ಆಟೋ ಚಾಲಕರಿಗೆ ಆಹಾರ ಕಿಟ್‌ ವಿತರಣೆ


Team Udayavani, Jun 18, 2021, 10:15 PM IST

18-14

ಹಗರಿಬೊಮ್ಮನಹಳ್ಳಿ: ತಾಲೂಕಿನಲ್ಲಿ ಕೋವೀಡ್‌ ಲಸಿಕೆಗೆ ಕೊರತೆಯಿಲ್ಲ, ಈಗಾಗಲೇ 73ಸಾವಿರಕ್ಕೂ ಹೆಚ್ಚು ಜನ ವ್ಯಾಕ್ಸಿನ್‌ ಹಾಕಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ನೇಮರಾಜ ನಾಯ್ಕ ತಿಳಿಸಿದರು. ತಂಬ್ರಹಳ್ಳಿ ವ್ಯಾಪ್ತಿಯ ಆಟೋ ಚಾಲಕರಿಗೆ ಆಹಾರದ ಕಿಟ್‌ ವಿತರಿಸಿ ಅವರು ಮಾತನಾಡಿದರು. ಕೊರೊನಾ ಲಸಿಕೆಯನ್ನು ಸರಕಾರ ಸಮರ್ಪಕವಾಗಿ ವಿತರಿಸುತ್ತಿದೆ.

18 ವರ್ಷ ಮೇಲ್ಪಟ್ಟವರಿಗೆ ತಾಲೂಕಿನಲ್ಲಿ 4ಸಾವಿರಕ್ಕೂ ಹೆಚ್ಚು ಲಸಿಕೆ ಹಾಕಲಾಗಿದೆ. ಇಡೀ ರಾಜ್ಯದಲ್ಲಿ ಬಿಜೆಪಿ ಯುವ ಮೋರ್ಚಾದವರು ಸೇವಾ ಹಿ ಸಂಘಟನ್‌ ಎಂಬ ಕಲ್ಪನೆ ಇಟ್ಟುಕೊಂಡು ಬೂತ್‌ ಮಟ್ಟದಿಂದ ಲಸಿಕೆ ಹಾಕಿಸಿಕೊಳ್ಳುವಂತೆ ಮೊಬೈಲೈಜ್‌ ಮಾಡುತ್ತಿದ್ದಾರೆ. ಆದರೆ ತಹಶೀಲ್ದಾರರು ಇದನ್ನು ಟೀಕಿಸುತ್ತಿರುವುದು ಸಮಂಜಸವಲ್ಲ.

ನಮ್ಮ ಯುವಕರು ಬಿಜೆಪಿ ಬ್ಯಾನರ್‌ ಅಡಿ ಲಸಿಕೆ ಹಾಕಿಸುತ್ತಿಲ್ಲ ಎಂಬುದನ್ನು ತಹಶೀಲ್ದಾರರು ತಿಳಿಯಬೇಕಿದೆ. ಕಾಂಗ್ರೆಸ್‌ ನವರು ಲಸಿಕೆ ಹಾಕಿಸುವಂತೆ ಜಾಗೃತಿ ಮೂಡಿಸಲಿ ತಪ್ಪಲ್ಲ. ತಹಶೀಲ್ದಾರ್‌ ಶರಣಮ್ಮ ಕಾಂಗ್ರೆಸ್‌ ಶಾಸಕರ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ. ಪಟ್ಟಣದ ಹಳೆವೂರಿನಲ್ಲಿ ನಮ್ಮ ಕಾರ್ಯಕರ್ತರೇ ಲಸಿಕೆ ಹಾಕಿಸಿಕೊಳ್ಳಿ ಪಟ್ಟಣದ ಕಾಲೋನಿಗಳಲ್ಲಿ ಡಂಗೂರ ಹಾಕಿಸಿ ಜಾಗೃತಿ ಮೂಡಿಸಿದ್ದಾರೆ ಎಂದರು.

ಅಭಿವೃದ್ಧಿ ಕಡೆಗಣನೆ: ಸರಕಾರ ಅಭಿವೃದ್ಧಿಗೆ ಸಾಕಷ್ಟು ಹಣ ನೀಡಿದೆ. ಇಲ್ಲಿನ ಜನಪ್ರತಿನಿಧಿಗಳು ಬಳಕೆ ಮಾಡಿಕೊಳ್ಳುತ್ತಿಲ್ಲ. ಎಷ್ಟೋ ಕಡೆ ಹಳ್ಳಿಗಳಿಗೆ ಸಮರ್ಪಕ ರಸ್ತೆಯಿಲ್ಲ. ಶಾಸಕರು ಸ್ವಂತ ತೋಟದ ಮನೆಗೆ ಕೋಟಿ ರೂ. ವೆಚ್ಚದ ರಸ್ತೆ ನಿರ್ಮಿಸಿಕೊಳ್ಳುತ್ತಿದ್ದಾರೆ. ಇದು ಎಷ್ಟರಮಟ್ಟಿಗೆ ಸರಿ ಎಂದು ಶಾಸಕ ಭೀಮಾನಾಯ್ಕ ವಿರುದ್ಧ ಗುಡುಗಿದರು. ತಂಬ್ರಹಳ್ಳಿ ಚಿಲುಗೋಡು ಗ್ರಾಮದ ರೈತರ ಹೊಲಗಳಿಗೆ ನೀರುಣಿಸುವ ಕುದುರೆ ಕಾಲುವೆ ಯೋಜನೆಗೆ ಬಂದ ಅನುದಾನ ಶಾಸಕರ ನಿಷ್ಕಾಳಜಿಯಿಂದಾಗಿ ವಾಪಸ್‌ ಹೋಗಿದೆ.

ಇವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಇಂತಹ ಶಾಸಕರಿಗೆ ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದರು. ತಾಲೂಕಿನ 3500ಕಿಟ್‌ಗಳನ್ನು ಅಟೋ ಚಾಲಕರಿಗೆ ವಿತರಿಸಲಾಗುತ್ತಿದೆ. ಎಲ್ಲಾ ಬಿಜೆಪಿ ಕಾರ್ಯಕರ್ತರು ಸೇರಿ ಕಿಟ್‌ಗಳನ್ನು ವಿತರಿಸುತ್ತಿದ್ದೇವೆ ಎಂದು ತಿಳಿಸಿದರು. ಮಾಜಿ ಶಾಸಕ ಕೆ.ನೇಮರಾಜನಾಯ್ಕ ತಂಬ್ರಹಳ್ಳಿ ಹೋಬಳಿ ವ್ಯಾಪ್ತಿಯ 500ಕ್ಕೂ ಹೆಚ್ಚು ಅಟೋ ಚಾಲಕರಿಗೆ ಆಹಾರ ಕಿಟ್‌ ವಿತರಿಸಿರು.

ವೈರಸ್‌ನಿಂದಾಗಿ ಗ್ರಾಮದ ಮ್ಯಾಗಳಮನಿ ಬಸವರಾಜಪ್ಪನವರ ಮನೆಯೊಂದರಲ್ಲಿ ಮೂವರು ಮೃತಪಟ್ಟಿದ್ದರಿಂದ ಅವರ ಮನೆಗೆ ಭೇಟಿನೀಡಿ ಸಾಂತ್ವನ ಹೇಳಿದರು. ಜಿಪಂ ಸದಸ್ಯೆ ಶಾರದಮ್ಮ ಶೇಖರಪ್ಪ, ಗ್ರಾಪಂ ಸದಸ್ಯರಾದ ಮಡಿವಾಳ ಮಂಜುನಾಥ(ಹನಿ), ಸಂಡೂರು ಮೆಹಬೂಬ್‌ಬಾಷ, ಸಿದ್ದಾರೆಡ್ಡಿ, ಬಿಜೆಪಿ ಮುಖಂಡರಾದ ಭದ್ರವಾಡಿ ಚಂದ್ರಶೇಖರ, ಕೆ.ರೋಹಿತ್‌, ಎಸ್‌.ಎಂ.ಪ್ರಕಾಶ, ಗಂಗಾಧರಗೌಡ, ಸೊಬಟಿ ಹರೀಶ್‌, ಮೋರಿಗೇರಿ ವಿಶ್ವನಾಥ, ಕಡ್ಡಿ ಕೊಟ್ರೇಶ, ಕಿತೂ°ರು ಶಿವಕುಮಾರ, ಮಡಿವಾಳರ ಆನಂದ, ಬಿ.ನಿಂಗರಾಜ, ಪರಮೇಶ್ವರಪ್ಪ, ಬಾಳಿಹಣ್ಣಿ ಚನ್ನಪ್ಪ, ನರೇಗಲ್‌ ಕೊಟ್ರೇಶ, ಗಡಿಹಳ್ಳಿ ಪ್ರವೀಣ, ಹನಸಿ ರಂಗನಾಥ, ರಾಜು ಪಾಟೀಲ್‌, ಬಾಗಳಿ ವೆಂಕಟೇಶ, ಆನೇಕಲ್‌ ಕೊಟ್ರೇಶ, ಸಿದ್ದರಾಜು ಇತರರಿದ್ದರು.

ಟಾಪ್ ನ್ಯೂಸ್

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.