“ಬ್ಯಾಂಕ್‌ ಖಾತೆ ಬ್ಲಾಕ್‌’ ಸಂದೇಶ: ಲಿಂಕ್‌ ಕಳುಹಿಸಿ ಒಟಿಪಿ ಪಡೆದು ಹಣ ದೋಚುವ ವಂಚಕರು!


Team Udayavani, Jun 16, 2021, 7:25 AM IST

banking frauds

ಮಂಗಳೂರು: “ನಿಮ್ಮ ಬ್ಯಾಂಕ್‌ ಖಾತೆ ಬ್ಲಾಕ್‌ ಆಗಿದೆ. ಕೂಡಲೇ ಅಗತ್ಯ ದಾಖಲೆಗಳನ್ನು (ಕೆವೈಸಿ) ಅಪ್‌ಡೇಟ್‌ ಮಾಡಿ. ಅದಕ್ಕಾಗಿ ಈ ಲಿಂಕ್‌ ಒತ್ತಿ’ ಎಂಬ ಸಂದೇಶದೊಂದಿಗೆ ವೆಬ್‌ಸೈಟ್‌ ಲಿಂಕ್‌ ಕಳುಹಿಸಿ ಗ್ರಾಹಕರ ಖಾತೆಯಿಂದ ಹಣ ದೋಚಿದ ಘಟನೆಗಳು ನಗರದ ಹಲವೆಡೆ ನಡೆದಿವೆ. ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಿನಲ್ಲಿ ಸಂದೇಶಗಳು ಬಂದಿದ್ದು ನಂಬಿದ ಗ್ರಾಹಕರು ಒಟಿಪಿ ನೀಡಿದ್ದಾರೆ. ನಗರದ ಬ್ಯಾಂಕೊಂದರ ಗ್ರಾಹಕರು 63,000 ರೂ.ಕಳೆದು ಕೊಂಡಿದ್ದಾರೆ. ಇನ್ನೂ ಕೆಲವರು ಇದೇರೀತಿ ಮೋಸ ಹೋಗಿದ್ದಾರೆ.

ವಂಚನೆ ಹೇಗೆ?

ಲಿಂಕ್‌ ಒತ್ತಿದ ಕೂಡಲೇ ಬ್ಯಾಂಕ್‌ನ ಅಧಿಕೃತ ಸೈಟ್‌ನಂಥದ್ದೇ ಒಂದು ಸೈಟ್‌ತೆರೆದು ಕೊಳ್ಳುತ್ತದೆ. ಅಲ್ಲಿ ನಿಮ್ಮ ಖಾತೆಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ನಮೂದಿಸುವಂತೆ ಸೂಚಿಸಲಾಗುತ್ತದೆ. ಅದು ತತ್‌ಕ್ಷಣ ವಂಚಕರ ಕೈಸೇರುತ್ತದೆ.ಅವರು ಬ್ಯಾಂಕ್‌ನ ಅಧಿಕೃತ ಸೈಟ್‌ನಲ್ಲಿ ನಿಮ್ಮ ಖಾತೆಯನ್ನು ತೆರೆಯುತ್ತಾರೆ. ಕೂಡಲೇ ಖಾತೆಗೆ ಲಿಂಕ್‌ ಮಾಡಿರುವ ನಿಮ್ಮ ಮೊಬೈಲ್‌ಗೆ ಒಟಿಪಿ ಬರುತ್ತದೆ. ವಂಚಕರು ಅದನ್ನು ಪಡೆದು ಹಣ ಲಪಟಾಯಿಸುತ್ತಾರೆ ಎಂದು ಸೈಬರ್‌ ಪರಿಣತರು ತಿಳಿಸಿದ್ದಾರೆ.

ತಿಳಿದಿರಲಿ… ಬ್ಯಾಂಕ್‌ನವರು ಎಂದೂ ಒಟಿಪಿ ಕೇಳುವುದಿಲ್ಲ

ನಮ್ಮ ಬ್ಯಾಂಕ್‌ನ ಕೆಲವು ಗ್ರಾಹಕರಿಗೂ ಇಂತಹ ಸಂದೇಶ, ಲಿಂಕ್‌ ಬಂದಿದೆ. ಈಗಾಗಲೇ ಜಾಗೃತಿ ಮೂಡಿಸಿರುವ ಪರಿಣಾಮವಾಗಿ ಹಲವು ಗ್ರಾಹಕರು ಕರೆ ಮಾಡಿ ವಿಚಾರಿಸಿದ್ದಾರೆ. ಒಂದಿಬ್ಬರು ಹಣ ಕಳೆದುಕೊಂಡಿರುವ ಮಾಹಿತಿ ಇದೆ. ಇಂತಹ ಸಂದರ್ಭದಲ್ಲಿ ತ್ವರಿತವಾಗಿ ಸ್ಪಂದಿಸಲು ನಮ್ಮ ಐಟಿ ಮತ್ತು ಡಿಜಿಟಲ್‌ ವಿಭಾಗವನ್ನು ಸನ್ನದ್ಧವಾಗಿರಿಸಿದ್ದೇವೆ. ಯಾವುದೇ ಬ್ಯಾಂಕ್‌ಗಳು ಕೆವೈಸಿಗಾಗಿ (ದಾಖಲೆಗಳ ದೃಢೀಕರಣ) ಮೊಬೈಲ್‌ ಲಿಂಕ್‌ ಕಳುಹಿಸುವುದಿಲ್ಲ, ಒಟಿಪಿ ಕೇಳುವುದಿಲ್ಲ. ಆದ್ದರಿಂದ ಯಾವುದೇ  ಬ್ಯಾಂಕ್‌ಗಳ ಖಾತೆದಾರರು ಯಾರಿಗೂ ಒಟಿಪಿ ನೀಡುವ ಅಗತ್ಯವೇ ಇರುವುದಿಲ್ಲ ಎಂದು ಎಸ್‌ಬಿಐ ಮಂಗಳೂರಿನಪ್ರಾದೇಶಿಕ ಪ್ರಬಂಧಕ ಹರಿಶಂಕರ್‌ ಅವರು “ಉದಯವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.

ಖಾತೆ ಬ್ಲಾಕ್‌ ಮಾಡಿಸಿದರು

ಕೆಲವು ಗ್ರಾಹಕರು ಲಿಂಕ್‌ ತೆರೆದಾಗ ಸಂಶಯಗೊಂಡು ಕೂಡಲೇ ಬ್ಯಾಂಕ್‌ಗೆ ಕರೆ ಮಾಡಿದ್ದರಿಂದ ವಂಚನೆಯ ವಿಚಾರ ಗೊತ್ತಾಯಿತು. ಲಿಂಕ್‌ ತೆರೆದ ಕಾರಣ ಅಪಾಯ ಬೇಡ ಎಂದು ಕೂಡಲೇ ನೆಟ್‌ ಬ್ಯಾಂಕಿಂಗ್‌ ಪಾಸ್‌ವರ್ಡ್‌ ಬದಲಾಯಿಸುವಂತೆ ಬ್ಯಾಂಕ್‌ನವರು ಸೂಚಿಸಿದ್ದಾರೆ. “ತತ್‌ಕ್ಷಣಕ್ಕೆ ಖಾತೆಯನ್ನು ಬ್ಲಾಕ್‌ ಮಾಡುವುದಾಗಿಯೂ ಮುಂದೆ ಖುದ್ದಾಗಿ ಬ್ಯಾಂಕ್‌ಗೆ ಆಗಮಿಸಿ ಬ್ಲಾಕ್‌ ತೆರವು ಮಾಡಿಸಿಕೊಳ್ಳಿ’ ಎಂದು ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.