ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ : ನಟಿ ರಾಗಿಣಿ
Team Udayavani, Jun 16, 2021, 5:03 PM IST
ವಿಜಯಪುರ : ನನ್ನ ಮೇಲೆ ಜನರ ಪ್ರೀತಿ, ವಿಶ್ವಾಸವಿದೆ. ನಾವು ತಪ್ಪು ಮಾಡಿಲ್ಲವೆಂದರೆ ನಾವು ಟೆನ್ಷನ್ ಮಾಡಿಕೊಳ್ಳಬಾರದು. ಆದರೆ ಡ್ರಗ್ಸ್ ವಿಚಾರದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ ಎಂದು ಕನ್ನಡದ ಸಿನಿಮಾ ನಟಿ ರಾಗಿಣಿ ಹೇಳಿದ್ದಾರೆ. ಅಭಿಪ್ರಾಯಪಟ್ಟರು.
ಇಂದು ಮಾಧ್ಯಮಗಳ ಎದುರು ಮಾತನಾಡಿರುವ ಅವರು, ಬರೀ ಒಂದು ಕೇಸ್ ವಿಚಾರವಾಗಿ ಮಾತ್ರವಲ್ಲ. ಹೆಣ್ಮಕ್ಕಳು ಅಂದರೆ ಸಾಕು ಪ್ರತಿಯೊಂದು ವಿಚಾರದಲ್ಲೂ ಸಮಾಜದಲ್ಲಿ ಟಾರ್ಗೆಟ್ ಮಾಡಲಾಗುತ್ತದೆ. ಹೆಣ್ಮಕ್ಕಳನ್ನು ತುಂಬಾ ಈಜಿಯಾಗಿ ಟಾರ್ಗೆಟ್ ಮಾಡೋದು ಹವ್ಯಾಸವಾಗಿದೆ. ಬ್ಲೇಮ್ ಮಾಡೋ ಬದಲು ಎಲ್ಲರೂ ನಿಮ್ಮ ನಿಮ್ಮ ಕೆಲಸದಲ್ಲಿ ಕರೆಕ್ಟ್ ಆಗಿದ್ದರೆ ಸಾಕು ಎಂದರು.
ಇನ್ನು ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಕುರಿತು ಮಾತನಾಡಿದ ರಾಗಿಣಿ, ಕಾಸ್ಟಿಂಗ್ ಕೌಚ್ ಅನ್ನೋದು ನನ್ನ ಪ್ರಕಾರ ಒಂದು ಸಖತ್ ಸ್ಟುಪಿಡ್ ವರ್ಡ್. ನೀವು ನಡೆಸುವ ಜೀವನದ ಜರ್ನಿ ಮೇಲೆ ಅದು ಡಿಪೆಂಡ್ ಆಗಿರುತ್ತೆ. ಯಾವತ್ತೂ ಒಂದೇ ಕೈಯಲ್ಲಿ ಚಪ್ಪಾಳೆ ಆಗೋದಿಲ್ಲ. ಕಾಸ್ಟಿಂಗ್ ಕೌಚ್ ಬಗ್ಗೆ ನನ್ನ ಲೈಫ್ನಲ್ಲಿ ನನಗೆ ಎಕ್ಸ್ಪೀರಿಯನ್ಸ್ ಆಗಿಲ್ಲ. ಲೈಫ್ ನಲ್ಲಿ ಎರಡು ಥರದ ಜೀವನ ಇದೆ. ಒಂದು ಶಾರ್ಟ್ ಕಟ್, ಮತ್ತೊಂದು ಲಾಂಗ್ ಲೈಫ್. ಕಷ್ಟಪಟ್ಟರೆ ನಾವು ಬೆಳೀತಿವಿ, ಪ್ರತಿಯೊಂದು ಸ್ಟೆಪ್ ಬೈ ಸ್ಟೆಪ್ ಆಗುತ್ತದೆ. ಶಾರ್ಟ್ ಕಟ್ ತಗೊಂಡರೆ ಕೆಲವೊಮ್ಮೆ ರಾಂಗ್ ಪರ್ಸನ್ ಮೀಟ್ ಮಾಡಬೇಕಾಗುತ್ತೆ. ಅತೀ ಶೀಘ್ರದಲ್ಲಿ ನೇಮು, ಫೇಮು, ದುಡ್ಡು ಗಳಿಸೋದನ್ನ ಬಿಟ್ಟು ನಮ್ಮ ಕೆಲಸದ ಮೇಲೆ ವಿಶ್ವಾಸವಿಟ್ಟು, ನಾವು ಏನು ಮಾಡುತ್ತೇವೆ ಅನ್ನೋದರ ಮೇಲೆ ಫೋಕಸ್ ಮಾಡಬೇಕು. ಹನ್ನೆರಡು ವರ್ಷದಿಂದ ಇಂಡಸ್ಟ್ರೀಯಲ್ಲಿದ್ದೇನೆ. ನಾನು ಕಾಸ್ಟಿಂಗ್ ಕೌಚ್ ಬಗ್ಗೆ ನೋಡಿಲ್ಲ. ಯಾರಾದರೂ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿದರೆ ಬಹುಶಃ ಅವರು ಅಂತಹ ಸಂದರ್ಭ ಅನುಭವಿಸಿರಬಹುದು. ಅವರಿಗೆ ಆ ಥರ ಅನುಭವ ಆಗಿರಬೇಕು, ಅದರ ಹಿಂದೆ ಸಾಕಷ್ಟು ಕಾರಣಗಳು ಇರುತ್ತವೆ ಎಂದು ನಟಿ ರಾಗಿಣಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
MUST WATCH
ಹೊಸ ಸೇರ್ಪಡೆ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ