ಅಕ್ರಮ ಮರಳು ಅಡ್ಡೆಗೆ ಡಿಸಿ-ಎಸ್ಪಿ ದಾಳಿ

­ನೂರಾರು ಟಿಪ್ಪರ್‌ ಅಕ್ರಮ ಮರಳು ದಾಸ್ತಾನು ಪತ್ತೆ

Team Udayavani, Jun 16, 2021, 8:31 PM IST

15gadag 7 (2)

ಮುಂಡರಗಿ: ಅಧಿಕಾರಿಗಳ ಎಚ್ಚರಿಕೆ ಮಧ್ಯೆಯೂ ತುಂಗಭದ್ರಾ ನದಿ ಪಾತ್ರದಲ್ಲಿರುವ ತಾಲೂಕಿನ 6-7 ಗ್ರಾಮಗಳಲ್ಲಿ ಅಕ್ರಮ ಮರಳು ಅಡ್ಡೆಗಳು ತಲೆ ಎತ್ತಿವೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳವಾರ ಜಂಟಿಯಾಗಿ ದಾಳಿ ನಡೆಸಿದ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಮತ್ತು ಎಸ್ಪಿ ಯತೀಶ್‌ ಎನ್‌. ಅವರು, ಅಕ್ರಮವಾಗಿ ಸಂಗ್ರಹಿಸಿದ್ದ ನೂರಾರು ಟಿಪ್ಪರ್‌ ಮರಳು ದಾಸ್ತಾನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ.

ತಾಲೂಕಿನ ಶಿಂಗಟಾಲೂರು, ಗಂಗಾಪೂರ, ಶೀರನಳ್ಳಿ, ಕೋರ್ಲಹಳ್ಳಿ ಹಾಗೂ ನದಿ ಪಾತ್ರದ 6-7 ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳ ನೇತೃತ್ವದ ತಂಡ, ನದಿ ಪಾತ್ರದಲ್ಲಿರುವ ಮರಳು ಅಡ್ಡೆಗಳನ್ನು ಪರಿಶೀಲಿಸಿತು. ಈ ವೇಳೆ ಹಲವೆಡೆ ಅಕ್ರಮವಾಗಿ 50-60 ಲೋಡ್‌ ಮರಳು ಸಂಗ್ರಹಿಸಿರುವುದನ್ನು ಪತ್ತೆ ಮಾಡಿದ ಅಧಿ ಕಾರಿಗಳು ಅದನ್ನು ವಶಕ್ಕೆ ಪಡೆದರು.

ಈ ಪೈಕಿ ಶಿಂಗಟಾಲೂರು ಗ್ರಾಮದ ಅಕ್ರಮ ಮರಳು ಸಂಗ್ರಹಕಾರರ ಮೇಲೆ ದಾಳಿ ನಡೆಸಿ 174 ಲಾರಿಗಳಷ್ಟು ಮರಳು ವಶಕ್ಕೆ ಪಡೆದಿದ್ದಾರೆ. ಸುಮಾರು 6 ಜೆಸಿಬಿ ಹಾಗೂ 20 ಟಿಪ್ಪರ್‌ಗಳ ನೆರವಿನಿಂದ ಅದನ್ನು ಸರಕಾರಿ ಮರಳು ಪಾಯಿಂಟ್‌ ಗೆ ಸಾಗಿಸಲಾಗಿದೆ. ಅಲ್ಲದೇ, ಅಕ್ರಮವಾಗಿ ಮರಳು ಸಂಗ್ರಹಿಸಿದವರ ಬಗ್ಗೆ ಮಾಹಿತಿ ಕಲೆ ಹಾಕಿ, ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಕ್ರಮ ಮರಳು ಅಭಾದಿತ: ತಿಂಗಳ ಹಿಂದಷ್ಟೇ ಮುಂಡರಗಿ ತಾಲೂಕಿನ ವಿವಿಧ ಮರಳು ಸ್ಟಾಕ್‌ ಯಾರ್ಡ್‌ಗಳಿಗೆ ಭೇಟಿ ನೀಡಿದ್ದರು. ಉಪವಿಭಾಗಾ  ಧಿಕಾರಿ ರಾಯಪ್ಪ ಹುಣಸಗಿ, ತಹಶೀಲ್ದಾರ್‌ ಆಶಪ್ಪ ಪೂಜಾರಿ ಹಾಗೂ ಪೊಲೀಸ್‌ ಅ ಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ತಂಡ ಸರಕಾರದ ಅನುಮತಿ ಪಡೆದಿರುವ ಮರಳು ಅಡ್ಡೆಗಳಿಗೆ ತೆರಳಿ ಪರಿಶೀಲನೆ ನಡೆಸಿತ್ತು. ಯಾವುದೇ ಕಾರಣಕ್ಕೂ ಅಕ್ರವಾಗಿ ಮರಳು ಸಂಗ್ರಹಿಸುವುದು, ಅಕ್ರವಾಗಿ ಸಾಗಿಸುವುದನ್ನು ಸಹಿಸುವುದಿಲ್ಲ. ಸರಕಾರ ಅನುಮತಿಸಿದ ಪ್ರದೇಶದಲ್ಲೇ ಮರಳು ತೆಗೆಯಬೇಕೆಂದು ಅಧಿಕಾರಿಗಳು ಖಡಕ್‌ ಎಚ್ಚರಿಕೆ ನೀಡಿದ್ದರು. ಆದರೆ, ಅಧಿಕಾರಿಗಳ ಸೂಚನೆಯನ್ನೂ ಲೆಕ್ಕಿಸದೇ ರಾಜಾರೋಷವಾಗಿ ನೂರಾರು ಲೋಡ್‌ ಮರಳು ಸಂಗ್ರಹಿಸಿದ್ದಾರೆ.

ತುಂಗಭದ್ರಾ ನದಿ ದಂಡೆಯ ಹೆಸರೂರು, ಕಕ್ಕೂರು, ಕೋರ್ಲಹಳ್ಳಿ, ಶೀರನಳ್ಳಿ, ಶಿಂಗಟಾಲೂರು, ಹಮ್ಮಿಗಿ, ಗುಮ್ಮಗೋಳ, ಬಿದರಹಳ್ಳಿ ಭಾಗದ 13 ಅಧಿಕೃತ ಮರಳು ಸಂಗ್ರಹಕಾರಕಗಳಿದ್ದು, ಅವುಗಳ ಸುತ್ತಲ-ಮುತ್ತಲ ಪ್ರದೇಶದಿಂದಲೇ ಅಕ್ರಮ ಮರಳು ಅಡ್ಡೆಗಳು ತಲೆ ಎತ್ತಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಅಕ್ರಮ ಮರಳುಗಾರಿಕೆಗೆ ಪ್ರಭಾವಿಗಳ ಅಭಯ ಹಸ್ತವಿದೆ ಎಂಬ ಆರೋಪಗಳೂ ಕೇಳಿ ಬಂದಿವೆ.

ಅಧಿಕಾರಿಗಳ ದಿಟ್ಟ ಹೆಜ್ಜೆ: ಆದರೆ, ತಾಲೂಕಿನ ವಿವಿಧೆಡೆ ಅಕ್ರಮವಾಗಿ ಅಪಾರ ಪ್ರಮಾಣದ ಮರಳು ರಾಶಿ ಹಾಕಿರುವ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ ಜಿಲ್ಲಾ ಧಿಕಾರಿ ಹಾಗೂ ಎಸ್ಪಿ ತಮ್ಮ ಅಧಿ ಕಾರಿಗಳ ಪಡೆಯೊಂದಿಗೆ μàಲ್ಡ್‌ಗಿಳಿದಿದ್ದಾರೆ. ಅಕ್ರಮ ಮರಳು ಸಂಗ್ರಹದ ಸುಳಿವಿನ ಮೇರೆಗೆ ವಿವಿಧೆಡೆ ದಾಳಿ ನಡೆಸಿ, ಅಕ್ರಮ ಬಯಲು ಮಾಡಿದ್ದಾರೆ. ನೂರಾರು ಟಿಪ್ಪರ್‌ ಮರಳನ್ನು ಸರಕಾರಿ ಪಾಯಿಂಟ್‌ಗೆ ಸಾಗಿಸುವ ಮೂಲಕ ಮರಳು ದಂಧೆಕೋರರಿಗೆ ಬಿಸಿ ಮುಟ್ಟಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ತಹಶೀಲ್ದಾರ್‌ ಆಶಪ್ಪ ಪೂಜಾರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ರಾಜೇಶ, ಸಿಪಿಐ ಸುನೀಲ್‌ ಸವದಿ ಸೇರಿದಂತೆ ಇತತರು ಹಾಜರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.