ದೇಗುಲ ಬಳಿ ಶಬ್ದ ಮಾಲಿನ್ಯಕ್ಕೆ ವಾಹನಗಳೇ ಕಾರಣ!


Team Udayavani, Jun 17, 2021, 2:28 PM IST

bangalore news

ಬೆಂಗಳೂರು: ನಗರದ ಕೆಲವೊಂದು ಧಾರ್ಮಿಕ ಕೇಂದ್ರಗಳ ಬಳಿ ಶಬ್ದ ಮಾಲಿನ್ಯ ಹೆಚ್ಚಾಗಲು ವಾಹನಗಳ ಸಂಚಾರ ಕಾರಣ ಎಂಬ ಪೊಲೀಸರ ಹೇಳಿಕೆಗೆ ಹೈಕೋರ್ಟ್‌ ಅಚ್ಚರಿ ವ್ಯಕ್ತಪಡಿಸಿದೆ.

ಸುಪ್ರೀಂಕೋರ್ಟ್‌ ಮಾರ್ಗಸೂಚಿಗಳ ಅನ್ವಯ ರಾಜ್ಯದ ಧಾರ್ಮಿಕ ಕೇಂದ್ರಗಳಲ್ಲಿ ಅನಧಿಕೃತವಾಗಿ ಧ್ವನಿ ವರ್ಧಕ ಬಳಸಿ ಶಬ್ದ ಮಾಲಿನ್ಯ ಉಂಟು ಮಾಡುತ್ತಿರುವವರ ವಿರುದ್ಧ ಕ್ರಮ ಜರುಗಿಸಲು ಆದೇಶಿಸುವಂತೆ ಕೋರಿ ಗಿರೀಶ್‌ ಭಾರದ್ವಾಜ್‌ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನುಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಅವರನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಈ ವೇಳೆ ನಗರ ಪೊಲೀಸ್‌ ಆಯುಕ್ತರಕಚೇರಿಯ ಗುಪ್ತಚರ ವಿಭಾಗದ ಡಿಸಿಪಿ ಸಲ್ಲಿಸಿದಪ್ರಮಾಣ ಪತ್ರವನ್ನು ನ್ಯಾಯಪೀಠ ಪರಿಶೀಲಿಸಿತು.ದೂರುಗಳಲ್ಲಿ ಹೇಳಲಾದ ಧಾರ್ಮಿಕ ಕೇಂದ್ರಗಳಸ್ಥಳದಲ್ಲಿ ಶಬ್ದ ಮಾಲಿನ್ಯ ಪ್ರಮಾಣ ಹೆಚ್ಚಿರಲುವಾಹನಗಳ ಸಂಚಾರ ಕಾರಣ ಎಂಬುದಾಗಿಪ್ರಮಾಣಪತ್ರದಲ್ಲಿ ಹೇಳಿರುವುದು ಅಚ್ಚರಿ ತಂದಿದೆ.ವಾಹನ ಸಂಚಾರ ಹೆಚ್ಚಿರುವ ಸಮಯದಲ್ಲಿ ಪರೀಕ್ಷೆಮಾಡಲಾಗಿದೆ. ಅದರ ಬದಲು ವಾಹನ ಸಂಚಾರವಿರಳವಾಗಿರುವ ಬೆಳಗಿನ ಅವಧಿಯಲ್ಲಿಪರೀಕ್ಷಿಸಬಹುದಾಗಿತ್ತಲ್ಲವೇ? ಎಂದು ನ್ಯಾಯಪೀಠಪ್ರಶ್ನಿಸಿತು.

ಡಿಸಿಪಿಗೆ ತರಾಟೆ: ಶಬ್ದ ಮಾಲಿನ್ಯ ನಿಯಂತ್ರಣನಿಯಮಗಳನ್ನು ಉಲ್ಲಂ ಸುವವರ ವಿರುದ್ಧ ಕ್ರಮಜರುಗಿಸುವ ಬದಲು ಶಬ್ದ ಮಾಲಿನ್ಯ (ನಿಯಂತ್ರಣ)ಕಾಯ್ದೆ-2020ರ ನಿಯಮಗಳನ್ನೇ ಮರುಪರಿಶೀಲಿಸುವ ಅಗತ್ಯವಿದೆ ಎಂದು ಪ್ರಮಾಣಪತ್ರಸಲ್ಲಿಸಿದ ಡಿಸಿಪಿ ಅವರನ್ನು ಹೈಕೋರ್ಟ್‌ ತೀವ್ರತರಾಟೆಗೆ ತೆಗೆದುಕೊಂಡಿತು.ಶಬ್ದ ಮಾಲಿನ್ಯ ಕಾಯ್ದೆಯ ನಿಯಮಗಳನ್ನುಉಲ್ಲಂ ಸುವವರನ್ನು ಶಿಕ್ಷಿಸುವ ಬದಲು ಕಾನೂನುಪಾಲಿಸುವಂತೆ ಮನವಿ ಮಾಡುತ್ತಿದ್ದೀರಿ.ಅನಧಿಕೃತವಾಗಿ ಧ್ವನಿವರ್ಧಕಗಳ ಬಳಕೆ ಕುರಿತುದೂರು ಬಂದಾಗ, ಅವುಗಳನ್ನು ಬಳಸಲುಅನುಮತಿ ಪಡೆಯಲಾಗಿದೆಯೋ ಅಥವಾಇಲ್ಲವೋ ಎಂಬುದನ್ನು ಪರಿಶೀಲಿಸಿಲ್ಲ.

ಪರಿಸರಸಂರಕ್ಷಣಾ ಕಾಯ್ದೆ -1986ರ ಪ್ರಕಾರ ತಪ್ಪಿತಸ್ಥರನ್ನುಪ್ರಾಸಿಕ್ಯೂಷನ್‌ಗೆ ಒಳಪಡಿಸದೆ ಸುಮ್ಮನೆ ಬಿಟ್ಟಿದ್ದೀರಿ.ಪ್ರಮಾಣ ಪತ್ರವನ್ನು ನೋಡಿದರೆ ಅನಧಿಕೃತ ಧ್ವನಿವರ್ಧಕಗಳ ಬಳಕೆಯನ್ನು ಡಿಸಿಪಿ ಒಪ್ಪಿಕೊಂಡಿದ್ದಾರೆಎಂದರ್ಥ. ಇನ್ನೂ ಡಿಜಿ-ಐಜಿಪಿ ಸೂಚನೆ ಇದ್ದರೂನಿಯಮ ಉಲ್ಲಂಘನೆ ಮಾಡಿದವರ ವಿರುದ್ಧಕಾನೂನು ಕ್ರಮ ಜರುಗಿಸಿಲ್ಲ ಎಂದು ಕಿಡಿ ಕಾರಿತು.ತರಾಟೆಗೆ ತೆಗೆದುಕೊಂಡಿತು.ಆಗ ಸರ್ಕಾರಿ ವಕೀಲರು, ಪ್ರಮಾಣ ಪತ್ರವನ್ನುಹಿಂಪಡೆದು ಹೊಸದಾಗಿ ಸಲ್ಲಿಸಲಾಗುವುದುಎಂದು ತಿಳಿಸಿದರು.

ಅದನ್ನು ಒಪ್ಪದ ನ್ಯಾಯಪೀಠವುಅರ್ಜಿ ಹಾಗೂ ಅರ್ಜಿ ಕುರಿತ ನ್ಯಾಯಾಲಯದಆದೇಶಗಳು, ಡಿಸಿಪಿಯ ಪ್ರಮಾಣಪತ್ರವನ್ನು ನಗರಪೊಲೀಸ್‌ ಆಯುಕ್ತರಿಗೆ ಒದಗಿಸಬೇಕು. ಅದೆನ್ನೆಲ್ಲಾಪರಿಶೀಲಿಸಿ ಬಳಿಕ ಮತ್ತು ಪ್ರಕರಣದಲ್ಲಿ ಪೋಲಿಸರುಮತ್ತು ಡಿಸಿಪಿಯ ತೋರಿರುವ ನಡೆಗಳ ಬಗ್ಗೆವಿವರಣೆ ನೀಡಿ ಆಯುಕ್ತರು ವೈಯಕ್ತಿಕವಾಗಿಜು.1ರೊಳಗೆ ಖುದ್ದು ಪ್ರಮಾಣಪತ್ರ ಸಲ್ಲಿಸಬೇಕು.ಶಬ್ದ ಮಾಲಿನ್ಯ ಬಗ್ಗೆ ದೂರು ದಾಖಲಾದ ಪೊಲೀಸ್‌ಠಾಣೆಗಳಿಗೆ ಶಬ್ದ ಮಾಲಿನ್ಯ ಅಳೆಯುವ ಮಾಪಕಒದಗಿಸಲಾಗಿದೆ? ಅವುಗಳು ಕಾರ್ಯ ನಿರ್ವಹಣೆಸ್ಥಿತಿಯಲ್ಲಿವೆ? ಅವುಗಳನ್ನು ಬಳಸುವ ತರಬೇತಿಪೊಲೀಸರಿಗೆ ಕಲ್ಪಿಸಲಾಗಿದೆಯೇ? ಎಂಬ ಬಗ್ಗೆವಿವರಣೆ ನೀಡುವಂತೆ ಆಯುಕ್ತರಿಗೆ ಸೂಚಿಸಿವಿಚಾರಣೆಯನ್ನು ಜು.2ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.