವರಪ್ಪ ಮಾತು ಸರಿಯಲ್ಲ : ಪಾಟೀಲ್

ಕೋವ್ಯಾಕ್ಸಿನ್ ಲಸಿಕೆಯನ್ನು ಕೇಂದ್ರ ಸರ್ಕಾರಕ್ಕೆ ಪ್ರತಿ ಡೋಸ್ ಗೆ 150 ರೂ. ನಂತೆ ನೀಡುತ್ತಿರುವುದು ಸ್ಪರ್ಧಾತ್ಮಕ ಬೆಲೆಯಲ್ಲ. ಈ ಬೆಲೆಯಲ್ಲಿ ನಮಗೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಸಂಸ್ಥೆ ಹೇಳಿದೆ.

ಭಾರತದ ಖಾಸಗಿ ವಲಯದಲ್ಲಿ ಇತರ ಕೋವಿಡ್ ಲಸಿಕೆಗಳಿಗೆ ಹೋಲಿಸಿದರೆ ಕೋವ್ಯಾಕ್ಸಿನ್‌ ನ ಲಸಿಕೆಯ ಹೆಚ್ಚಿನ ಬೆಲೆಯನ್ನು ಸಮರ್ಥಿಸಿಕೊಂಡ ಭಾರತ್ ಬಯೋಟೆಕ್ ಸಂಸ್ಥೆ, ಕಡಿಮೆ ಖರೀದಿ ಪ್ರಮಾಣಗಳು, ಹೆಚ್ಚಿನ ವಿತರಣಾ ವೆಚ್ಚಗಳು ಮತ್ತು ಮೂಲಭೂತ ವ್ಯವಹಾರ ಕಾರಣಗಳು ಲಸಿಕೆಯ ಹೆಚ್ಚಿನ ಬೆಲೆಗೆ ಕಾರಣವಾಗಿವೆ ಎಂದು ತಿಳಿಸಿದೆ.

ಕೋವ್ಯಾಕ್ಸಿನ್ ಲಸಿಕೆಯ ಉತ್ಪಾದನೆಗೆ ಹಾಗೂ ಕ್ಲೀನಿಕಲ್ ಪ್ರಯೋಗಗಳಿಗಾಗಿ ಸಂಸ್ಥೆ ಸ್ವತಃ 500 ಕೋಟಿ ವೆಚ್ಚವನ್ನು ಭರಿಸಿದೆ. ಉತ್ಪನ್ನದ  ಅಭಿವೃದ್ಧಿಗೆ ಸಂಸ್ಥೆಯೇ ಪೂರ್ಣವಾಗಿ ಸಂಪನ್ಮೂಲಗಳ ಖರ್ಚು ವೆಚ್ಚಗಳನ್ನು ನೋಡಿಕೊಂಡಿದೆ. ಹಾಗಾಗಿ, ಇಷ್ಟು ಕಡಿಮೆ ಬೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಲಸಿಕೆಯನ್ನು ನೀಡಲು ಕಾರ್ಯ ಸಾಧ್ಯವಾಗುತ್ತಿಲ್ಲ. ಖಾಸಗಿ ವಲಯಗಳಿಗೆ ಆ ಕಾರಣದಿಂದಲೇ ಹೆಚ್ಚಿನ ಬೆಲೆಯಲ್ಲಿ ನೀಡಲಾಗುತ್ತಿದೆ ಎಂದು ಹೇಳಿದೆ.

ಸರಕುಗಳು ಮತ್ತು ಕಚ್ಚಾ ವಸ್ತುಗಳ ಬೆಲೆ, ಉತ್ಪನ್ನಗಳ ವೈಫಲ್ಯಗಳು, ಉತ್ಪನ್ನ ಅಭಿವೃದ್ಧಿ ವಿನಿಯೋಗಗಳು, ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಸಂಪೂರ್ಣ ಬಂಡವಾಳ ವೆಚ್ಚಗಳು, ಮಾರಾಟ ಮತ್ತು ವಿತರಣಾ ವೆಚ್ಚಗಳು, ಖರೀದಿ ಸಂಪುಟಗಳು ಮತ್ತು ಇತರ ನಿಯಮಿತ ವ್ಯವಹಾರ ವೆಚ್ಚಗಳ ಜೊತೆಗೆ ಬದ್ಧತೆಗಳ ಇರುವ ಕಾರಣದಿಂದಾಗಿ ಲಸಿಕೆಯ ಬೆಲೆಯಲ್ಲಿ ಸ್ವಲ್ಪ ಜಾಸ್ತಿ ಮಾಡಬೇಕಾಗಿದೆ ಎಂದು ಸಮರ್ಥಿಸಿಕೊಂಡಿದೆ.

ಇನ್ನು, ತನ್ನ ಉತ್ಪನ್ನದ ಶೇಕಡಾ 10 ಕ್ಕಿಂತ ಕಡಿಮೆ ಪ್ರಮಾಣದ ಲಸಿಕೆಗಳು ಖಾಸಗಿ ಆಸ್ಪತ್ರೆಗಳಿಗೆ ಸರಬರಾಜು ಮಾಡಲಾಗಿದೆ. ಉಳಿದ ಪ್ರಮಾಣದ ಲಸಿಕೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೀಡಲಾಗಿದೆ.

ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ 150 ರೂ, ನಂತೆ ತನ್ನ ಲಸಿಕೆಯನ್ನು ನೀಡಲು ಸಾಧ್ಯವಾಗುವುದಿಲ್ಲಿ ಎಂದು ಸಂಸ್ಥೆ ಹೇಳಿರುವುದಾಗಿ ವರದಿ ತಿಳಿಸಿದೆ.

ಇತರೆ ರಾಷ್ಟ್ರಗಳ ಉತ್ಪಾದನಾ ಗುತ್ತಿಗೆಯೂ ಕೂಡ ಕಡಿಮೆಯಿದೆ. ಹಾಗಾಗಿ ಲಸಿಕೆಯನ್ನು ಅಷ್ಟು ಕಡಿಮೆ ಬೆಲೆಯಲ್ಲಿ ಪೂರೈಸಲು ಕಾರ್ಯಸಾಧ್ಯವಾಗುವುದಿಲ್ಲವೆಂದು ಸಂಸ್ಥೆ ಮಾಹಿತಿ ನೀಡಿದೆ.

ಇದನ್ನೂ ಓದಿ : ಸಿಎಂ ಮುಂದುವರಿಯುವುದು ಬಿಡುವುದು ಆ ಕುಸ್ತಿಯ ಮೇಲೆ ಅವಲಂಬಿತ: ಸತೀಶ್ ಜಾರಕಿಹೊಳಿ

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.