ಅಂಗನವಾಡಿಗೆ ಭೇಟಿ ನೀಡಿ ಮಕ್ಕಳ ಪಟ್ಟಿ ಪಡೆಯಿರಿ
Team Udayavani, Jun 18, 2021, 9:12 PM IST
ವಿಜಯಪುರ: ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಿಗೆ ಮತ್ತು ಗ್ರಾಪಂಗೆ ಭೇಟಿ ನೀಡಿ ಶಾಲೆಗೆ ದಾಖಲಾಗಲು ಅರ್ಹ ವಿದ್ಯಾರ್ಥಿಗಳ ಪಟ್ಟಿ ಪಡೆದುಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ನಿರ್ದೇಶಕ ರಘುವೀರ ಸೂಚಿಸಿದರು.
ಗುರುವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಪ್ರಸಕ್ತ ಶೈಕ್ಷಣಿಕ ವರ್ಷದ ಶೈಕ್ಷಣಿಕ ಚಟುವಟಿಕೆ ನಿರ್ವಹಣೆ ಕುರಿತು ಜಿಲ್ಲೆಯ ಎಲ್ಲ ಶಿಕ್ಷಣಾಧಿ ಕಾರಿಗಳಿಗೆ ಶೈಕ್ಷಣಿಕ ಚಟುವಟಿಕೆಗಳ ಕುರಿತು ನಿರ್ದೇಶನ ನೀಡಿದ ಅವರು, ಮಕ್ಕಳ ಪಟ್ಟಿಯನ್ನು ಶಾಲಾ ಸಂದರ್ಶನ ನೀಡಿದ ಅಧಿ ಕಾರಿಗಳಿಗೆ ತೋರಿಸಬೇಕು ಎಂದು ಸೂಚಿಸಿದರು. ಶಿಕ್ಷಣ ಇಲಾಖೆ ಆಯುಕ್ತರು ಈಗಾಗಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ಈಗಾಗಲೇ ಅಗತ್ಯ ಸೂಚನೆಗಳನ್ನು ನೀಡಿದ್ದು, ಅದನ್ನು ಪ್ರತಿಯೊಬ್ಬ ಶಿಕ್ಷಕರು ಪಾಲಿಸಬೇಕು.
ಯಾವ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಶಿಕ್ಷಣಕ್ಕಾಗಿ ವ್ಯಾಪಕ ಪ್ರಸಾರ ಮಾಡುವುದು ಈ ನಿಟ್ಟಿನಲ್ಲಿ ಬಿಇಒ, ಡೈಟ್ ಉಪನ್ಯಾಸಕರು ಹಾಗೂ ಬಿಆರ್ಸಿಗಳು ವಿಶೇಷ ಆಸಕ್ತಿ ವಹಿಸಬೇಕು ಎಂದರು. ಸರ್ಕಾರ ಶಾಲಾ ದಾಖಲಾತಿ ಮತ್ತು ಶಾಲಾ ಆರಂಭೋತ್ಸವ ಕುರಿತು ಮಾಹಿತಿ ಒದಗಿಸಿದ್ದು ಇದನ್ನು ಪ್ರತಿಯೊಬ್ಬ ಮುಖ್ಯ ಗುರುಗಳು ಅದರನ್ವಯ ಅನುಸರಿಸಿ ದಾಖಲಾತಿ ಪ್ರಕ್ರಿಯೆ ಮಾಡಿಕೊಳ್ಳಬೇಕು.
ದಾಖಲಾತಿ ಮತ್ತು ಶಾಲೆ ಆರಂಭದ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು ಹಾಗೂ ನೇರ ಹಾಗೂ ಆನ್ಲೈನ್ ತರಗತಿಗಳನ್ನು ನಡೆಸುವ ಬಗ್ಗೆ ಪೂರ್ವ ತಯಾರಿಯನ್ನು ಶಾಲಾ ಹಂತದಲ್ಲಿ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ