ವಾರಾಂತ್ಯ ಕರ್ಫ್ಯೂ: ವಿಟ್ಲ ಪೇಟೆ ಸಂಪೂರ್ಣ ಬಂದ್
Team Udayavani, Jun 19, 2021, 10:32 AM IST
ವಿಟ್ಲ : ವಿಟ್ಲ ಪಟ್ಟಣ ಪಂಚಾಯತ್ ಟಾಸ್ಕ್ ಫೋರ್ಸ್ ಸಮಿತಿಯು ಕೋವಿಡ್ ಸಾಂಕ್ರಾಮಿಕ ರೋಗ ಹರಡದಂತೆ ಶನಿವಾರ ಮತ್ತು ರವಿವಾರ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಿದ್ದು, ಶನಿವಾರ ವಿಟ್ಲ ಪೇಟೆ ಸಂಪೂರ್ಣ ಬಂದ್ ಆಗಿತ್ತು.
ಸಮಿತಿ ನಿರ್ಣಯಿಸಿದಂತೆ ಅಗತ್ಯ ವಸ್ತುಗಳಾದ ದಿನಸಿ, ತರಕಾರಿ, ಮಾಂಸದಂಗಡಿಗಳನ್ನೂ ಬಂದ್ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ ಯಾವುದೇ ಅಂಗಡಿಗಳು ಬಾಗಿಲು ತೆರೆದಿಲ್ಲ. ನಾಗರಿಕರು ಪೇಟೆಗೆ ಬರಲೇ ಇಲ್ಲ. ತುರ್ತು ಆವಶ್ಯಕತೆಗಾಗಿ ತೆರಳುವವರಿಗೆ ವಿನಾಯಿತಿ ನೀಡಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ 9 ಗಂಟೆವರೆಗೆ ಹಾಲಿನ ಅಂಗಡಿ ತೆರೆದಿತ್ತು. ಔಷಧಿ ಅಂಗಡಿ ಮಾತ್ರಗಳು ಎಂದಿನಂತೆ ಕಾರ್ಯಾಚರಿಸುತ್ತಿವೆ.
ವಿಟ್ಲದ ಮಂಗಳೂರು ರಸ್ತೆಯ ಬೊಬ್ಬೆಕೇರಿಯಲ್ಲಿ ರಸ್ತೆಯನ್ನು ಬ್ಯಾರಿಕೇಡ್ ಅಳವಡಿಸಿ ಬಂದ್ ಮಾಡಲಾಗಿದೆ. ಸರಿಯಾದ ಕಾರಣ ನೀಡಿದವರಿಗೆ ಮಾತ್ರ ತೆರಳಲು ಅವಕಾಶ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ