ವಿಶಾಖಪಟ್ಟಣಂ: ಪೊಲೀಸ್ ಎನ್ ಕೌಂಟರ್ ಗೆ ಆರು ಮಂದಿ ನಕ್ಸಲೀಯರು ಸಾವು, ಶಸ್ತ್ರಾಸ್ತ್ರ ವಶಕ್ಕೆ
ಘಟನೆ ಬಗ್ಗೆ ಬುಧವಾರ (ಜೂನ್ 16) ಬೆಳಗ್ಗೆ ಸಾರ್ವಜನಿಕವಾಗಿ ಬಹಿರಂಗಪಡಿಸಲಾಗಿದೆ ಎಂದು ವರದಿ ತಿಳಿಸಿದೆ.
Team Udayavani, Jun 16, 2021, 3:53 PM IST
ಹೈದರಾಬಾದ್: ಆರು ಮಂದಿ ನಕ್ಸಲೀಯರು ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿರುವ ಘಟನೆ ಬುಧವಾರ(ಜೂನ್ 16) ನಸುಕಿನ ವೇಳೆ ನಡೆದಿರುವುದಾಗಿ ಆಂಧ್ರಪ್ರದೇಶ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಮಹಿಳಾ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್; ಮಿಥಾಲಿ ರಾಜ್ ಪಡೆಯಲ್ಲಿ ಐವರು ಪದಾರ್ಪಣೆ
ವಿಶಾಖಪಟ್ಟಣಂ ಜಿಲ್ಲೆಯ ತೀಗಲಾಮೆಟ್ಟ ಅರಣ್ಯಪ್ರದೇಶದಲ್ಲಿ ಸಿಪಿಐ(ಮಾವೋವಾದಿ) ಮತ್ತು ಗ್ರೇಹೌಂಡ್ಸ್ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿರುವುದಾಗಿ ವಿಶಾಖ ಗ್ರಾಮೀಣ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ) ಕೃಷ್ಣ ರಾವ್ ಅವರು ತಿಳಿಸಿದ್ದಾರೆ.
ಎನ್ ಕೌಂಟರ್ ನಲ್ಲಿ ಮಹಿಳೆ ಸೇರಿದಂತೆ ಆರು ಮಂದಿ ನಕ್ಸಲೀಯರ ಶವ ಪತ್ತೆಯಾಗಿದ್ದು, ಎ.ಕೆ.47, ಎಸ್ ಎಲ್ ಆರ್, ಒಂದು ಕಾರ್ಬೈನ್ ಮತ್ತು ಮೂರು 303 ರೈಫಲ್ಸ್ ಅನ್ನು ಘಟನಾ ಸ್ಥಳದಲ್ಲಿ ವಶಪಡಿಸಿಕೊಂಡಿರುವುದಾಗಿ ರಾವ್ ಈ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಯಾವುದೇ ಪೊಲೀಸರು ಸಾವನ್ನಪ್ಪಿರುವ ಘಟನೆ ನಡೆದಿಲ್ಲ. ಎನ್ ಕೌಂಟರ್ ನಡೆದ ಘಟನೆ ಬಗ್ಗೆ ಬುಧವಾರ (ಜೂನ್ 16) ಬೆಳಗ್ಗೆ ಸಾರ್ವಜನಿಕವಾಗಿ ಬಹಿರಂಗಪಡಿಸಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!