ಶಕ್ತಿ ಇದ್ದರೆ ನಾನೇ ಸಿಎಂ ಆಗುವೆ ಎಂದು ಬಹಿರಂಗವಾಗಿ ಹೇಳಲಿ
Team Udayavani, Jun 16, 2021, 2:57 PM IST
ಧಾರವಾಡ: ಕೋವಿಡ್ ಸಂಕಷ್ಟದ ಸಮಯದಲ್ಲಿ ಕ್ಷೇತ್ರ ಜನರ ಹಿತಾಸಕ್ತಿ ಬಗ್ಗೆ ಕಾಳಜಿ ವಹಿಸಬೇಕಾದ ಶಾಸಕ ಅರವಿಂದ ಬೆಲ್ಲದ ಸಿಎಂ ಆಗಲು ದೆಹಲಿ ಸುತ್ತಾಟ ಕೈಗೊಂಡಿರುವುದು ದುರದೃಷ್ಟಕರ ಸಂಗತಿ. ಒಂದು ವೇಳೆ ಅವರಿಗೆ ಶಕ್ತಿ ಇದ್ದರೆ ನಾನೇ ಸಿಎಂ ಆಗುವುದಾಗಿ ಬಹಿರಂಗವಾಗಿ ಹೇಳಲಿ ಎಂದು ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಗುರುರಾಜ ಹುಣಸಿಮರದ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಗೆ ಹೋಗಿದ್ದರೂ ನಾನು ಹೋಗಿಲ್ಲ ಎಂದು ಹೇಳುತ್ತ ಬೆಲ್ಲದ ಜನರ ಹಾದಿ ತಪ್ಪಿಸುತ್ತಿದ್ದಾರೆ. ಮೊದಲೇ ಕ್ಷೇತ್ರದ ಜನರಿಗೆ ಸುಳ್ಳು ಹೇಳುತ್ತ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರದಲ್ಲಿ ಮಾಡಿಲ್ಲ. ಪಕ್ಷ ಕಟ್ಟದೆ ಕಾರ್ಯಕರ್ತರನ್ನು ತುಳಿದು ಶಾಸಕರಾಗಿ ಇದೀಗ ಮುಖ್ಯಮಂತ್ರಿಯಾಗಲು ಹೊರಟಿರುವ ಬೆಲ್ಲದ ಅವರು ಪಾಲಿಕೆ ಆಯುಕ್ತರಿಗೆ ಹೇಳಿ ಒಂದು ಕೆಲಸ ಮಾಡಲಿ ಎಂದು ಸವಾಲು ಹಾಕಿದರು.
ನಾಲ್ಕು ತಿಂಗಳಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಸದ್ಯ ಮಳೆಗಾಲ ಆರಂಭವಾಗಿದ್ದು, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರಗಳ ಕೊರತೆ ಇದೆ. ಈ ಬಗ್ಗೆ ತಲೆಕೆಡಿಸಿಕೊಳ್ಳದ ಶಾಸಕ ಅರವಿಂದ ಬೆಲ್ಲದ ದೆಹಲಿ, ಬೆಂಗಳೂರು ಸುತ್ತಾಠ ಬಿಟ್ಟು ಕ್ಷೇತ್ರದ ಜನರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದರು. ಶಾಂತವೀರ ಬೆಟಗೇರಿ, ರಾಜು ಅಂಬೋರೆ, ರಮಾನಾಥ ಶೆಣೈ, ಈರಣ್ಣ ಬಾರಕೇರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು
Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್ ಗರಿ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ