ಭೀಮಾ ತೀರದಲ್ಲಿ ಚಿರತೆ ಹಾವಳಿ: ರೈತರು ಹೊಲದಲ್ಲಿ ಕಟ್ಟಿದ್ದ ಆಕಳು ಕೊಂದು ಭಕ್ಷಣೆ
Team Udayavani, Jun 16, 2021, 4:39 PM IST
ಸಾಂದರ್ಭಿಕ ಚಿತ್ರ
ವಿಜಯಪುರ: ಜಿಲ್ಲೆಯ ಭೀಮಾ ತೀರದ ಹಳ್ಳಿಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಆಹಾರಕ್ಕಾಗಿ ರೈತರ ಜಾನುವಾರುಗಳನ್ನು ಬಲಿ ಪಡೆಯುವ ಮೂಲಕ ಭೀತಿ ಮೂಡಿಸಿದೆ.
ಜಿಲ್ಲೆಯ ಆಲಮೇಲ ತಾಲೂಕಿನ ಬೊಮ್ಮನಹಳ್ಳಿ, ದೇವರನಾವದಗಿ ಗ್ರಾಮಗಳ ಹೊಲಗಳಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿರುವ ಚಿರತೆ, ಈಗಾಗಲೇ ಎರಡು ಆಕಳುಗಳನ್ನು ಬಲಿ ಪಡೆದಿದೆ. ಮಂಗಳವಾರ ತಡರಾತ್ರಿ ಈ ಪರಿಸರದಲ್ಲಿ ಸಂಚರಿಸಿದ ಚಿರತೆ, ರೈತರು ಜಮೀನುಗಳಲ್ಲಿ ಕಟ್ಟಿ ಹಾಕಿದ್ದ ಎರಡು ಆಕಳುಗಳ ಜೀವ ಪಡೆದಿದೆ.
ಇದನ್ನೂ ಓದಿ:‘ಅಜ್ಜಿಗೆ ಅರಿವೆ ಚಿಂತೆ,ಮೊಮ್ಮಗಳಿಗೆ ಡಾಬಿನ ಚಿಂತೆ’:ಅರುಣ್ ಸಿಂಗ್ ಭೇಟಿಗೆ ಕಾಂಗ್ರೆಸ್ ಲೇವಡಿ
ಜಾನುವಾರುಗಳನ್ನು ಹತ್ಯೆ ಮಾಡಿರುವ ಚಿರತೆ ಈ ಭಾಗದಲ್ಲಿ ದಟ್ಟವಾಗಿರುವ ಕಬ್ಬಿನ ಗದ್ದೆಗಳಲ್ಲಿ ನೆಲೆಯೂರಿದ್ದು, ರೈತರು, ಕೃಷಿ ಕಾರ್ಮಿಕರು ಕೃಷಿ ಚಟುವಟಿಕೆಗೆ ತೆರಳಲು ಭಯಪಡುವಂತೆ ಮಾಡಿದೆ.
ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಾನುವಾರುಗಳ ಮೇಲೆ ನಡೆದಿರುವ ದಾಳಿಯನ್ನು ಚಿರತೆ ದಾಳಿಮಾಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿರುವ ಮಾಜಿ ಶಾಸಕ ರಮೇಶ ಭೂಸನೂರ, ಅರಣ್ಯ ಅಧಿಕಾರಿಗಳು ತ್ವರಿತವಾಗಿ ಚಿರತೆಯನ್ನು ಸೆರೆ ಹಿಡಿದು ಜನರನ್ನು ಭಯ ಮುಕ್ತಗೊಳಿಸಿ ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ