ನ್ಯಾನೋ ಯೂರಿಯಾ ಪರಿಸರ ಸ್ನೇಹಿ


Team Udayavani, Jun 16, 2021, 10:49 PM IST

16-20

ಭರಮಸಾಗರ: ಪ್ರಪಂಚದಲ್ಲೇ ಮೊಟ್ಟ ಮೊದಲ ಬಾರಿಗೆ ಇಫ್ಕೋ ಸಂಸ್ಥೆ ರೈತ ಮತ್ತು ಪರಿಸರ ಸ್ನೇಹಿ ನ್ಯಾನೋ ಯೂರಿಯಾವನ್ನು ಕರ್ನಾಟಕದಲ್ಲಿ ಪರಿಚಯಿಸುತ್ತಿದೆ ಎಂದು ಇಫ್ಕೋ ಸಂಸ್ಥೆಯ ಕ್ಷೇತ್ರಾಧಿಕಾರಿ ಲಕ್ಷ್ಮೀಶ್‌ ಹೇಳಿದರು.

ಸಮೀಪದ ಕಾಲಗೆರೆ ಗ್ರಾಮದ ಜಮೀನೊಂದರಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ನ್ಯಾನೋ ಯೂರಿಯಾ ದ್ರಾವಣ ಸಿಂಪಡಣೆಯ ಪ್ರಾತ್ಯಕ್ಷಿಕೆಯಲ್ಲಿ ಅವರು ಮಾತನಾಡಿದರು. ಒಂದು ಚೀಲ ಯೂರಿಯಾ ಗೊಬ್ಬರ ಬಳಕೆಗೆ ಬದಲಾಗಿ 500 ಎಂಎಲ್‌ ನ್ಯಾನೋ ಯೂರಿಯಾವನ್ನು ಬೆಳೆಗಳಿಗೆ ಸಿಂಪಡಣೆ ಮಾಡಿ ರೈತರು ಹೆಚ್ಚಿನ ಲಾಭ ಪಡೆದುಕೊಳ್ಳಬಹುದು. ಮೆಕ್ಕೆಜೋಳ ಸೇರಿದಂತೆ ಎಲ್ಲಾ ಬೆಳೆಗಳಿಗೆ ಇದನ್ನು ಬಳಸಬಹುದು. ಪರಿಸರಕ್ಕು ಹಾನಿಯಲ್ಲ. ಮನುಷ್ಯ, ಪ್ರಾಣಿ, ಜೇನುಹುಳು ಇತರೆ ಜೀವಿಗಳಿಗೆ ಈ ದ್ರಾವಣ ಅಪಾಯಕಾರಿಯಲ್ಲ. 50 ಕೆಜಿ ಯೂರಿಯಾ ಗೊಬ್ಬರ ಬಳಕೆ ಮಾಡಿದಾಗ ನೈಜವಾಗಿ ಶೇ. 30 ರಿಂದ 40 ಮಾತ್ರ ಉಪಯೋಗಕ್ಕೆ ಬರುತ್ತಿತ್ತು. ಉಳಿದಿದ್ದೆಲ್ಲ ಮಳೆ ನೀರಿಗೆ ಹರಿಯುವುದು ಇಲ್ಲವೇ ಬಿಸಿಲಿಗೆ ಆವಿಯಾಗುತ್ತಿತ್ತು. ದಪ್ಪ ಕಾಳಿನ ಗ್ಲಾನ್‌ಲಾರ್‌ ಯೂರಿಯಾ ಬೇಗ ಕರಗುತ್ತಿರಲಿಲ್ಲ. ಅದನ್ನು ಬೇಗ ಕರಗದಂತೆ ತಯಾರಿಸಲಾಗುತ್ತಿತ್ತು. ಶೇ. 80ಕ್ಕಿಂತ ಹೆಚ್ಚು ಪ್ರಮಾಣದ ನ್ಯಾಯೋ ಯೂರಿಯಾ ಸಿಂಡಪಣೆ ಮಾಡುವುದರಿಂದ ನಷ್ಟವಾಗದು ಎಂದರು.

ನ್ಯಾನೋ ಯೂರಿಯಾ ಸಿಂಪಡಣೆ ಮಾಡಿದಾಗ ಎಲೆಗಳ ಮೂಲಕ ಸ್ಟೊಮ್ಯಾಟೋ ಮೂಲಕ ನೇರವಾಗಿ ಗಿಡಕ್ಕೆ ಬಳಕೆಯಾಗುತ್ತದೆ. ಮಳೆ ಕಡಿಮೆ ಇದ್ದಾಗ ಒಂದು ಲೀಟರ್‌ ನೀರಿಗೆ 4 ಅಥವಾ 2 ಎಂಎಲ್‌ ಸೇರಿಸಿ ಸಿಂಪಡಿಸಬೇಕು. ಸಾರಜನಕದ ಅಂಶ ಇದರಲ್ಲಿದ್ದು, 25 ರಿಂದ 30 ದಿನದಲ್ಲಿ ಮೆಕ್ಕೆಜೋಳಕ್ಕೆ ಮೊದಲ ನ್ಯಾನೊ ಯೂರಿಯಾ ಸಿಂಪಡಣೆ ಮಾಡಬೇಕು.

40 ರಿಂದ 45 ದಿನಗಳ ಅವ ಧಿಯಲ್ಲಿ ಎರಡನೇ ಸಿಂಡಪಣೆ ಮಾಡಬೇಕು. 45 ದಿನಗಳ ಒಳಗೆ ನೀಡುವ ಗೊಬ್ಬರದ ಅಂಶಗಳು ಮಾತ್ರ ಉಪಯುಕ್ತವಾಗಿರುತ್ತದೆ. ಇದನ್ನು ಸಿಂಪಡಣೆ ಮಾಡಿದ ಮೇಲೆ ಯೂರಿಯಾ ಗೊಬ್ಬರ ಬಳಕೆ ಮಾಡುವಂತಿಲ್ಲ ಎಂದು ತಿಳಿಸಿದರು. ಜೂನ್‌ 25ರ ನಂತರ ಎಲ್ಲಾ ಸಹಕಾರ ಸಂಘ, ಗೊಬ್ಬರದ ಅಂಗಡಿಗಳಲ್ಲಿ 240 ರೂ.ಗೆ 500 ಎಂಎಲ್‌ನ ನ್ಯಾನೋ ಯೂರಿಯಾ ಲಭ್ಯವಾಗಲಿದೆ. ಒಂದು ಎಕರೆಗೆ ಅರ್ಧ ಲೀಟರ್‌ ಬಳಸಬಹುದು. ಮಳೆ ಕಡಿಮೆ ಇದ್ದಾಗ ಲೀಟರ್‌ಗೆ 2 ಎಂಎಲ್‌, ಮಳೆ ಜಾಸ್ತಿ ಇದ್ದಾಗ 4 ಎಂಎಲ್‌ ಬಳಕೆ ಮಾಡಬಹುದು ಎಂದರು.

ಇಫ್ಕೋ ಸಂಸ್ಥೆಯಿಂದ ಖರೀದಿಸಿದ ಯೂರಿಯಾ ಗೊಬ್ಬರ ಚೀಲ ಒಂದಕ್ಕೆ ನಾಲ್ಕು ಸಾವಿರದಂತೆ ಇನ್ಷೊರೆನ್ಸ್‌ ಇರುತ್ತದೆ. ಅಪಘಾತ ಹೊಂದಿದ ವ್ಯಕ್ತಿಯ ನಾಮಿನಿಗೆ 25 ಚೀಲಕ್ಕೆ ಒಂದು ಲಕ್ಷದವರೆಗೆ ಜೀವವಿಮೆ ಸೌಲಭ್ಯ ನೀಡಲಾಗುತ್ತದೆ. ಈ ಯೋಜನೆಯ ಲಾಭ ಪಡೆಯಲು ಕಡ್ಡಾಯವಾಗಿ ಗೊಬ್ಬರ ಖರೀದಿಸಿದ ರಸೀದಿಯನ್ನು ಹೊಂದಿರಬೇಕು ಎಂದು ಹೇಳಿದರು.

ಜಿಪಂ ಸದಸ್ಯ ಡಿ.ವಿ. ಶರಣಪ್ಪ, ಟಿಎಪಿಎಂಸಿ ಅಧ್ಯಕ್ಷ ಕೋಗುಂಡೆ ಮಂಜುನಾಥ್‌, ಬಿಜೆಪಿ ಮಂಡಲ ಅಧ್ಯಕ್ಷ ಶೈಲೇಶ್‌ಕುಮಾರ್‌, ತಾಪಂ ಸದಸ್ಯರಾದ ಕಾಲಗೆರೆ ಶೇಖರಪ್ಪ, ಎನ್‌. ಕಲ್ಲೇಶ್‌, ಕೃಷಿ ಇಲಾಖೆ ಜಂಟಿ ಉಪ ನಿರ್ದೇಶಕ ರಮೇಶ್‌ಕುಮಾರ್‌, ಸಹಾಯಕ ಕೃಷಿ ನಿರ್ದೇಶಕ ಚಂದ್ರ ಕುಮಾರ್‌, ಕೃಷಿ ಅ ಧಿಕಾರಿಗಳಾದ ಶ್ರೀನಿವಾಸ್‌ ಇತರರು ಇದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.