ಚಾಮರಾಜನಗರ: ಸತತ 2ನೇ ದಿನವೂ ಡಬಲ್ ಡಿಜಿಟ್! ಬುಧವಾರ 73 ಪ್ರಕರಣ ದೃಢ
Team Udayavani, Jun 16, 2021, 7:37 PM IST
ಚಾಮರಾಜನಗರ: ಕೋವಿಡ್ ಎರಡನೇ ಅಲೆ ಆರಂಭವಾದ ಬಳಿಕ ಜಿಲ್ಲೆಯಲ್ಲಿ 700 ರವರೆಗೂ ಹೋಗಿದ್ದ ಪ್ರತಿದಿನದ ಪ್ರಕರಣಗಳ ಸಂಖ್ಯೆ ಎರಡು ಅಂಕಿಗಿಳಿದಿದ್ದು, ಬುಧವಾರ 73 ಪ್ರಕರಣಗಳು ವರದಿಯಾಗಿವೆ.
ಚಾಮರಾಜನಗರ ಪಟ್ಟಣದಲ್ಲಿ 5 ಪ್ರಕರಣಗಳು, ಗ್ರಾಮಾಂತರದಲ್ಲಿ 25, ಗುಂಡ್ಲುಪೇಟೆ ಪಟ್ಟಣದಲ್ಲಿ 2 ಹಾಗೂ ಗ್ರಾಮಾಂತರದಲ್ಲಿ 16, ಕೊಳ್ಳೇಗಾಲ ಪಟ್ಟಣದಲ್ಲಿ 3 ಹಾಗೂ ಗ್ರಾಮಾಂತರದಲ್ಲಿ 13, ಹನೂರು ಪಟ್ಟಣದಲ್ಲಿ ಶೂನ್ಯ ಹಾಗೂ ಗ್ರಾಮಾಂತರದಲ್ಲಿ 8 ಪ್ರಕರಣಗಳು ಮತ್ತು ಯಳಂದೂರು ಪಟ್ಟಣ ಹಾಗೂ ಗ್ರಾಮಾಂತರದಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.
ಎರಡನೇ ಅಲೆ ಆರಂಭವಾದ ಬಳಿಕ ಜಿಲ್ಲೆಯಲ್ಲಿ ಪ್ರತಿದಿನದ ಪ್ರಕರಣಗಳು ನಾಗಾಲೋಟದಿಂದ ಏರುತ್ತ 700ರವರೆಗೂ ತಲುಪಿದ್ದವು. ಕಳೆದ ಒಂದು ವಾರದಿಂದ 200, 150ರ ಆಸುಪಾಸಿನಲ್ಲಿದ್ದ ಪ್ರಕರಣಗಳು, ಮಂಗಳವಾರ 93ಕ್ಕೆ ಪ್ರಕರಣ ವರದಿಯಾಗಿದ್ದರೆ, ಬುಧವಾರ 73 ಪ್ರಕರಣಗಳು ದೃಢಪಟ್ಟಿವೆ. 2008 ಮಾದರಿಗಳನ್ನು ಪರೀಕ್ಷೆ ಮಾಡಿರುವುದು ವಿಶೇಷ.
ಜಿಲ್ಲೆಯಲ್ಲಿ ಬುಧವಾರ 1 ಸಾವಿನ ಪ್ರಕರಣ ವರದಿಯಾಗಿದೆ. 214 ಮಂದಿ ಗುಣಮುಖರಾಗಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಜಿಲ್ಲೆಯಲ್ಲಿ ಪ್ರಸ್ತುತ 1091 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 464 ಮಂದಿ ಇದುವರೆಗೆ ಮೃತಪಟ್ಟಿದ್ದಾರೆ. ಒಟ್ಟು 29903 ಮಂದಿಗೆ ಸೋಂಕು ದೃಢಪಟ್ಟಿದ್ದು, ಇವರಲ್ಲಿ 28228 ಮಂದಿ ಗುಣಮುಖರಾಗಿದ್ದಾರೆ.
ಕೋವಿಡ್ ಅಂಕಿ ಅಂಶ ಚಾಮರಾಜನಗರ
ಇಂದಿನ ಪ್ರಕರಣ: 73
ಇಂದು ಗುಣಮುಖ: 214
ಒಟ್ಟು ಗುಣಮುಖ: 28228
ಇಂದಿನ ಸಾವು: 01
ಒಟ್ಟು ಸಾವು: 464
ಸಕ್ರಿಯ ಪ್ರಕರಣಗಳು: 1091
ಒಟ್ಟು ಪ್ರಕರಣಗಳು: 29803
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ